ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮ ಟೈಲರ್ ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮ ಟೈಲರ್ ಅವರನ್ನು ಸುರಭಿ ರಿ. ಬೈಂದೂರು ಸಂಸ್ಥೆಯ ಪರವಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

Call us

Click Here

ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಸನ್ಮಾನಿಸಿದ ಬಳಿಕ ಮಾತನಾಡಿ, ರಾಮ ಟೈಲರ್ ಅವರು ಸಂಘಟನಾತ್ಮಕವಾಗಿ ಸುಧೀರ್ಘವಾಗಿ ತೊಡಗಿಸಿಕೊಂಡವರು. ಬೆಳಕಿನ ವಿನ್ಯಾಸದಲ್ಲಿ ಪರಿಣತಿ ಹೊಂದಿ ಹಲವು ನಾಟಕಗಳ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ್ದರು. ಅವರ ತೆರೆಮರೆಯ ಸೇವೆಗೆ ಅರ್ಹವಾಗಿಯೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ ಎಂದರು.

ಈ ಸಂದರ್ಭ ಸುರಭಿಯ ನಿಟಕಪೂರ್ವ ಅಧ್ಯಕ್ಷ ಸತ್ಯನಾ ಕೊಡೇರಿ, ನಿಕಟಪೂರ್ವ ಉಪಾಧ್ಯಕ್ಷ ಆನಂದ ಮದ್ದೋಡಿ, ಸುರಭಿ ನಿರ್ದೇಶಕ ಸುಧಾಕರ ಪಿ. ಬೈಂದೂರು, ಸದಸ್ಯ ವೆಂಕಟೇಶ ಮಯ್ಯಾಡಿ ಮೊದಲಾದವರು ಮಾತನಾಡಿದರು. ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ, ಖಜಾಂಚಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಘವೇಂದ್ರ ಪಡುವರಿ, ಸುನಿಲ್ ಹೆಚ್. ಜಿ. ಬೈಂದೂರು, ಲಕ್ಷ್ಮಣ ಕೊರಗ, ಉದಯ ಗಾಣಿಗ ಬೈಂದೂರು ಹಾಗೂ ಸಂಸ್ಥೆಯ ಸದಸ್ಯರುಗಳು ಉಪಸ್ಥಿತರಿದ್ದರು. ಶಿಕ್ಷಕ ಮಂಜುನಾಥ ಪೂಜಾರಿ ಕಳವಾಡಿ ವಂದಿಸಿದರು.

Leave a Reply