Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗುವ ಸಮಸ್ಯೆ ಹಾಗೂ ಮಾರ್ಪಾಡುಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ
    Uncategorized

    ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗುವ ಸಮಸ್ಯೆ ಹಾಗೂ ಮಾರ್ಪಾಡುಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ

    Updated:04/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಹಾಗೂ ಮಾರ್ಪಾಡುಗಳ ಬಗ್ಗೆ ಚರ್ಚಿಸಿದರು.

    Click Here

    Call us

    Click Here

    ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕೆಳಗಿನಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದರು.

    ಕಸ್ತೂರಿ ರಂಗನ್ ವರದಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರಲಿದ್ದು, ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ.

    ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60% ಭೂ ಪ್ರದೇಶವು ಸಮೃದ್ಧ ಅರಣ್ಯವಾಗಿದೆ.

    ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತುಪಡೆಸಿ, ಸಂಪೂರ್ಣ ಅರಣ್ಯ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.

    Click here

    Click here

    Click here

    Call us

    Call us

    ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿ.ಮೀ.ವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸುವುದರಿಂದ, ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೇ, ರಾಜ್ಯ ಸರ್ಕಾರದ ವತಿಯಿಂದ ಈ ಭೂ ಪ್ರದೇಶದಲ್ಲಿ ಯಾವುದೇ ರೀತಿಯ ಔದ್ಯೋಗಿಕ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದುದರಿಂದ ಬಫರ್ ಜೋನ್ ನ್ನು ಸಂಪೂರ್ಣವಾಗಿ ಈ ವರದಿಯ ಪ್ರಸ್ತಾವನೆಯಿಂದ ಕೈಬಿಡಬೇಕು.
    ಜನರಿಂದ ತೀವ್ರ ವಿರೋದ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ.

    ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ, ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತೀ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್‌ ಪೋರ್ಸ್‌ ಅಥವಾ ಕಾರ್ಯ ಪಡೆ ರಚಿಸಲು ಮಾನ್ಯ ಕೇಂದ್ರ ಸಚಿವರಲ್ಲಿರಂಗನ್ತಿಸಿದರು.

    ತಮ್ಮ ಸಲಹೆಗಳನ್ನು ಕಸ್ತೂರಿ ರಂಗನ್ ರವರ ಕರಡು ವರದಿಯಲ್ಲಿ ಅಳವಡಿಸಿಕೊಂಡು, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.

    ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಆನಂದ್‌ ಸಿಂಗ್‌ ಹಾಗೂ ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರು, ಸಾಗರ ವಿಧಾನ ಸಭಾ ಸದಸ್ಯರಾದ ಹರತಾಳು ಹಾಲಪ್ಪರವರು ಸಂಸದರ ನಿಯೋಗದಲ್ಲಿದ್ದರು.

    ಮನವಿಯನ್ನು ಸ್ವೀಕರಿಸಿದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯವನ್ನು ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.