Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಓಮಿಕ್ರಾನ್ ನಿಯಂತ್ರಣಕ್ಕೆ ಸನ್ನದ್ಧರಾಗಿ: ಅಧಿಕಾರಿಗಳ ಸಭೆಯಲ್ಲಿ ಉಡುಪಿ ಡಿಸಿ ಕೂರ್ಮರಾವ್ ಎಂ
    ಉಡುಪಿ ಜಿಲ್ಲೆ

    ಓಮಿಕ್ರಾನ್ ನಿಯಂತ್ರಣಕ್ಕೆ ಸನ್ನದ್ಧರಾಗಿ: ಅಧಿಕಾರಿಗಳ ಸಭೆಯಲ್ಲಿ ಉಡುಪಿ ಡಿಸಿ ಕೂರ್ಮರಾವ್ ಎಂ

    Updated:02/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್ನ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ ವ್ಯಾಪಕವಾಗಿ ಹರಡಿದ್ದು, ವಿದೇಶಿ ಪ್ರಯಾಣಿಕರಿಂದ ರಾಜ್ಯದಲ್ಲಿ ಸಹ ಹರಡುವ ಸಾಧ್ಯತೆಗಳಿದ್ದು, ಹೊಸ ತಳಿಯು ಹರಡುವ ವೇಗವು ಹೆಚ್ಚಿರುವ ಹಿನ್ನಲೆ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅವಶ್ಯವಾಗಿದೆ ಎಂದರು.

    ಓಮಿಕ್ರಾನ್ ದೃಡಪಟ್ಟ ರಾಷ್ಟçಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪ್ಪದೇ ಪರೀಕ್ಷೆಗೆ ಒಳಪಡಿಸಬೇಕು. ಒಂದೊಮ್ಮೆ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಲ್ಲಿ ಅವರನ್ನು 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು. ಪಾಸಿಟಿವ್ ಬಂದಲ್ಲಿ ಅವರುಗಳನ್ನು 14 ದಿನಗಳ ಕಾಲ ಸಾಂಸ್ಥಿಕ ಐಸೋಲೇಶನ್/ಆಸ್ಪತ್ರೆಗೆ ದಾಖಲಿಸಬೇಕು ಎಂದ ಅವರು, ಕಳೆದ 15 ದಿನಗಳಿಂದ ಜಿಲ್ಲೆಗೆ ವಿದೇಶದಿಂದ ಬಂದಿರುವವರ ಮಾಹಿತಿಗಳನ್ನು, ಮಂಗಳೂರು ಹಾಗೂ ಬೆಂಗಳೂರು ವಿಮಾನ ನಿಲ್ಧಾಣಗಳಿಂದ ಪಡೆದು, ಅವರುಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದರು.

    ಜನ ಸಾಮಾನ್ಯರು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದು, ಕೈ ತೊಳೆಯುವುದು ಸೇರಿದಂತೆ ಕೋವಿಡ್ನ ಸರಳ ಮಾರ್ಗಸೂಚಿಗಳನ್ನು ತಪ್ಪದೇ ಪಾ¯ನೆ ಮಾಡಬೇಕು. ತಮ್ಮ ನೆರೆ ಹೊರೆಯವರು ವಿದೇಶದಿಂದ ಬಂದಿದ್ದಲ್ಲಿ ಅವರ ಮಾಹಿತಿಗಳನ್ನು ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದರು.

    ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಾದಲ್ಲಿ ಅವುಗಳ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚಿಕಿತ್ಸೆಗೆ ಬೆಡ್ಗಳ ಕೊರತೆಯಾಗದಂತೆ ಮಾಹಿತಿಗಳನ್ನು ಹಾಗೂ ಬೆಡ್ ಲಭ್ಯತೆಗಳ ಬಗ್ಗೆ ಈಗಲೇ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಆಕ್ಸಿಜನ್ ಸಹಿತಿ / ರಹಿತ, ಐಸಿಯು ಬೆಡ್ಗಳು ಹಾಗೂ ಅವುಗಳ ನಿರ್ವಹಣಾ ಮಾಹಿತಿಯನ್ನು ಸಂಬAದಿಸಿದ ಸಮಿತಿಯವರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಕೋವಿಡ್ ಪರೀಕ್ಷಾ ನಿರ್ವಹಣಾ ಸಮಿತಿಯು ಪ್ರತಿದಿನ ಕೋವಿಡ್ ಪರೀಕ್ಷೆಯ ಸ್ವಾö್ಯಬ್ ಸಂಗ್ರಹವನ್ನು ಅದೇ ದಿನ ಮಧ್ಯಾಹ್ನ ಹಾಗೂ ಸಂಜೆ 2 ಪಾಳಿಯಲ್ಲಿ ಟೆಸ್ಟಿಂಗ್ ಸೆಂಟರ್ಗಳಿಗೆ ರವಾನಿಸಿ, ಅಂದಿನ ದಿನದ ಪರೀಕ್ಷೆಯ ವರದಿಯುನ್ನು ಅಂದೇ ನೀಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.

    ಕೋವಿಡ್ ಕಂಟ್ರೋಲ್ ರೂಂ ಕಳೆದ 2 ಅಲೆಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಿದ್ದು, ಅದನ್ನು ಪುನರ್ ಕಾರ್ಯಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಜಟಿಲ ಸಮಸ್ಯೆಗಳು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು.

    3 ಮತ್ತು 4 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಆ ಪ್ರದೇಶವನ್ನು ಮೈಕ್ರೋ ಕಂಟೈನ್ಮೆAಟ್ ವಲಯ ಎಂದು ಘೋಷಿಸಬೇಕು. ಒಂದೇ ಪ್ರಕರu ಕಂಡುಬAದಲ್ಲಿ ಆ ಮನೆಯನು ಸೀಲ್ಡೌನ್ ಮಾಡಬೇಕು ಎಂದು ಸೂಚನೆ ನೀಡಿದರು.

    ಕೆ.ಪಿ.ಎಂ.ಇ ಅಡಿಯಲ್ಲಿ ನೊಂದಾಯಿಸಿರುವ ಕ್ಲಿನಿಕ್ನ ವೈದ್ಯರು ಹಾಗೂ ಎಲ್ಲಾ ಔಷದ ಮಾರಾಟಗಾರರು, ಶೀತ ಕೆಮ್ಮು ಜ್ವರಕ್ಕೆ ಚಿಕಿತ್ಸೆ ಹಾಗೂ ಔಷಧಗಳನ್ನು ಖರೀದಿಸುವವರ ಮಾಹಿತಿಯನ್ನು ತಪ್ಪದೆ ಪಡೆಯಬೇಕು. ಮಾಹಿತಿ ನೀಡದ ಮಾರಾಟಗಾರರಿಗೆ ದಂಡ ವಿಧಿಸಬೇಕು. ಈ ಬಗ್ಗೆ ನಿರಂತರವಾಗಿ ಫಾಲೋ ಅಪ್ ನಡೆಸುವಂತೆ ಸೂಚಿಸಿದರು.

    ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುವವರಿಗೆ ಪ್ರಾಣವಾಯುವಿನ ಕೊರತೆಯಾಗದಂತೆ ಹಾಲಿ ಇರುವುದÀಕ್ಕಿಂತ ಹೆಚ್ಚುವರಿಯಾಗಿ ಆಕ್ಸಿಜಿನ್ ಸಂಗ್ರಹಿಸಲು ಸಿಲೆಂಡರ್ಗಳು ಹಾಗೂ ಸಂಗ್ರಹಾಗಾರವನ್ನು ಹೆಚ್ಚಿಸಬೇಕು ಹಾಗೂ ಅಕ್ಸಿಜಿನ್ ಕಾನ್ಸ್ಸನ್ ಟ್ರೇಟÀರ್ಗಳು ಹೆಚ್ಚು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು

    ಜಿಲ್ಲೆಯ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಪೊಲೀಸರೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಿರಂತರ ಪರಿಶೀಲನೆ ಕೈಗೊಳ್ಳಬೇಕು ಎಂದ ಅವರು, ಅಂಗಡಿ ಮುಂಗಟ್ಟುಗಳನ್ನು ನಡೆಸುವ ಎಲ್ಲಾ ಮಾಲೀಕರು ಮತ್ತು ಸಿಬ್ಬಂದಿಗಳು ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡುವಂತೆ ಸ್ಥಳೀಯ ಸಂಸ್ಥೆಗಳು ಎಚ್ಚರವಹಿಸಬೇಕು. ಉಲ್ಲಂಘಿಸಿದಲ್ಲಿ ತಪ್ಪದೇ ದಂಡ ವಿಧಿಸಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಮೊದಲನೇ ಮತ್ತು 2ನೇ ಅಲೆಯಲ್ಲಿ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿವೆ. ಮುಂಬರುವ ಅಲೆಯನ್ನು ಎದುರಿಸಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಸೂಚನೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯ್ಕ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಮತ್ತು ಇತರೆ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d