Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೌಕೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎನ್. ಮಂಜಯ್ಯ ಶೆಟ್ಟಿ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಸೌಕೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎನ್. ಮಂಜಯ್ಯ ಶೆಟ್ಟಿ ಅಧಿಕಾರ ಸ್ವೀಕಾರ

    Updated:02/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದೇವಸ್ಥಾನಗಳು ನೆಮ್ಮದಿಯ ಕೇಂದ್ರಗಳು. ಅಲ್ಲಿಗೆ ಬರುವ ಭಕ್ತಾದಿಗಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳ ಶ್ರಮದಿಂದ ದೇಗುಲ ಅಭಿವೃದ್ದಿ ಸಾಧ್ಯ. ಎಲ್ಲಾ ಭಕ್ತರನ್ನು ಒಂದೇ ರೀತಿ ನೋಡಿಕೊಳ್ಳಬೇಕು. ಬಡವರಿಗೊಂದು ರೀತಿ ಶ್ರೀಮಂತರಿಗೊಂದು ರೀತಿ ಮಾಡಬಾರದು. ಸರಿಯಾದ ಪೂಜೆ ಪುನಸ್ಕಾರಗಳಿಂದ ದೇಗುಲದ ಘನತೆ ಹೆಚ್ಚುತ್ತದೆ. ಇದರಲ್ಲಿ ಅರ್ಚಕರ ಪಾತ್ರ ಬಹಳಷ್ಟಿದೆ. ಸೌಕೂರು ಸಾನಿಧ್ಯ ವಿಶೇಷತೆ ಯಿಂದ ಕೂಡಿದೆ. ಇದರ ಶಕ್ತಿ ಇನ್ನಷ್ಟು ಹೆಚ್ಚಲಿ ಆಡಳಿತ ಮಂಡಳಿ ಒಳ್ಳೆಯ ಕೆಲಸ ಮಾಡಲಿ ಎಂದು ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಮಂಜಯ್ಯ ಶೆಟ್ಟಿ ಅವರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಮಾತನಾಡಿ, ದೇಗುಲವನ್ನು ಅಭಿವೃದ್ದಿ ಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಭಕ್ತರಿಗೆ ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ದೇಗುಲದ ಅಭಿವೃದ್ದಿಪಡಿಸಲು ಆಡಳಿತ ಮಂಡಳಿ ಕೆಲಸ ಮಾಡಲಿದೆ ಎಂದರು.

    ಆರಂಭದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಅನಂತ ಅಡಿಗ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ. ಅತುಲ್‌ಕುಮಾರ್ ಶೆಟ್ಟಿ, ಮಾಜಿ ಧರ್ಮದರ್ಶಿಗಳಾದ ವಂಡಬಳ್ಳಿ ಜಯರಾಮ ಶೆಟ್ಟಿ, ಬಾಂಡ್ಯ ಸುಬ್ಬಣ್ಣ ಶೆಟ್ಟಿ ಆಗಮಿಸಿದ್ದರು. ದೇಗುಲದ ಆಡಳಿತಾಧಿಕಾರಿ ರಘುರಾಮ ಶೆಟ್ಟಿ ಶುಭ ಕೋರಿ ಮಾತನಾಡಿದರು.

    ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಧಾನ ಅರ್ಚಕರಾದ ಅನಂತ ಅಡಿಗ, ಜಯರಾಮ ಶೆಟ್ಟಿ ಕಾವ್ರಾಡಿ, ಕೆ. ಸುಬ್ಬಣ್ಣ ಶೆಟ್ಟಿ ಕೆಂಚನೂರು, ಉಮೇಶ ಮೊಗವೀರ ಕಂಡ್ಲೂರು, ಜಿ. ಶೇಖರ ಪೂಜಾರಿ ಗುಲ್ವಾಡಿ, ಶ್ರೀಮತಿ ರೀತಾ ದೇವಾಡಿಗ ಸೌಕೂರು, ಶ್ರೀಮತಿ ಆಶಾ ನೇರಳಕಟ್ಟೆ, ಕುಷ್ಟ ಗುಲ್ವಾಡಿ ಉಪಸ್ಥಿರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    13 − thirteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.