Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡೆಯಿಂದ ಸೌಹಾರ್ದ ಮನೋಭಾವ ವೃದ್ಧಿ: ಡಾ. ವಿನಾಯಕ್ ಶೆಣೈ
    ಉಡುಪಿ ಜಿಲ್ಲೆ

    ಕ್ರೀಡೆಯಿಂದ ಸೌಹಾರ್ದ ಮನೋಭಾವ ವೃದ್ಧಿ: ಡಾ. ವಿನಾಯಕ್ ಶೆಣೈ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಪ್ರತಿಯೊಬ್ಬರೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಅವಶ್ಯಕ. ಕ್ರೀಡೆಯಿಂದ ಆರೋಗ್ಯ ವೃದ್ಧಿಗೊಳ್ಳುವುದಲ್ಲದೆ ಮಾನಸಿಕವಾಗಿ ಶಕ್ತರಾಗುತ್ತೇವೆ. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸೌಹಾರ್ದ ಮನೋಭಾವ ಬೆಳೆಯಲು ಸಾಧ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿನಾಯಕ್ ಶೆಣೈ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ, ಗೃಹರಕ್ಷಕ ದಳದ ವತಿಯಿಂದ ನಡೆದ, ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

    ಗೃಹರಕ್ಷಕರು ದೇಶ ಸೇವೆ, ಸಮಾಜ ಸೇವೆಯಲ್ಲಿ ತಲ್ಲೀನರಾದಂತೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಮುಂದೆ ಜಿಲ್ಲೆ, ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು.

    ದೇಶ ರಕ್ಷಣೆ ಮಾಡುವ ಸೇನೆ, ಆಂತರಿಕ ಭದ್ರತೆಯನ್ನು ಕಾಪಾಡುವ ಸಿ.ಆರ್.ಪಿ.ಎಫ್ ಹಾಗೂ ಸಮಾಜದ ರಕ್ಷಣೆ ಮಾಡುವ ಆರಕ್ಷಕ ದಳಕ್ಕೆ ಸರಿಸಾಟಿಯಾಗಿ ದೇಶದೆಲ್ಲೆಡೆ ಅಗತ್ಯಕ್ಕನುಗುಣವಾಗಿ ಚುನಾವಣಾ ಸಂದರ್ಭದಲ್ಲಿ, ಯಾವುದೇ ರೀತಿಯ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ, ಸರಕಾರದಿಂದ ಕರೆ ಬಂದಾಗ, ಯಾವುದನ್ನೂ ಲೆಕ್ಕಿಸದೆ ದೇಶ ಹಾಗೂ ಸಮಾಜ ಸೇವೆಯಲ್ಲಿ ತಮ್ಮ ಕರ್ತವ್ಯ ಪರಿಪೂರ್ಣವಾಗಿ ನಿರ್ವಹಿಸುವಂತಹ ಗೃಹರಕ್ಷಕರ ಸೇವೆ ಅತ್ಯಂತ ಶ್ಲಾಘನೀಯ. ಅವರಿಗೆ ಸರ್ಕಾರದಿಂದ ಹೆಚ್ಚಿನ ಸವಲತ್ತು, ಪ್ರೋತ್ಸಾಹ ದೊರೆಯಬೇಕು ಎಂದರು.

    ಸಮಾಜದಲ್ಲಿ ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಿದಾಗ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ ಎಂದ ಅವರು, ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ತಮ್ಮ ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಕೆ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಏಳಿಗೆಗಾಗಿ ಯಾವುದೇ ಪ್ರತಿಫಲ ಬಯಸದೆ, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳವನ್ನು ಅಭಿನಂದಿಸಿದರು.

    ನೆರೆ-ಹೊರೆ, ಪ್ರವಾಹ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ದಿನದ 24 ಗಂಟೆಯೂ ಕಾರ್ಯಪ್ರವೃತ್ತರಾಗುವ ಗೃಹರಕ್ಷಕ ದಳದವರ ಕೆಲಸವು ಶಿಸ್ತುಬದ್ದತೆಯನ್ನು ಎತ್ತಿ ತೋರುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲೆಯ ಅಂತರಾಷ್ಟ್ರೀಯ ಕ್ರೀಡಾಪಟು ಶಾಲಿನಿ ಶೆಟ್ಟಿ, ಕಚೇರಿ ಅಧೀಕ್ಷಕಿ ಕವಿತಾ, ಕಾರ್ಕಳ ಘಟಕದ ಪ್ಲಟೂನ್ ಕಮಾಂಡರ್ ಪ್ರಭಾಕರ್ ಸುವರ್ಣ ಮತ್ತು ಗೃಹರಕ್ಷಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ಗೃಹರಕ್ಷಕದಳದ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿ, ಬ್ರಹ್ಮಾವರ ಘಟಕದ ಪ್ಲಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ನಿರೂಪಿಸಿ, ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡೆಂಟ್ ಕೆ. ಸಿ ರಾಜೇಶ್ ವಂದಿಸಿದರು. ಕ್ರೀಡಾಕೂಟದಲ್ಲಿ ವಿಜೇತರಾದ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d