Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮಂಗಳೂರು ವಿ.ವಿ ವ್ಯಾಪ್ತಿಯ ಕಾಲೇಜು ಉಪನ್ಯಾಸಕರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಮಂಗಳೂರು ವಿ.ವಿ ವ್ಯಾಪ್ತಿಯ ಕಾಲೇಜು ಉಪನ್ಯಾಸಕರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಕುಂದಾಪುರದ ಸುತ್ತಮುತ್ತಲಿನ ಸರಕಾರಿ ಅನುದಾನಿತ ಖಾಸಗಿ ಮತು ಅನುದಾನರಹಿತ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಮತ್ತು ಉಪನ್ಯಾಸಕರಿಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಕಾರ್ಯಾಗಾರವನ್ನು ಹಮ್ಮಿಕೊಂಡಿತು.

    Click Here

    Call us

    Click Here

    ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಇರುವ ಬಹುತೇಕ ವಿಷಯಗಳ ಕುರಿತಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರಗಳಿಲ್ಲವಾದರೂ ಸಮಾಧಾನಕರ ಉತ್ತರಗಳು ದೊರಕಿದವು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಮಂಗಳೂರು ವ್ಯಾಪ್ತಿಯ ನೋಡಲ್ ಅಧಿಕಾರಿಗಳಾದ ರವೀಂದ್ರ ಆಚಾರ್ ಮಾತನಾಡಿ, ಈ ಹಿಂದೆ ವಿದ್ಯಾರ್ಥಿಯು ಕೇವಲ ಓದುವುದು ಪರೀಕ್ಷೆ ಬರೆಯುವುದು ಮತ್ತು ಅಂಕ ಗಳಿಸುವುದು ಬಿಟ್ಟರೆ ಜ್ನಾನಾಧಾರಿತ ಶಿಕ್ಷಣಕ್ಕೆ ತೆರೆದುಕೊಳ್ಳುವ ಅವಕಾಶಗಳು ಕಡಿಮೆ ಇದ್ದವು. ಶಿಕ್ಷಣ ಕೇವಲ ಓದುವುದಕ್ಕೆ ಮತ್ತು ಅಂಕಕ್ಕೆ ಸೀಮಿತವಾಗಬಾರದು ಎಂಬುದನ್ನು ಮನಗಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಅನುಷ್ಠನಗೊಳಿಸಲಾಗಿದೆ. ಈಗಿನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಿಷಯದ ಕುರಿತಂತೆ ಕೌಶಲ್ಯ ಮತ್ತು ಜ್ನಾನವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಆದರೆ ಅನಿಷ್ಠನಕ್ಕೆ ತರುವಲ್ಲಿ ನೈನತೆಗಳು ಮತ್ತು ಗೊಂದಲಗಳಿವೆ. ಅದಕ್ಕಾಗಿ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳುವುದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯು ೨೦೨೦-೨೦೪೦ ಎಂಬ ಸಮಯದ ಚೌಕಟ್ಟನ್ನು ತಂದಿದ್ದಾರೆ. ನಾವುಗಳು ಇನ್ನೂ ಈ ಹೊಸತನಕ್ಕೆ ನಮ್ಮನ್ನು ತೊಡಗಿಸಿಕೊಳ್ಳುವುದಕ್ಕೆ ಕಷ್ಟ ಆದರೂ ತೋಡಗಿಸಿಕೊಂಡ ಮೇಲೆ ಖಂಡಿತ ಒಳ್ಳೆಯ ಅಭಿಪ್ರಾಯಗಳು ಅನುಭವಗಳು ಸಾಧ್ಯ ಎಂದು ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಕ್ಷರಾದ ಮಂಜುನಾಥ ಪಟ್ಟಾಭಿ ಅವರು ರಾಷ್ಟ್ರೀಯ ಶಿಕ್ಷಣ ನೀತಿಯುಕುರಿತ ರೂಪುರೇಷೆಗಳನ್ನು ಪರಿಚಯಿಸದರು. ನಂತರದಲ್ಲಿ ನಡೆದ ಸಂವಾದದಲ್ಲಿ ಉಪನ್ಯಾಸಕರು ಮತ್ತು ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಸಾಕಷ್ಟು ಬಿರುಸಿನ ಚರ್ಚೆ ನಡೆಸಿದರು. ಹಲವಾರು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಆದರೆ ಅಧಿಕಾರಿಗಳಿಂದ ಸಮಾಧಾನಕರ ಉತ್ತರಗಳಿಗಷ್ಟೇ ದೊರಕಿದವು ಆದರೆ ಪರಿಹಾರ ಸಿಗಲಿಲ್ಲ ಎಂಬುದು ಹೆಚ್ಚಿನ ಕಾಲೇಜುಗಳ ಉಪನ್ಯಾಸಕರ ಅಭಿಪ್ರಾಯವಾಗಿದೆ.

    ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಪಾಠೇತರ ಚಟುವಟಿಕೆಗಳಲ್ಲಿ ಇರುವ ಯೋಗ ಮತ್ತು ಸ್ಪೋರ್ಟ್ಸ ಕುರಿತು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಯೋಗ ನಮ್ಮದೇಶದ ಶ್ರೇಷ್ಠ ವಿದ್ಯೆ. ಅದಕ್ಕೆ ಪರಿಣಿತg ಅಗತ್ಯತೆ ಬೇಕಾಗುತ್ತದೆ. ಕಾಲೇಜುಗಳಲ್ಲಿ ಯೋಗ ಪರಿಣಿತರಿಂದ ಯೋಗ ಕಲಿಸಲು ತಾವು ಯಾವ ರೀತಿಯ ಅನುಕೂಲ ಮಾಡಿಕೊಡುವಿರಿ? ಅದರ ಆರು ಸೆಮಿಸ್ಟರ್ ಗಳಲ್ಲಿ ಸ್ಪೋರ್ಟ್ಸನ್ನು ಓದಲೇಬೇಕು. ಹಾಗಿರುವಾಗ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳಿರುವ ಕಾಲೇಜುಗಳಲ್ಲಿ ಏಕಕಾಲದಲ್ಲಿ ಚಟುವಟಿಕೆಗಳನ್ನು ಮಾಡುವುದು ಹೇಗೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿಯವರು ಕೇಳಿದ ಪ್ರಶ್ನೆಗೆ ನೋಡಲ್ ಅಧಿಕಾರಿಗಳಾದ ರವೀಂದ್ರ ಆಚಾರ್ ಅವರು ಉತ್ತರಿಸಿ ಇದನ್ನು ಸರಕಾರದ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

    Click here

    Click here

    Click here

    Call us

    Call us

    ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಒಪನ್ ಎಲೆಕ್ಟವ್ ಎನ್ನುವ ವಿಷಯಕ್ಕೆ ಬಂದರೆ ವಿದ್ಯಾರ್ಥಿಯು ತಾನೂ ಅಭ್ಯಸಿಸುವ ವಿಷಯವನ್ನು ಬಿಟ್ಟು ಬೇರೆಯದಾದ ವಿಷಯವನ್ನು ಅಭ್ಯಸಿಸಬೇಕು. ಆದರೆ ಇಲ್ಲಿ ಕೆಲವು ಕಾಲೇಜುಗಳಲ್ಲಿ ಕೆಲವು ಕೋರ್ಸಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಇನ್ನೊಂದೆಡೆ ಕೇವಲ ವಾಣಿಜ್ಯ ವಿಷಯದ ಕಾಲೇಜುಗಳಿವೆ ಕೆಲವು ಕಡೆ ಕೆಲವು ಕೋರ್ಸಗಳಿದ್ದರೂ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುಲಾಗಿದೆ ಮತ್ತು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಹಾಗಿರುವಾಗ ಇದಕ್ಕೆ ಪರಿಹಾರವೇನು? ಎಂಬ ಪ್ರಶ್ನೆಗೆ ಅಧಿಕಾರಿಗಳಿಂದ ಸಮರ್ಪಕಉತ್ತರ ಸಿಗಲಿಲ್ಲ ಎಂಬುದು ಹಲವು ಕಾಲೇಜುಗಳ ಉಪನ್ಯಾಸಕರ ಅಭಿಪ್ರಾಯವಾಗಿದೆ.

    ಇವುಗಳನ್ನು ಮುಖ್ಯವಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಭ್ಯಸಿಸಬೇಕಾದ ಡಿಜಿಟಲ್ ಪ್ಲೂಯನ್ಸಿ ಮತ್ತು ಪರಿಸರ ಅಧ್ಯಯನ ಎಂಬ ವಿಷಯಕ್ಕೆ ಕುರಿತಂತೆ ಇರುವ ಗೊಂದಲವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಿ ಸೆಮಿಸ್ಟರ್‌ಗಳಿಗೆ ಪೂರಕವಾಗಿ ನೀಡಲಾಗುವುದಕ್ಕೆ ಅನುಮತಿ ದೊರಕಿತು. ಡಿಜಿಟಲ್ ಪ್ಲೂಯನ್ಸಿ ಎಂಬ ವಿಷಯವನ್ನು ಯಾರು ಕಲಿಸುವುದು. ಅಲ್ಲದೇ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಇದು ಅಗತ್ಯವೇ ಎಂಬುದರ ಕುರಿತಾಗಿ ಪ್ರಶ್ನೇಗಳನ್ನು ಕೇಳಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಕನ್ನಡ ವಿಭಾಗ ಮುಖ್ಯಸ್ಥೆ ಡಾ. ರೇಖಾ ಬನ್ನಾಡಿ ಸ್ವಾಗತಿಸಿದರು. ಬೌತಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಲಲಿತಾ ದೇವಿ ವಂದಿಸಿದರು. ಸೂಕ್ಷ್ಮಾಣು ಜೀವಶಾಸ್ತ್ರ ಮುಖ್ಯಸ್ಥೆ ಸುಮಾ ಜಿ.ಆರ್ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.