ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನ ನನ್ನ ತವರು ಮನೆ ಇದ್ದಂತೆ. ಈ ದೇವಳದ ಶುದ್ಧತೆ ನಿಜಕ್ಕೂ ಅದ್ಭುತವಾಗಿದೆ. ರಾಜ್ಯ, ಹೊರರಾಜ್ಯದಿಂದ ಬರುವ ಭಕ್ತರಿಗೆ ಕಿಂಚಿತ್ತು ಸಮಸ್ಯೆಯಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗುತ್ತದೆ ಎಂದು ಚಲನಚಿತ್ರ ಹಿರಿಯ ನಟಿ ಲಕ್ಷ್ಮೀ ಹೇಳಿದರು.
ಅವರು, ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ದೇವಳದ ಪುರೋಹಿತ ಸುರೇಶ ಭಟ್ ಅವರಿಗೆ ದೇವರ ಪ್ರಸಾದ ನೀಡಿ ಗೌರವಿಸಿದರು. ಹಿರಿಯ ನಟಿ ಲಕ್ಷ್ಮೀ ಅವರು, ದಕ್ಷಿಣ ಭಾರತದ ಕನ್ನಡ, ತೆಲುಗು, ತಮಿಳು, ಮಲೆಯಾಳಿ ಹಾಗೂ ಹಿಂದಿ ಚಲನಚಿತ್ರಗಳಲ್ಲಿ ಅಭಿನಯಿಸಿದ ಅವರು ಪಂಚಭಾಷಾ ನಟಿ ಎಂಬ ಖ್ಯಾತಿ ಹೊಂದಿದ್ದಾರೆ.