ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ನ.02: ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ.
ಬಹುಮಾನಗಳ ವಿವರ:
ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ 50,000 ರೂ. ನೀಡಲಾಗುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ.
ಭಾಷಣದ ವಿಷಯ:
“Patriotism & Nation Building” with the Theme Sabka Saath, Sabka Vikas, Sabka Vishwas (Together we Grow, We Prosper, Together we Build a Strong and Inclusive India). ಭಾಷಣ ಸ್ಪರ್ಧೆಗೆ 9-10 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ ಇರುತ್ತದೆ.
ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯುವ ಸ್ಥಳ ಹಾಗೂ ಸಂಪರ್ಕಿಸ ಬೇಕಾದ ವ್ಯಕ್ತಿಗಳ ವಿವರ:
ಕುಂದಾಪುರ, ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ನ.25ರಂದು ಬೆಳಗ್ಗೆ 10.30ಕ್ಕೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಅರುಣ್ ಕುಮಾರ್ ಮೊ.ನಂ. 9480396456 / 9972404202, ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳಿಗೆ ಸಂಬAಧಿಸಿದಂತೆ ನವೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಮೊ.ನಂ: 8884323443 / 9739430331 ಹಾಗೂ ಕಾರ್ಕಳ, ಹೆಬ್ರಿ ತಾಲೂಕುಗಳಿಗೆ ಸಂಬಂಧಿಸಿದಂತೆ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಸುಚಿತ್ರಾ ಮೊ.ನಂ: 8197488357 ಅನ್ನು ಸಂಪರ್ಕಿಸಬಹುದಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಭಾಷಣ ಸ್ಪರ್ಧೆಯಲ್ಲಿ 18 ರಿಂದ 29 ವರ್ಷದೊಳಗಿನ ಯುವಜನರು ಭಾಗವಹಿಸಬಹುದಾಗಿದ್ದು, ಕಡ್ಡಾಯವಾಗಿ ಉಡುಪಿ ಜಿಲ್ಲೆಯ ನಿವಾಸಿಗಳಾಗಿರಬೇಕು. ಸ್ಪರ್ಧಾಳುಗಳು ತಮ್ಮ 01 ಪಾಸ್ ಪೋರ್ಟ ಸೈಜ್ ಪೋಟೊ, ಆಧಾರ್ ಕಾರ್ಡ್ (ಕಡ್ಡಾಯವಾಗಿ) ಪ್ರತಿ, ಪ್ಯಾನ್ ಕಾರ್ಡ್/ ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿಂದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ ತಪಾಸಣೆಗಾಗಿ ಅಗತ್ಯವಾಗಿ ತರಬೇಕು
ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ: 0820-2574992 ಅಥವಾ ಇ-ಮೇಲ್ dyc.udupi@gmail.com ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
