Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ: ಹಲಸಂಗಿ ಗೆಳೆಯರು ಮತ್ತು ಕನ್ನಡ, ಜನಪದ ಸಾಹಿತ್ಯ ವಿಶೇಷ ಉಪನ್ಯಾಸ
    ಊರ್ಮನೆ ಸಮಾಚಾರ

    ಕೋಟೇಶ್ವರ: ಹಲಸಂಗಿ ಗೆಳೆಯರು ಮತ್ತು ಕನ್ನಡ, ಜನಪದ ಸಾಹಿತ್ಯ ವಿಶೇಷ ಉಪನ್ಯಾಸ

    Updated:01/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ:
    ಜನರಿಂದ ಜನರಿಗಾಗಿ ಜನರಿಗೋಸ್ಕರ ಹುಟ್ಟಿದ ಸಾಹಿತ್ಯವೇ ಜನಪದ ಸಾಹಿತ್ಯ. ಜನವಾಣಿ ಬೇರು ಕವಿವಾಣಿ ಹೂವು ಜಾನಪದ ಸಾಹಿತ್ಯ ಸಂಪಾದನೆಯ ಪ್ರಥಮ ಘಟ್ಟದಲ್ಲಿ ಹಲಸಂಗಿ ಗೆಳೆಯರು ಪ್ರಕಟಿಸಿದ ಗರತಿಯ ಹಾಡು, ಜೀವನ ಸಂಗೀತ ಹಾಗೂ ಮಲ್ಲಿಗೆ ದಂಡೆ ಸಂಕಲನಗಳ ಹಲವಾರು ಹಾಡುಗಳೊಂದಿಗೆ ಹಲಸಂಗಿ ಗೆಳೆಯರ ಬಳಗ ಜನಪದ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕನ್ನಡ ನಾಡಿನ ಜಾನಪದ ಸಿರಿಯನ್ನು ಅನಾವರಣಗೊಳಿ ಕನ್ನಡಿಗರಿಗೆ ಉಣ ಬಡಿಸಿದ ಶ್ರೇಯಸ್ಸು ಕೀರ್ತಿ ಹಲಸಂಗಿ ಗೆಳೆಯರ ಬಳಗಕ್ಕೆ ಸಲ್ಲಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಪಾದ ಶೆಟ್ಟಿ ಹೇಳಿದರು.

    Click Here

    Call us

    Click Here

    ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದೊಂದಿಗೆ ಕನ್ನಡ ಸಂಘ, ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಹಾಗೂ ಇವರ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಜರುಗಿದ ಹಲಸಂಗಿ ಗೆಳೆಯರು ಮತ್ತು ಜನಪದ ಸಾಹಿತ್ಯ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯ ಸಂಚಾಲಕ ಡಾ.ಎಸ್.ಕೆ ಕೊಪ್ಪಾ ಮಾತನಾಡಿ, ಆರ್ಥಿಕ ಶ್ರೀಮಂತಿಕೆಯ ಕೊರತೆಯ ನಡುವೆಯೂ ಸಾಹಿತ್ಯಿಕ ಸಾಂಸ್ಕೃತಿಕ ಶ್ರೀಮಂತಿಕೆಯ ಮೂಲಕ ಕರ್ನಾಟಕದಾದ್ಯಂತ ಚಿರಪರಿಚಿತರಾದ ಹಲಸಂಗಿ ಗೆಳೆಯರು ಮುಲ್ಕಿ ಪರೀಕ್ಷೆ ಗಿಂತ ಹೆಚ್ಚಿಗೆ ಓದಿದವರಲ್ಲ. ಆದರೂ ಬಹು ಭಾಷೆಯ ಮೇಲೆ ಪ್ರಭುತ್ವ ಹೊಂದಿ ಸಾಹಿತ್ಯ ಕೃಷಿ ಮಾಡಿದವರು ಎಂದು ಅಭಿಪ್ರಾಯಪಟ್ಟರು.

    ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಗಣನಾಥ ಶೆಟ್ಟಿ ಎಕ್ಕಾರು ಕನ್ನಡ ಸಾಹಿತ್ಯಕ್ಕೆ ಹಲಸಂಗಿ ಗೆಳೆಯರ ಕೊಡುಗೆ ಕುರಿತು ಉಪನ್ಯಾಸ ನೀಡಿ, ನವೋದಯ ಕಾಲಘಟ್ಟ ನಿಜವಾಗಿ ಆರಂಭವಾದದ್ದೇ ಹಲಸಂಗಿ ಗೆಳೆಯರಿಂದ. ಹೊಸ ತತ್ವ, ಹೊಸಭಾಷ್ಯ, ಹೊಸ ಶಕ್ತಿಯಿಂದ ಹಲಸಂಗಿ ಗೆಳೆಯರು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದರು ಎಂದು ಅಭಿಪ್ರಾಯಪಟ್ಟರು.

    ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬದುಕಿನಲ್ಲಿ ತಾಳ್ಮೆ, ಸಹನೆ, ಸಹಿಷ್ಣುತೆ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಾಹಿತ್ಯ ಮತ್ತು ಸಂಗೀತದ ಸಾಂಗತ್ಯದಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುತ್ತದೆ. ನಮ್ಮ ಬೆಳವಣಿಗೆಗೆ ಕಾರಣಕರ್ತರಾದವರನ್ನು ಎಂದಿಗೂ ಮರೆಯದೆ ಸ್ಮರಿಸುವುದು ದೊಡ್ಡ ಗುಣ. ಆ ದೊಡ್ಡ ಗುಣವನ್ನು ಇಂದಿನ ಯುವ ಜನತೆ ಅಳವಡಿಸಿಕೊಳ್ಳಬೇಕು ಎಂದು ಅಭಿಮತವನ್ನು ವ್ಯಕ್ತಪಡಿಸಿದರು.

    Click here

    Click here

    Click here

    Call us

    Call us

    ಕನ್ನಡ ವಿಭಾಗದ ಮುಖ್ಯಸ್ಥೆ ಉಷಾದೇವಿ ಜೆ.ಎಸ್ ಸ್ವಾಗತಿಸಿದರು. ಉಪನ್ಯಾಸಕ ಪಂಜು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವರದರಾಜ್ ವಂದಿಸಿದರು.

    ಬಹಳ ಮೊದಲು ಹಲಸಂಗಿ ಗೆಳೆಯರು ಕನ್ನಡದ ಕೆಲಸವನ್ನು ಮಾಡಿದ ಮಹಾನ್ ಚೇತನಗಳು. ಅವರನ್ನು ಕನ್ನಡದ ದಿಗ್ಗಜರುಗಳು ಎಂದರೆ ಅತಿಶಯೋಕ್ತಿಯಲ್ಲ. ಮಧುರಚೆನ್ನರು, ಸಿಂಪಿ ಲಿಂಗಣ್ಣ, ಪಿ.ದೂಲಾ ಇವರು ವಿಜಾಪುರದ ಇಂಡಿ ತಾಲೂಕಿನ ಸಾಮಾನ್ಯ ಹಳ್ಳಿಯಾದ ಹಲಸಂಗಿಯಲ್ಲಿ ಜನಿಸಿ ಸಾಹಿತ್ಯ ಸೃಷ್ಟಿ, ಜಾನಪದ ಹಾಡುಗಳ ಲಾವಣಿಗಳ ಸಂಗ್ರಹ, ನಾಡಹಬ್ಬದ ಆಚರಣೆ, ಅರವಿಂದ ಮತ್ತು ಶ್ರೀಮಾತಾ ಅವರ ಆಧ್ಯಾತ್ಮ ದರ್ಶನ, ರಾಮಕೃಷ್ಣ ಪರಮಹಂಸರ ಶತಮಾನೋತ್ಸವವನ್ನ ಆಚರಿಸುವ ಮೂಲಕ ಕನ್ನಡ ನಾಡಿಗೆ ಮಾದರಿಯಾದ ಈ ಪುಣ್ಯ ಪುರುಷರನ್ನು ನಾಡಿನಾದ್ಯಂತ ನೆನಪಿಸುವ ಕಾಯಕವನ್ನು ಹಲಸಂಗಿ ಗೆಳೆಯರ ಪ್ರತಿಷ್ಠಾನ ಮಾಡುವ ಮೂಲಕ ಅವರ ಆದರ್ಶ ಆಶಯಗಳನ್ನು ಮತ್ತೆ ನೆನಪು ಮಾಡುವ ಸದವಕಾಶವನ್ನು ಒದಗಿಸಿದೆ. ಇದೊಂದು ಸ್ತುತ್ಯಾರ್ಹವಾದ ಕಾಯಕ ಎಂದು ನಾನು ನಂಬಿದ್ದೇನೆ. – ಡಾ.ಶ್ರೀಪಾದ ಶೆಟ್ಟಿ. ಜನಪದ ಸಾಹಿತಿಗಳು ಮತ್ತು ನಿವೃತ್ತ ಪ್ರಾಧ್ಯಾಪಕರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d