Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯಲ್ಲಿ ಮಹಿಳಾ ಶಕ್ತಿಯ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಿದ್ದತೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯಲ್ಲಿ ಮಹಿಳಾ ಶಕ್ತಿಯ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಿದ್ದತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಸ್ವ
    ಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿ ದ್ರವ ತ್ಯಾಜ್ಯ ನಿರ್ವಹಣೆ ಪ್ರಮುಖ ಘಟಕಾಂಶವಾಗಿದ್ದು, ಗ್ರಾಮಗಳಲ್ಲಿ ದಿನನಿತ್ಯ ಸ್ನಾನದ ಮನೆಯಿಂದ, ಪಾತ್ರೆ ತೊಳೆಯುವುದರಿಂದ, ಬಟ್ಟೆ ಒಗೆಯುವುದಿಂದ ಮನೆಗಳಲ್ಲಿ ಉತ್ಪತ್ತಿಯಾಗುವ, ಹಾಗೂ ಹೋಟೆಲ್, ಮದುವೆ ಹಾಲ್ ಇತ್ಯಾದಿ ವಾಣಿಜ್ಯ ಕೇಂದ್ರಗಳಿಂದ ಉತ್ಪತ್ತಿಯಾಗುವ ಬೂದು ನೀರನ್ನು ಕಿಚನ್ ಗಾರ್ಡನ್ ಮೂಲಕ, ವೈಯಕ್ತಿಕ ಅಥವಾ ಸಮುದಾಯ ಹಂತದ ಸೋಕ್ ಪಿಟ್ ನಿರ್ಮಾಣ ಅಥವಾ ಇತರೇ ಸೂಕ್ತ ವಿಧಾನದ ಮೂಲಕ ವೈಜ್ಞಾನಿಕವಾಗಿ ಮಾಡಬೇಕಾಗುತ್ತದೆ. ಇದಕ್ಕಾಗಿ ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವಿಸ್ತೃತಾ ಯೋಜನೆಯನ್ನು ಸಿದ್ದಪಡಿಸಿ, ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

    Click Here

    Call us

    Click Here

    ಅದರಂತೆ ಪ್ರಥಮ ಹಂತದಲ್ಲಿ ದ್ರವ ನಿರ್ವಹಣೆ ಕುರಿತಂತೆ, ಪ್ರತಿ ತಾಲೂಕಿನಲ್ಲಿ ಒಂದೊಂದು ಗ್ರಾಮ ಪಂಚಾಯತ್ ಗಳನ್ನು ಗುರುತಿಸಿ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ ಮಹಿಳಾ ಶಕ್ತಿ ನಡೆ – ದ್ರವ ತ್ಯಾಜ್ಯ ನಿರ್ವಹಣೆ ವಿಶೇಷ ಅಭಿಯಾನ ಎಂಬ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ.

    ಈ ಕಾರ್ಯಕ್ರಮದ ಮೂಲಕ ದ್ರವ ತ್ಯಾಜ್ಯ ನಿರ್ವಹಣೆ ಕುರಿತಂತೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ, ಮನೆ ಮನೆಯಲ್ಲಿ ಸೋಕ್ ಪಿಟ್ ನಿರ್ಮಿಸಿಕೊಳ್ಳುವಂತೆ ಪ್ರೇರಣೆ ನೀಡಲಾಗುತ್ತದೆ ಹಾಗೂ ಸಮುದಾಯದಲ್ಲಿ ಇವರ ಮೂಲಕ ಅರಿವು ಮೂಡಿಸಲಾಗುತ್ತದೆ.

    ಕುಂದಾಪುರದ ಹಕ್ಲಾಡಿ, ಬೈಂದೂರು ನ ಗೋಳಿಹೊಳೆ, ಉಡುಪಿಯ ತಾಲೂಕಿನ ಕೊಡಿಬೆಟ್ಟು, ಬ್ರಹ್ಮಾವರದ ಚೇರ್ಕಾಡಿ, ಕಾಪು ನ ಎಲ್ಲೂರು, ಹೆಬ್ರಿ ಮಡಾಮಕ್ಕಿ ಹಾಗೂ ಕಾರ್ಕಳ ದ ಹಿರ್ಗಾನ ಗ್ರಾಮ ಪಂಚಾಯತ್ ಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

    ಸೋಕ್ ಪಿಟ್ ನಿರ್ಮಾಣ ಹೇಗೆ:
    ಮನೆಯೊಂದಕ್ಕೆ 1.44 ಚದುರ ಮೀ ನಲ್ಲಿ 0.6 ಮೀ ವ್ಯಾಸದ ಮತ್ತು 1.8 ಮೀ ಆಳದ ಇಂಗು ಗುಂಡಿ ನಿರ್ಮಿಸಬಹುದು.ಜಾಗ ಕಡಿಮೆ ಇದ್ದು , ಹಲವಾರು ಮನೆಗಳಿದ್ದರೆ ಸಾಮೂಹಿಕ ಇಂಗು ಗುಂಡಿ ನಿರ್ಮಿಸಬಹುದು. ಇದು ಒಣ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟಲು ಹೆಚ್ಚಲು ಅತ್ಯಂತ ಸಹಕಾರಿಯಾಗಲಿದೆ. ಈ ಗುಂಡಿಗಳ ನಿರ್ಮಾಣಕ್ಕೆ ಪರಿಣಿತರ ಹಾಗೂ ತಂತ್ರಜ್ಞರ ಅಗತ್ಯವಿಲ್ಲ. ಇದನ್ನು ನಿರ್ಮಿಸಲು ತಗಲುವ ವೆಚ್ಚ ಅತ್ಯಂತ ಕಡಿಮೆ ಇದ್ದು, ಉದ್ಯೋಗ ಖಾತರಿ ಯೋಜನೆಯಡಿ ಆರ್ಥಿಕ ನೆರವೂ ಸಹ ದೊರೆಯಲಿದೆ. ನಿರ್ವಹಣೆಯೂ ಸುಲಭವಾಗಿದ್ದು, 5-6 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕಾಗುತ್ತದೆ.

    Click here

    Click here

    Click here

    Call us

    Call us

    ಸೋಕ್ ಪಿಟ್ ನಿರ್ಮಾಣದಿಂದ ಬೂದು ನೀರನ್ನು ಸಮರ್ಪಕವಾಗಿ ಬಳಸಲು ಸಹಕಾರಿಯಾಗಲಿದ್ದು, ಬೂದು ನೀರು ಅಲ್ಲಲ್ಲಿ ನಿಲ್ಲುವುದು ತಪ್ಪುತ್ತದೆ, ಈ ನೀರನ್ನು ಕಿಚನ್ ಗಾರ್ಡನ್ ಗಳಿಗೆ ಬಳಸಬಹುದಾಗಿದ್ದು, ಇದರಿಂದ ವ್ಯರ್ಥವಾಗಿ ನೀರಿ ಹರಿದು ಹೋಗುವುದು ತಪ್ಪುವುದರೊಂದಿಗೆ ಸುಂದರ ಪರಿಸರ ನಿರ್ಮಾಣವಾಗಲಿದೆ.

    ಡಿ.18 ರಂದು ಉಡುಪಿಯ ಕೊಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಇದರಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮ, ದ್ರವ ತ್ಯಾಜ್ಯ ವಿಸ್ತೃತಾ ಯೋಜನಾ ವರದಿಯ ಮಂಡನೆ ಮತ್ತು ಚರ್ಚೆ, ವಿವಿಧ ಕಿರುಚಿತ್ರಗಳ ಪ್ರದರ್ಶನ, ದ್ರವ ತ್ಯಾಜ್ಯ ನಿರ್ವಹಣೆ ವಸ್ತುಪ್ರದರ್ಶನ, ಸೋಕ್ ಪಿಟ್ ನಿರ್ಮಾಣದ ಪ್ರಾತ್ಯಕ್ಷಿಕೆ, ವಾಣಿಜ್ಯ ಕೇಂದ್ರಗಳಿಗೆ ತೆರಳಿ ಅರಿವು ಮೂಡಿಸುವುದು ಮುಂತಾದ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.

    * ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ದ್ರವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸೋಕ್ಪಿಟ್ ಗಳ ನಿರ್ಮಾಣ ಸಹಕಾರಿಯಾಗಲಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವ ಮೂಲಕ ಕೈ ತೋಟ, ಪೌಷ್ಠಿಕ ತೋಟಗಳನ್ನು ನಿರ್ಮಿಸಿಕೊಳ್ಳಬಹುದಾಗಿದ್ದು, ಈ ವಿಧಾನ ಜಿಲ್ಲೆಗೆ ಹೆಚ್ಚು ಸೂಕ್ತವಾಗಲಿದೆ. ಇದರಿಂದ ವೈಜ್ಞಾನಿಕ ರೀತಿಯಲ್ಲಿ ಅಂತರ್ಜಲದ ವೃದ್ಧಿಯೂ ಆಗಲಿದೆ. ಈ ಬಗ್ಗೆ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರ ಮೂಲಕ ಜಿಲ್ಲೆಯಾದ್ಯಂತ ಅರಿವು ಮೂಡಿಸಲಾಗುತ್ತಿದೆ. – ಡಾ.ನವೀನ್ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    15 − one =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.