Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಅಭಿಯಾನ: ಕೂರ್ಮಾರಾವ್ ಎಂ.
    ಉಡುಪಿ ಜಿಲ್ಲೆ

    ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಅಭಿಯಾನ: ಕೂರ್ಮಾರಾವ್ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಣ ಸುದ್ದಿ.
    ಉಡುಪಿ:
    ಜನವರಿ 1 2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ 27,000 ಯುವ ಮತದಾರರ ನೋಂದಣಿ ಆಗಬೇಕಿದ್ದು, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 18 ವರ್ಷ ತುಂಬಿದ ಯುವಕ/ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು. ಯುವ ಜನತೆ ತಾವು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಬಿ.ಎಲ್.ಓ ಗಳನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಆನ್ಲೈನ್ ವೆಬ್ ಪೋರ್ಟಲ್ https://www.nvsp.in/ ಹಾಗೂ Voter helpline app ಮೂಲಕ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಮಾಡಲು ಅವಕಾಶಗಳಿದ್ದು, ಈ ಸೌಲಭ್ಯದ ಸದುಪಯೋಗ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುವಂತೆ ತಿಳಿಸಿದರು.

    ಜಿಲ್ಲೆಯಲ್ಲಿ ಈಗಾಗಲೇ ನವೆಂಬರ್ 8ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ 8 ರಿಂದ ಡಿಸೆಂಬರ್ 8 ರ ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 7, 14, 21 ಮತ್ತು 28 ರಂದು ವಿಶೇಷ ನೊಂದಣಿ ಕಾರ್ಯಕ್ರಮ ನಡೆಯಲಿದ್ದು, ಈ ಅವಧಿಯಲ್ಲಿ ಎಲ್ಲಾ ಬಿ.ಎಲ್.ಓ ಗಳು ಬೆ. 10 ರಿಂದ 5 ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿರುತ್ತಾರೆ. ಡಿಸೆಂಬರ್ 27 ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಾಗೂ 13-1-2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.

    ನಮೂನೆ- 6ರಲ್ಲಿ 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸುವವರು, ವಿದೇಶದಲ್ಲಿ ವಾಸಿಸುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ನಮೂನೆ – 6ಎರಲ್ಲಿ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ – 7ರಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು, ನಮೂನೆ–8 ರಲ್ಲಿ ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳಿದ್ದರೆ ಹಾಗೂ ನಮೂನೆ–8ಎರಲ್ಲಿ ಒಂದು ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ಸಾರ್ವಜನಿಕರು ತಾಲೂಕು ಕಛೇರಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ಇಲ್ಲಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

    Click here

    Click here

    Click here

    Call us

    Call us

    ಪ್ರಸ್ತುತ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ, 4,92,400 ಪುರುಷ, 5,28,777 ಮಹಿಳೆ, 11 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,21,188 ಮತದಾರರರಿದ್ದಾರೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d