ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪುಸ್ತಕ ಹಸ್ತಾಂತರ
ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಜ್ಞಾನ ದೀಪ ಯೋಜನೆಯಡಿ ಪುಸ್ತಕಗಳನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಶಾಲಾ ಮುಖ್ಯೋಪಧ್ಯಾಯ ಕೃಷ್ಣ ಅಡಿಗ ಅವರಿಗೆ ಹಸ್ತಾಂತರಿಸಿದರು. ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು.
ಕೋಡಿ ಉರ್ದು ಶಾಲೆಗೆ ಪುಸ್ತಕ ಹಸ್ತಾಂತರ
ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕೋಡಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನ ದೀಪ ಯೋಜನೆಯಡಿ ಗ್ರಂಥಾಲಯಕ್ಕೆ ಪುಸ್ತಕಗಳನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಶಾಲಾ ಮುಖ್ಯೋಪಧ್ಯಾಯಿನಿ ರೆಹನಾ ಬೇಗಂ ಅವರಿಗೆ ಹಸ್ತಾಂತರಿಸಿದರು.
ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ, ಶಾಲಾ ಶಿಕ್ಷಕರಾದ ದುರ್ಗಿ ಪಟಗಾರ್, ನಜಿಯಾ ಬಾನು, ಜ್ಯೋತಿ ಆಚಾರ್, ಸಂಧ್ಯಾ ರಾಣಿ, ರಂಜನಿ ಉಪಸ್ಥಿತರಿದ್ದರು.