Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಳಾವರ ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂಪನ್ನ, ಸಹಸ್ರಾರು ಭಕ್ತರು ಭಾಗಿ
    ಊರ್ಮನೆ ಸಮಾಚಾರ

    ಕಾಳಾವರ ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂಪನ್ನ, ಸಹಸ್ರಾರು ಭಕ್ತರು ಭಾಗಿ

    Updated:09/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಡಿ.09:
    ಕರಾವಳಿಯ ಪ್ರಸಿದ್ಧ ನಾಗಕ್ಷೇತ್ರಗಳಲ್ಲಿ ಒಂದಾದ ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ ಅಂಗವಾಗಿ ಗುರುವಾರ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು ನಡೆದರೇ, ಬೆಳಿಗ್ಗೆಯಿಂದಲೇ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ದೇವರ ದರ್ಶನ ಪಡೆದು, ತಮ್ಮ ಹರಕೆಗಳನ್ನು ಸಲ್ಲಿಸಿ ಪುನೀತರಾದರು.

    Click Here

    Call us

    Click Here

    ಮೊದಲನೇ ದಿನ ಮುಂಜಾನೆ ನಾಲ್ಕು ಗಂಟೆಗೆ ಅಭಿಷೇಕ, ಪಂಚಾಮೃತ ಪೂಜೆ, ಮಂಗಳಾರತಿ, ಹಣ್ಣುಕಾಯಿ, ಕಲಸ ಸಮರ್ಪಣೆ, ದೇವರ ದರ್ಶನ, ತೀರ್ಥ ಪ್ರಸಾದ ವಿತರಣೆ, ವೇದ ಪಾರಾಯಣ, ಮಡೆ ಪ್ರದಕ್ಷಿಣೆ, ಕಲಶಾಭಿಷೇಕ, ಕ್ಷೇತ್ರ ಪ್ರದಕ್ಷಿಣೆ, ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಮಹಾಲಿಂಗೇಶ್ವರ ದೇವರಿಗೆ ರಂಗಪೂಜೆ ನಡೆಯಿತು. ಮಧ್ಯಹ್ನದ ವೇಳೆ ದೇವಳದ ನಾಗರಹಾವು ದರ್ಶನ ನೀಡಿರುವುದು ಭಕ್ತರನ್ನು ಇನ್ನಷ್ಟು ಪುಳಕಗೊಳಿಸಿತು. ಮೊದಲ ದಿನ ಅಂದಾಜು ಹತ್ತು ಸಾವಿರ ಮಂದಿ ದೇವರ ದರ್ಶನ ಪಡೆದು ಹೂಕಾಯಿ ಹರಕೆ ಸಮರ್ಪಿಸಿದರು. ಮೂರು ಸಾವಿರ ಮಂದಿ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು.

    ವಿವಾಹ, ಸಂತಾನ, ರೋಗ ಸಂಬಂಧಿತ ಸಮಸ್ಯೆ ಎದುರಾದ ಸಂದರ್ಭದಲ್ಲಿ ಶ್ರೀ ದೇವರಲ್ಲಿ ಹರಕೆ ಹೊತ್ತುಕೊಂಡವರು ಷಷ್ಟಿಯ ದಿನ ದೇವಳಕ್ಕೆ ಬಂದು ಹರಕೆ ತೀರಿಸುವುದು ವಾಡಿಕೆಯಾಗಿದ್ದು ಅದರಂತೆ ಹಲವು ಮಂದಿ ಹರಕೆ ತೀರಿಸಿದರು. ಚರ್ಮ ರೋಗ, ಹಲ್ಲು ನೋವು, ಕಣ್ಣು ನೋವು, ಗಂಟು ನೋವು ಮುಂತಾದ ರೋಗಬಾಧೆಗಳಿಗೆ ಬೆಳ್ಳಿಯ ನಾನಾ ಆಕಾರದ ಆಕೃತಿಗಳನ್ನು ದೇವರಿಗೆ ಸಮರ್ಪಿಸುವುದರ ಮೂಲಕ ಹರಕೆ ಸಲ್ಲಿಸಿದರು. ಸಿಂಗಾರ ಪುಷ್ಪ ಪ್ರೀಯವಾದ ದೇವರಿಗೆ ಸಿಂಗಾರ ಅರ್ಪಿಸುವುದು ಕಂಡುಬಂತು.

    ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್. ಚಂದ್ರಶೇಖರ್ ಹೆಗ್ಡೆ, ಸಮಿತಿ ಸದಸ್ಯರಾದ ಅರ್ಚಕ ಸತ್ಯನಾರಾಯಣ ಪುರಾಣಿಕ, ಭರತ್ ಕುಮಾರ್ ಶೆಟ್ಟಿ, ಚಂದ್ರ ಪೂಜಾರಿ ಕಾಳಾವರ, ಮಹೇಶ್ ಕಾಳಾವರ, ಲತಾ ಎಸ್. ಕಾಳಾವರ, ಲಲಿತಾ ಸಳ್ವಾಡಿ, ಕೆ. ರಂಜಿತ್ ಕುಮಾರ್ ಶೆಟ್ಟಿ, ಅಶೋಕ್ ಶೆಟ್ಟಿ ಕಾಳಾವರ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ರವಿರಾಜ್ ಎನ್. ಶೆಟ್ಟಿ, ಅರ್ಚಕರು, ತಂತ್ರಿಗಳು, ಊರ ಪ್ರಮುಖರಾದ ಕೃಷ್ಣದೇವ ಕಾರಂತ್, ಬಾಲಚಂದ್ರ ಶೆಟ್ಟಿ, ದೀಪಕ್ ಕುಮಾರ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

    ಡಿ.10 ರಂದು ಬೆಳಿಗ್ಗೆ ಹಾಲಿಟ್ಟು ಸೇವೆ, ಕಟ್ಟುಕಟ್ಟಳೆ ಸೇವೆ, ನಾಗ ಮಂಡಲೋತ್ಸವ, ಮಧ್ಯಾಹ್ನ ಶ್ರೀ ಕ್ಷೇತ್ರ ಪ್ರದಕ್ಷಿಣೆ, ಕ್ಷೇತ್ರಪಾಲನಿಗೆ ಪೂಜೆ, ಶ್ರೀ ಭೂತರಾಯ ಸ್ವಾಮಿಗೆ ತೆಂಗಿನಕಾಯಿ ಸೇವೆ, ಸಂದರ್ಶನ, ರಾತ್ರಿ 7ರಿಂದ ಹಾಲಾಡಿ ಮೇಳದವರಿಂದ ಕಾಲಮಿತಿ ಯಕ್ಷಗಾನ ಜರುಗಲಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.