ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ

Call us

Call us

Call us

Call us

Call us

ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ: ಡಾ. ವೈ. ಭರತ್ ಶೆಟ್ಟಿ

Call us

Click Here

Click here

Click Here

Call us

Visit Now

Click here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ ಕಾರ್ಯನಿರ್ವಹಿಸುತ್ತವೆ. ದೇವಳದಲ್ಲಿ ಕೆಲಕಾಲ ವಿರಮಿಸಿದರೆ ಮನಸ್ಸು ಪ್ರಪುಲ್ಲಗೊಂಡು ಮಾನಸಿಕವಾಗಿ ನೆಮ್ಮದಿ ಉಂಟಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಹೇಳಿದರು.

ಅವರು ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ಶನಿವಾರ ಹಮ್ಮಿಕೊಂಡ ಧಾರ್ಮಿಕ – ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಗೋಕರ್ಣ ಹೊರತುಪಡಿಸಿ ಭಕ್ತರು ದೇವರನ್ನು ಮುಟ್ಟಿ ಪೂಜೆ ಮಾಡುವ ಅವಕಾಶವಿರುವುದು ವಣಕೊಡ್ಲುವಿನಲ್ಲಿ ಮಾತ್ರ. ಪ್ರಾಚೀನ ದೇಗುವ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ವಿಚಾರ ಎಂದರು.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮನವಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿ ಬಹಳ ಪ್ರಸಿದ್ಧ ಪಡೆದಿರುವ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಂಡಾಗಲೇ ದೇವತಾ ಕಾರ್ಯ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದರು.

ವಣಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಯಡ್ತರೆ ರಾಜಮೋಹನ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅಷ್ಟಮಂಗಲ ಪ್ರಶ್ನೆಯಲ್ಲಿ ಹೇಳಿರುವಂತೆ ಪುರಾತನವಾದ ಈ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಊರವರು ಹಾಗೂ ದಾನಿಗಳ ಈ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.

Call us

ಸ್ಥಳೀಯರಾದ ಉದಯ ಮರಾಠಿ ಸ್ವಾಗತಿಸಿ, ರಾಜೇಂದ್ರ ಮರಾಠಿ ಕಾರ್ಯಕ್ರಮ ನಿರೂಪಿಸಿದರು.

ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಯಾಗ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ:
► ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ – https://kundapraa.com/?p=55996
.

Leave a Reply

Your email address will not be published. Required fields are marked *

15 − twelve =