ಬಿ.ಬಿ. ಹೆಗ್ಡೆ ಕಾಲೇಜು ಎನ್ಸಿಸಿ ಆರ್ಮಿ ಘಟಕದ ಸೈಕಲ್ ಜಾಥಾ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್ಸಿಸಿ ಆರ್ಮಿ ಘಟಕದ ಆಯೋಜನೆಯಲ್ಲಿ ಕುಂದಾಪುರದಿಂದ ಮರವಂತೆ ತನಕ ಸೈಕಲ್ ಜಾಥಾವನ್ನು ಡಿಸೆಂಬರ್ 18ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ನಾಯ್ಕ್ ಎನ್ಸಿಸಿ ಧ್ವಜ ಏರಿಸುವುದರ ಮೂಲಕ ಜಾಥಕ್ಕೆ ಚಾಲನೆ ನೀಡಿದರು. ನಾಗರಿಕ ಸಮಾಜವನ್ನು ಎಚ್ಚರಿಸುವ ಭಿತ್ತಿ ಪತ್ರಗಳನ್ನು ಹೊಂದಿರುವ, ವಿವಿಧ ಸಾಮಾಜಿಕ ಸಂದೇಶ ಸಾರುವ ಸೈಕಲ್ಗಳಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಮರವಂತೆ ಬೀಚ್ ತನಕ ಪಯಣಿಸಿದರು.

Call us

Click Here

ಚಾಲನೆ ವೇಳೆ ಕುಂದಾಪುರಠಾಣಾಧಿಕಾರಿ ಸದಾಶಿವ್ ಆರ್ ಗೌರೋಜಿ, ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಶಿವರಾಜ್ ಸಿ. ಎನ್ಸಿಸಿ ಅಧಿಕಾರಿ ಮತ್ತು ಸಹ ಸಂಯೋಜಕ ಸುಜಯ್ ಹಾಗೂ ಕಾಲೇಜಿನ ಬೋಧಕ ಬೋಧಕೇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಸೌಮ್ಯ ಕುಂದರ್ ನಿರೂಪಿಸಿ ವಂದಿಸಿದರು.

Leave a Reply