Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರರ ಕಷ್ಟ ನಮ್ಮದೆಂದು ಸ್ಪಂದಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ: ಡಾ ಗೋವಿಂದ ಬಾಬು ಪೂಜಾರಿ
    ಊರ್ಮನೆ ಸಮಾಚಾರ

    ಪರರ ಕಷ್ಟ ನಮ್ಮದೆಂದು ಸ್ಪಂದಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ: ಡಾ ಗೋವಿಂದ ಬಾಬು ಪೂಜಾರಿ

    Updated:13/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇನ್ನೊಬ್ಬರ ಕಷ್ಟಗಳನ್ನು ನಮ್ಮ ಕಷ್ಟ ಎಂಬ ಭಾವನೆಯೊಂದ ಸೇವೆ ಸಲ್ಲಿಸಿದಾಗ ಸಾರ್ಥಕ್ಯ ದೊರೆಯುತ್ತದೆ. ನಾವು ದುಡಿದ ಒಂದು ಭಾಗವನ್ನು ಸಮಾಜಕ್ಕೆ ನೀಡಿದಾಗ ಅದರ ಪ್ರತಿಫಲವೂ ಸಿಕ್ಕೆ ಸಿಗುತ್ತದೆ ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನ ಶಾರದಾ ವೇದಿಕೆಯಲ್ಲಿ ಜೇಸಿಐ ಬೈಂದೂರು ಸಿಟಿ ಇದರ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ ಜೇಸಿ ಸಂಭ್ರಮ 2021 ಉದ್ಘಾಟಿಸಿ ಮಾತನಾಡಿ ಜೇಸಿ ಸಂಸ್ಥೆ ಯುವ ಜನತೆಯಲ್ಲಿ ವ್ಯಕ್ತಿತ್ವ ನಿರ್ಮಾಣ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡಲು ಶ್ರಮವಹಿಸುತ್ತಿರುವುದು ಶ್ಲಾಘನೀಯ ಎಂದರು.

    ಮಂಗಳೂರು ವಲಯ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಶ್ರೀಧರ ಪಿ ಅವರಿಗೆ ಈ ಬಾರಿ ಜೇಸಿ ಸಾಧನಶ್ರೀ ಪ್ರಶಸ್ತಿ ಪುರಸ್ಕಾರ ನೀಡಿ, ಗೌರವಿಸಲಾಯಿತು. ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

    ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷ ಪಿ ಶ್ರೀಧರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ರಾಜೇಶ್ ಐತಾಳ್ ಬೈಂದೂರು, ಜೇಸಿ ಪೂರ್ವ ವಲಯಾಧ್ಯಕ್ಷ ಆಲನ್ ರೋಹನ್ ವಾಜ್ ಉದ್ಯಾವರ, ಲಾವಣ್ಯ ರಿ ಬೈಂದೂರು ಅಧ್ಯಕ್ಷ ಹರೆಗೋಡು ಉದಯ್ ಆಚಾರ್, ಸುರಭಿ ರಿ ಬೈಂದೂರು ಅಧ್ಯಕ್ಷ ನಾಗರಾಜ್ ಪಿ. ಯಡ್ತರೆ, ಜೇಸಿಐ ಬೈಂದೂರು ಸಿಟಿಯ ಜೇಸಿರೇಟ್ ಅಧ್ಯಕ್ಷೆ ಅನಿತಾ ಆರ್. ಕೆ ಮರವಂತೆ ವೇದಿಕೆಯಲ್ಲಿದ್ದರು.

    ಜೇಸಿ ಸಂಭ್ರಮ 2021ರಲ್ಲಿ ಬೆಸ್ಟ್ ಮೆನ್ ಪ್ರಶಸ್ತಿಯನ್ನು ಯು ರಾಘವೇಂದ್ರ ಹೊಳ್ಳ ಹಾಗೂ ಬೆಸ್ಟ್ ಹುಮೆನ್ ಪ್ರಶಸ್ತಿಯನ್ನು ಚೈತ್ರಾ ಸತೀಶ್ ಅವರಿಗೆ ನೀಡಲಾಯಿತು. ಜೇಸಿಐ ಬೈಂದೂರು ಸಿಟಿಯ ಸ್ಥಾಪಕ ಕಾರ್ಯದರ್ಶಿ ಹರೆಗೋಡು ಸುಶಾಂತ್ ಆಚಾರ್ ಇವರಿಗೆ ಯುವ ಜೇಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಜೇಸಿಐ ಬೈಂದೂರು ಸಿಟಿಯ ಸ್ಥಾಪಕಾಧ್ಯಕ್ಷ ಮಣಿಕಂಠ ಎಸ್ ಪ್ರಾಸ್ತಾವಿಕ ಮಾತನಾಡಿದರು, ಭಾನುಮತಿ ಜಯಾನಂದ ಬಿ.ಕೆ ಜೇಸಿವಾಣಿ ವಾಚಿಸಿದರು. ಜೇಸಿಐ ಸದಸ್ಯರಾದ ಸತೀಶ್ ಎಮ್ ಹಾಗೂ ಚೈತ್ರಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಜೇಸಿಐ ಬೈಂದೂರು ಸಿಟಿಯ ಕಾರ್ಯದರ್ಶಿ ಸವಿತಾ ದಿನೇಶ್ ಗಾಣಿಗ ವಂದಿಸಿದರು.

    ಬಳಿಕ ಕುಂದಾಪುರ ಮೂರುಮುತ್ತು ಕಲಾತಂಡದವರಿಂದ ಹಾಸ್ಯಮಯ ನಗೆ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.