ಕೊಲ್ಲೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣಾ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಮಹಾ ಪರಿನಿರ್ವಾಣಾ ದಿನ ಆಚರಿಸಲಾಯಿತು.

Call us

Click Here

ಸಂಸ್ಥೆಯ ಪ್ರಾಂಶುಪಾಲರಾದ ಎಸ್. ಅರುಣ್‌ಪ್ರಕಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಡಾ. ಬಿ. ಆರ್. ಅಂಬೇಡ್ಕರ್‌ರವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಗೊಳ್ಳಬೇಕೆಂದು ಕರೆ ನೀಡಿದರು.

ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ದೀಕ್ಷಾ, ಪ್ರಥಮ ಕಲಾ ವಿಭಾಗದ ಕೀರ್ತನಾ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು ಹಾಗೂ ದ್ವಿತೀಯ ಕಲಾ ವಿಭಾಗದ ಸಿಂದುಶ್ರೀ ಮಯ್ಯ ದೇಶಭಕ್ತಿಗೀತೆ ಹಾಡಿದರು. ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ, ಎಂ ವಾಸುದೇವ ಉಡುಪ, ಜ್ಯೀತಿ ಎ ಶೆಟ್ಟಿ, ಪೂರ್ಣಿಮಾ ಎನ್ ಜೋಯಿಸ್, ಪ್ರ.ದ.ಸಹಾಯಕರಾದ ದಿನಕರ ಶೆಟ್ಟಿ, ಹಾಗೂ ಯತೀಶ್ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ನಿರೂಪಿಸಿ ಸ್ವಾಗತಿಸಿದರು, ಗಣಕಶಾಸ್ತ್ರ ಉಪನ್ಯಾಸಕ ರಾಮನಾಯ್ಕ ಕೆ.ಬಿಯವರು ವಿದ್ಯಾರ್ಥಿಗಳಿಗೆ ಮಧ್ಯಾವಾರ್ಷಿಕ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು, ಸಮಾಜಶಸ್ತ್ರ ಉಪನ್ಯಾಸಕರಾದ ನಾಗರಾಜ ಅಡಿಗ ಕೆ. ವಂದಿಸಿದರು.

Leave a Reply