Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಹಿತ್ಯ ಓದಿನಿಂದ ಜೀವನ ಪ್ರೀತಿ, ಸಹಬಾಳ್ವೆ ಕರಗತ: ಡಾ. ರೇಖಾ ವಿ. ಬನ್ನಾಡಿ
    alvas nudisiri

    ಸಾಹಿತ್ಯ ಓದಿನಿಂದ ಜೀವನ ಪ್ರೀತಿ, ಸಹಬಾಳ್ವೆ ಕರಗತ: ಡಾ. ರೇಖಾ ವಿ. ಬನ್ನಾಡಿ

    Updated:10/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಕೂಡ ಬದುಕಿಗೆ ಬೆನ್ನು ಹಾಕಲ್ಲ ಎಂದು ಲೇಖಕಿ, ಪ್ರಾಧ್ಯಪಕಿ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ರೇಖಾ ವಿ. ಬನ್ನಾಡಿ ನುಡಿದರು

    Click Here

    Call us

    Click Here

    ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ 2021-22 ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ ಸಾಹಿತ್ಯದ ಓದು ಪ್ರಶ್ನಿಸುವ ಗುಣವನ್ನು ನೀಡುತ್ತದೆ. ಎಷ್ಟು ಅಪ್ರಿಯವಾದ್ರು ಸತ್ಯವನ್ನು ಹೇಳುವ ತಾಕತ್ತನ್ನು ನೀಡುತ್ತದೆ. ಆತ್ಮವಿಶ್ವಾಸದ ಜತೆಗೆ ಜಗತ್ತನ್ನು ಪ್ರೀತಿಸುವ, ಸಹಬಾಳ್ವೆಯನ್ನು ಆಶಿಸುವ ಹಾಗೂ ಜೀವನ ಪ್ರೀತಿಯನ್ನು ಕರಗತಗೊಳಿಸುವ ಶಕ್ತಿಯನ್ನು ನೀಡುತ್ತದೆ. ಒಳ್ಳೆಯ ಓದುಗನಿಗೆ ಒಂಟಿತನ ಎಂದೂ ಕಾಡಲ್ಲ ಎಂದರು.

    ಭಾಷೆ ಎನ್ನುವುದು ಅಂತರಂಗದ ಹಣತೆಯ ಹಾಗೆ. ದುರಾದೃಷ್ಟವಶಾತ್ ಇಂದು ಹಿರಿಯರಿಂದ ಹಿಡಿದು ಕಿರಿಯರವೆರೆಗೆ ಭಾಷೆ ಸಾಹಿತ್ಯಗಳು ಅನುಉತ್ಪಾದಕ ಎಂಬ ಭಾವನೆ ಮೂಡುತ್ತಿರುವುದು ಖೇದಕರ. ಮನುಷ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಬುದ್ದಿ ಮತ್ತು ಭಾವವನ್ನು ಸರಿಯಾಗಿ ಉಪಯೋಗಿಸಿಕೊಂಡಾಗ ಮಾತ್ರ. ಯುವಜನತೆ ಈ ಸಮಾಜದ ಮೌಲ್ಯಗಳನ್ನು ಸಾಕಾರಗೊಳಿಸಲು ಸದಾ ಶ್ರಮಿಸಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದ ಕಾಲೇಜಿನ ಪ್ರಾಚಾರ‍್ಯ ಪ್ರೋ ಸದಾಕತ್, ವಿಜ್ಞಾನದ ಬೆಳವಣಿಗೆಯ ಜತೆಯಲ್ಲಿ ಸಾಹಿತ್ಯದ ಬೆಳವಣಿಗೆಯ ಪ್ರಕ್ರಿಯೆಯು ನಡೆಯುತ್ತಿರಬೇಕು. ಮನುಷ್ಯ ಮಾನವೀಯತೆಯನ್ನು ಸದಾ ತನ್ನ ಪರಮಧರ್ಮವೆಂದು ಭಾವಿಸಿ ಬದುಕಬೇಕು ಎಂದರು.

    ಸಾಹಿತ್ಯ ಸಂಘದ ಸಂಯೋಜಕರಾದ ಸುಧಾರಾಣಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಕನ್ನಡ ಉಪನ್ಯಾಸಕಿ ಆಶಾ ಇ. ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಧರ್ಮೆಂದ್ರ ಕುದ್ರೋಳಿ ಅತಿಥಿಗಳನ್ನು ಸ್ವಾಗತಿಸಿ, ಉಪನ್ಯಾಸಕಿ ಅಮೃತ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    14 + four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.