ರಿಕ್ಷಾ ನಿಲ್ದಾಣದೊಳಗೆ ಟಿಪ್ಪರ್ ನುಗ್ಗಿ 4 ರಿಕ್ಷಾಗಳು ಜಖಂ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಿಕ್ಷಾ ನಿಲ್ದಾಣದೊಳಗೆ ಟಿಪ್ಪರ್ ನುಗ್ಗಿ ನಾಲ್ಕು ಆಟೋ ರಿಕ್ಷಾ ಜಖಂ ಆದ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ.

Call us

Click Here

ಕುಂದಾಪುರ ಕಡೆಯಿಂದ ತ್ರಾಸಿ ಕಡೆಗೆ ಸಾಗುತ್ತಿದ್ದ ಟಿಪ್ಪರ್, ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡು ಅತೀ ವೇಗದಿಂದ ಸಾಗಿ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ನಿಲ್ದಾಣದಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿದೆ. ಆಟೋ ಚಾಲಕರು ಅದೃಷ್ಡವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆ, ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Leave a Reply