ಕುಂದಾಪುರ ಶಿಕ್ಷ ಪ್ರಭಾ ಅಕಾಡೆಮಿ: ಬ್ಯಾಂಕಿಂಗ್ ಎಂಬಿಎ ಪರೀಕ್ಷೆ ತರಬೇತಿ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದೇಶಕ್ಕೆ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಡುಗೆಯಾಗಿ ನೀಡಿದ ಅವಳಿ ಜಿಲ್ಲೆ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಉದ್ಯೋಗಕ್ಕೆ ಮತ್ತು ಬ್ಯಾಂಕ್ ಪರೀಕ್ಷೆ ಎದುರಿಸಲು ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಕೆನರಾ ಬ್ಯಾಂಕ್ ರಿಕವರಿ ಮ್ಯಾನೇಜರ್ ಪ್ರಭಾಕರ ಶೆಟ್ಟಿ ಹೇಳಿದರು.

Call us

Click Here

ಇಲ್ಲಿನ ಶಿಕ್ಷಪ್ರಭಾ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಎಂ.ಬಿ.ಎ ಪರೀಕ್ಷೆ ತರಬೇತಿಯ ನೂತನ ಬ್ಯಾಚ್‌ನ್ನು ಉದ್ಘಾಟನೆಗೊಳಿಸಿ ಮಾತನಾಡಿ ದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು ಅದರಲ್ಲಿ ಸಿಂಹಪಾಲು ಅನ್ಯರಾಜ್ಯದ ವಿದ್ಯಾರ್ಥಿಗಳ ಪಾಲಾಗುತ್ತಿರುವುದು ಕಳವಳಕಾರಿ ಸಂಗತಿ. ವಿದ್ಯಾರ್ಥಿಗಳು ಪದವಿ ಹಂತದಲ್ಲೇ ಧೃಢ ನಿರ್ಧಾರ ಮಾಡಿ ಪ್ರಯತ್ನ ನಡೆಸಿದರೆ ನಿರಾಯಸವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಪ್ರಭಾ ಅಕಾಡೆಮಿ ಮುಂದಾಳತ್ವ ವಹಿಸಿರುವುದು ಸಂತಸದ ಸಂಗತಿ ಎಂದರು.

ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಮಾತನಾಡಿ ನಮ್ಮ ಸಂಸ್ಥೆಯ ಗುಣಮಟ್ಟ ಶಿಕ್ಷಕರು ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ನೀಡಲು ಸಿದ್ದರಿದ್ದು ವಿದ್ಯಾರ್ಥಿಗಳು ಬದ್ದತೆಯೊಂದಿಗೆ ತರಗತಿಗೆ ಹಾಜರಾಗಬೇಕು ಎಂದರು.

ಡಿ.11 ರಿಂದ ನೂತನ ಬ್ಯಾಚ್:
ಸ್ಪೇಸ್ ಸಂಸ್ಥೆಯಲ್ಲಿ ಡಿ. 11 ರಿಂದ ನೂತನ ಬ್ಯಾಂಕಿಂಗ್ ಮತ್ತು ಎಂ.ಬಿ.ಎ ಪ್ರವೇಶ ಪರೀಕ್ಷಾ ಬ್ಯಾಚ್ ಆರಂಭಗೊಳ್ಳಲ್ಲಿದ್ದು ಡಿಸೆಂಬರ್ ೧೧ ರಂದು ೨ ರಿಂದ ೫ ರ ತನಕ ತರಗತಿ ನಡೆಯಲಿದ್ದು ಪ್ರತಿ ಶನಿವಾರ ಮಧ್ಯಾಹ್ನ ಮತ್ತು ಭಾನುವಾರ ಬೆಳಗ್ಗೆ ಸಮಯದಲ್ಲಿ ತರಗತಿಗಳು ಶಿಕ್ಷ ಪ್ರಭಾ ಅಕಾಡೆಮಿಯ ಕುಂದೇಶ್ವರ ರಸ್ತೆಯ ಕಟ್ಟಡದಲ್ಲಿ ನಡೆಯುತ್ತದೆ. ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿಯಲ್ಲಿರುವ ವಿದ್ಯಾರ್ಥಿಗಳ ಜೊತೆಗೆ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಕೂಡ ಇದರ ಪ್ರಯೋಜನವನ್ನು ಪಡೆಯ ಬಹುದಾಗಿದೆ.

Leave a Reply