Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.19ಕ್ಕೆ ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ, ಥೇಮ್ಸ್ ತಟದ ತವಕ ತಲ್ಲಣಗಳು ಪುಸ್ತಕ ಬಿಡುಗಡೆ
    ಬೈಂದೂರು

    ಡಿ.19ಕ್ಕೆ ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ, ಥೇಮ್ಸ್ ತಟದ ತವಕ ತಲ್ಲಣಗಳು ಪುಸ್ತಕ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಹಿರಿಯ ಪತ್ರಿಕೋದ್ಯಮಿ, ಬರಹಗಾರ ಸತೀಶ ಚಪ್ಪರಿಕೆ ಅವರ ’ಥೇಮ್ಸ್ ತಟದ ತವಕ ತಲ್ಲಣಗಳು’ ಮತ್ತು ಉದಯೋನ್ಮುಖ ಲೇಖಕ ಯೋಗೀಂದ್ರ ಮರವಂತೆ ಅವರ ’ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ’ ಪುಸ್ತಕಗಳು ಡಿ.19ರ ಸಂಜೆ 5ಕ್ಕೆ ಬೆಂಗಳೂರಿನ ಬನಶಂಕರಿ ಎರಡನೆ ಹಂತದ ಬಿ. ವಿ. ಕಾರಂತ ರಸ್ತೆಯ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಬಿಡುಗಡೆಗೊಳ್ಳಲಿವೆ.

    Click Here

    Call us

    Click Here

    ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅಧ್ಯಕ್ಷತೆ ವಹಿಸಿ, ಪುಸ್ತಕ ಬಿಡುಗಡೆ ಮಾಡುವರು. ಹಿರಿಯ ಪತ್ರಕರ್ತ, ಲೇಖಕ ಜೋಗಿ, ಲೇಖಕ, ಅಂಕಣಕಾರ ಕೆ. ಸಿ. ರಘು, ಮೈಲ್ಯಾಂಗ್ ಬುಕ್ಸ್‌ನ ಸಹ ಸಂಸ್ಥಾಪಕ ವಸಂತ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು. ಪುಸ್ತಕ ಪ್ರಕಟಿಸಿರುವ ನವ ಕರ್ನಾಟಕ ಪಬ್ಲಿಕೇಷನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ ಉಡುಪ ಉಪಸ್ಥಿತರಿರುವರು.

    ಸತೀಶ ಚಪ್ಪರಿಕೆ ಪತ್ರಿಕೋದ್ಯಮದ ಉನ್ನತ ಅಧ್ಯಯನಕ್ಕೆ ಬ್ರಿಟಿಷ್ ಶಿವ್ನಿಂಗ್ ಸ್ಕಾಲರ್‌ಶಿಪ್ ಪಡೆದು ಲಂಡನ್‌ನಲ್ಲಿ ನಡೆಸಿದ ವ್ಯಾಸಂಗದ ಅವಧಿಯಲ್ಲಿ ಗ್ರೇಟ್ ಬ್ರಿಟನ್‌ನಲ್ಲಿ ಮಾಡಿದ ವೃತ್ತಿಪರ ನೆಲೆಯೊಳಗಿನ ಸುತ್ತಾಟ ಮತ್ತು ಆ ವೇಳೆ ಜಾಗತಿಕ ಮಾಧ್ಯಮ ಲೋಕದಲ್ಲಿ ನಡೆಸಿದ ಪ್ರವಾಸದ ಅನುಭವ ಆಧರಿತ ಸೃಜಶೀಲ ಬರೆವಣಿಗೆ ’ಥೇಮ್ಸ್ ತಟದ ತವಕ ತಲ್ಲಣಗಳು.’ ಇದಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರಕಿದ್ದು, ಈಗ ಎರಡನೇ ಮುದ್ರಣ ಹೊರಬರುತ್ತಿದೆ.

    ಲಂಡನ್ ಸಮೀಪದ ಬ್ರಿಸ್ಟಲ್‌ನಲ್ಲಿ ಕೆಲವು ವರ್ಷಗಳಿಂದ ವೃತ್ತಿ ನಿಮಿತ್ತ ನೆಲೆಸಿರುವ ಯೋಗೀಂದ್ರ ಮರವಂತೆ ಅವರ ಪ್ರಬಂಧ ಸಂಕಲನ ’ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ’ ಆ ದೇಶ ತೀವ್ರವಾಗಿ ಎದುರಿಸಿದ ಕೊರೊನಾ ಕಾಲದ ಅನುಭವ, ವಿದ್ಯಮಾನ, ಪ್ರಸಂಗ, ವ್ಯಕ್ತಿ ವಿಶೇಷಗಳ ನಿರೂಪಣೆ. ಈ ಪುಸ್ತಕಕ್ಕೆ ಹಿರಿಯ ಲೇಖಕ ಎಸ್. ದಿವಾಕರ ಮುನ್ನುಡಿ ಬರೆದಿದ್ದಾರೆ. ಯೋಗೀಂದ್ರ ಅವರ ಮೊದಲ ಪ್ರಬಂಧ ಸಂಕಲನ ’ಲಂಡನ್ ಡೈರಿ-ಅನಿವಾಸಿಯ ಪುಟಗಳು’ ಕನ್ನಡ ಸಾಹಿತ್ಯ ಪರಿಷತ್ತಿನ ೨೦೧೯ನೇ ಸಾಲಿನ ರತ್ನಾಕರ ವರ್ಣಿ-ಮುದ್ದಣ ದತ್ತಿ ಪ್ರಶಸ್ತಿ ಪಡೆದಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಉಡುಪಿ ಜಿಲ್ಲಾ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ರಿಷಿಕಾ ದೇವಾಡಿಗ ಆಯ್ಕೆ

    13/12/2025

    ಬೈಂದೂರು ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.