Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಗೀತದೊಂದಿಗೆ ಧನ್ವಂತರಿ ಯಾಗ. ಚಿತ್ರಕೂಟ ಆಯುರ್ವೇದಲ್ಲಿ ನಡೆಯಿತು ವಿನೂತನ ಪ್ರಯೋಗ
    Uncategorized

    ಸಂಗೀತದೊಂದಿಗೆ ಧನ್ವಂತರಿ ಯಾಗ. ಚಿತ್ರಕೂಟ ಆಯುರ್ವೇದಲ್ಲಿ ನಡೆಯಿತು ವಿನೂತನ ಪ್ರಯೋಗ

    Updated:26/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತ ಕಲಶಹಸ್ತಾಯ… ಹೀಗೆ ಸಂಗೀತದ ಲಯದೊಂದಿಗೆ ಮಂತ್ರೋಚ್ಛರಿಸಿ ಧನ್ವಂತರಿ ಯಾಗ ನಡೆಸಿದ ವಿನೂತನ ಪರಿಕಲ್ಪನೆಗೆ ತಾಲೂಕಿನ ಆಲೂರು ಚಿತ್ರಕೂಟ ಆಯುವೇದ ಚಿಕಿತ್ಸಾಲಯ ಸಾಕ್ಷಿಯಾಗಿದೆ.

    Click Here

    Call us

    Click Here

    ಪ್ರಪಂಚದಾದ್ಯಂತ ನಡೆಯುತ್ತಿರುವ ಸಂಗೀತ ಥೆರಪಿಯಿಂದ ಪ್ರೇರಿತರಾಗಿ ವಿಶ್ವದಲ್ಲಿಯೇ ಮೊದಲ ಭಾರಿಗೆಂಬಂತೆ ಮಂತ್ರದ ಜೊತೆಗೆ ಸಂಗೀತ ಸೇರಿಸಿ ಧನ್ವಂತರಿ ಹೋಮ ನಡೆಸುವ ನಿಶ್ಚಯವನ್ನು ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಪ್ರವರ್ತಕ ವೈದ್ಯ ಡಾ. ರಾಜೇಶ್ ಬಾಯರಿ – ಡಾ. ಅನುಲೇಖಾ ಬಾಯರಿ ಅವರು ಕೈಗೊಂಡರು. ಹೋಮದ ಕಿರಣ ಹಾಗೂ ಸಂಗೀತದ ತರಂಗಗಳು ಅನಾರೋಗ್ಯ ಪೀಡಿತರ ಮೇಲೆ ಬೀರಬಹುದಾದ ಪರಿಣಾಮದ ಅಧ್ಯಯನ ಮಾಡುವ ಉದ್ದೇಶದೊಂದಿಗೆ ಶ್ರೀ ಶಂಕರಾಭರಣ ಧರ್ಮ ಸಂಸ್ಕೃತಿ ಪ್ರತಿಷ್ಠಾನಮ್ ಅವರ ಮುಂದಾಳತ್ವದಲ್ಲಿ ‘ವೇದನಾದೌಷದ ತರಂಗಿಣಿ’ ಎನ್ನುವ ಕಾರ್ಯಕ್ರಮದ ಆಯೋಜಿಸಿದರು. ವೇದ ಮಂತ್ರಗಳನ್ನು ಪಠಿಸುವ ಜೊತೆಗೆ ಹಾರ್ಮೋನಿಯಂ ಮೂಲಕವೂ ಕರ್ಣಾಟಕಿ ಸಂಗೀತದ ರೇವತೀ ರಾಗ ಹಾಗೂ ಹಿಂದುಸ್ಥಾನಿ ಸಂಗೀತದ ಭೈರಾಗಿ ಬೈರವ ರಾಗದ ಪನಿಸರಿ ಎಂಬ ನಾಲ್ಕು ಸ್ವರವನ್ನು ಮಂತ್ರಗಳನ್ನು ನುಡಿಸಲಾಯಿತು. ಆಜ್ಯ, ಪಾಯಸ, ಅಮೃತಬಳ್ಳಿ ಸಮಿತ್, ಅಮಲಕ, ದೂರ್ವೆ ಹೀಗೆ ಐದು ದ್ರವ್ಯಗಳನ್ನು ಹೋಮಕ್ಕೆ ಆಹುತಿಯಾಗಿ ನೀಡಲಾಗಿದೆ.

    Watch Video

    ನಿಟ್ಟೂರು ಕರ್ಕಮುಡಿ ಶ್ರೀ ಶಂಕರಾಭರಣ ಧರ್ಮ ಸಂಸ್ಕೃತಿ ಪ್ರತಿಷ್ಠಾನಮ್ ವಿದ್ವಾನ್ ಬಿ. ಎಂ. ಮಂಜುನಾಥ ಅಡಿಗ ಅವರ ನಿರ್ದೇಶನದಲ್ಲಿ ವೇ. ಮೂ. ಸುದರ್ಶನ ಭಟ್ ಮಡಿಕೆ, ಋತ್ವಿಜರಾದ ವೇ. ಮೂ. ಸುಧೀರ ಭಟ್ ಕಂಚಿಕೆರೆ, ವೇ.ಮೂ. ಪ್ರವೀಣ ಭಟ್ ಬಾಸ್ರಿ ಮೂಲಕ ವಿನೂತನ ಸಂಗೀತದೊಂದಿಗೆ ಧನ್ವಂತರಿ ಹೋಮ ಚಿತ್ರಕೂಟದ ವಠಾರದಲ್ಲಿ ಭಾನುವಾರ ಸಂಪನ್ನಗೊಂಡಿದ್ದು, ವಿದ್ವಾನ್ ಬಿ. ಎಂ. ಮಂಜುನಾಥ ಹಾರ್ಮೋನಿಯಂ ಮೂಲಕ ವೇದಮಂತ್ರಗಳನ್ನು ನುಡಿಸಿದರು.

    ಭಾನುವಾರ ಬೆಳಗ್ಗೆ 6ಕ್ಕೆ ಆರಂಭವಾದ ಧನ್ವಂತರಿ ಹೋಮಕ್ಕೆ 8 ಗಂಟೆಗೆ ಪೂರ್ಣಾಹುತಿ ಅರ್ಪಿಸಲಾಯಿತು. ಇಪ್ಪತ್ತಕ್ಕೂ ಹೆಚ್ಚಿನ ಅನಾರೋಗ್ಯ ಪೀಡಿತರಲ್ಲದೆ ವಿನೂತನ ಧನ್ವಂತರಿ ಹೋಮ ವೀಕ್ಷಣೆಗಾಗಿ ಬೇರೆಡೆಯಿಂದ ಕಡೆಯಿಂದಲೂ ಭಾಗವಹಿಸಿದ ಜನರು ಮಂತ್ರ, ಸ್ವರನಾದದೊಂದಿಗೆ ಹೋಮದ ಘಮ ಆಸ್ವಾದಿಸಿದರು.

    ಸಂಗೀತ ಥೇರಪಿಗಳು ಎಲ್ಲೆಡೆಯೂ ನಡೆಯುತ್ತಿದ್ದು, ನಮ್ಮ ದೇಶದಲ್ಲಿ ಪುರಾತನ ಕಾಲದಲ್ಲಿ ಸಂಗೀತ ಥೆರಪಿಯಾಗಿ ವೀಣೆಗಳನ್ನು ನುಡಿಸುತ್ತಿದ್ದ ಉಲ್ಲೇಖಗಳಿವೆ. ಯಾಗದೊಂದಿಗೆ ಸಂಗೀತದ ಥೇರಪಿ ಮಾಡಿರುವುದು ವಿಶ್ವದಲ್ಲಿಯೇ ಮೊದಲಭಾರಿಯಾಗಿದ್ದು, ಯಾಗದಲ್ಲಿ ಭಾಗವಹಿಸಿದವರಲ್ಲಿ ಧನಾತ್ಮಕ ಅಂಶಗಳು ಕಂಡುಬಂದಿದೆ. – ಡಾ. ರಾಜೇಶ್ ಬಾಯರಿ, ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ

    Click here

    Click here

    Click here

    Call us

    Call us

    Chithrakoota Ayurveda
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವು

    20/12/2025

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.