Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ಬೈಂದೂರು ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ
    ಊರ್ಮನೆ ಸಮಾಚಾರ

    ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ಬೈಂದೂರು ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಜನರ ವಿಶ್ವಾಸ ಗಳಿಸುವುದರಲ್ಲಿ ಹಣಕಾಸು ಸಂಸ್ಥೆಗಳ ಯಶಸ್ಸು ಅಡಗಿದೆ. ಮೂರು ದಶಕದ ಇತಿಹಾಸ ಹೊಂದಿರುವ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಇಂದು ಜನರ ವಿಶ್ವಾಸ ಗಳಿಸಿ ಮುನ್ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ| ವಂ| ಸ್ಟ್ಯಾನಿ ತಾವ್ರೊ ಹೇಳಿದರು.

    Click Here

    Call us

    Click Here

    ಭಾನುವಾರ ಯಡ್ತರೆಯಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಇದರ ಬೈಂದೂರು ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ ಹಾಗೂ ಸ್ಥಳಾಂತರ ನೆರವೇರಿಸಿ ಮಾತನಾಡಿ ಸಂಸ್ಥೆಯ ಬೆಳೆಯುವುದರೊಂದಿಗೆ ಜನರಿಗೆ ನಗುಮೊಗದ ಸೇವೆ ನೀಡುವುದು ಅತಿ ಅಗತ್ಯ. ಮನೆಯಾಗಲಿ, ಸಂಸ್ಥೆಯಾಗಲಿ ಸ್ವಂತದ್ದಾಗಿರಲು ಎಲ್ಲರೂ ಬಯಸುತ್ತಾರೆ ಅದರಂತೆ ಬೈಂದೂರು ಶಾಖೆಯು 23 ವರ್ಷಗಳ ಬಳಿಕ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಇದರೊಂದಿಗೆ ಜನರಿಗೆ ಉತ್ತಮ ಸೇವೆ ನೀಡಲಿ ಎಂದರು.

    ಬೈಂದೂರು ಹೋಲಿ ಕ್ರಾಸ್ ಚರ್ಚ್ ಧರ್ಮಗುರುಗಳಾದ ವಂ| ವಿನ್ಸೆಂಟ್ ಕುವೆಲ್ಲೋ ಆಶೀರ್ವದಿಸಿ, ಹೊಸ ಕಟ್ಟಡ ನಿರ್ಮಾಣಗೊಳ್ಳುವುದರ ಜೊತೆಗೆ ಸಂಸ್ಥೆ ಈ ಭಾಗದಲ್ಲಿ ಮತ್ತಷ್ಟು ಖ್ಯಾತಿಗಳಿಸಲಿ, ಎಲ್ಲರ ಸಹಕಾರದಿಂದ ಅಭಿವೃದ್ಧಿ ಹೊಂದಲಿ ಎಂದು ಆಶಿಸಿದರು.

    ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜಾನ್ಸನ್ ಡಿ’ಅಲ್ಮೇಡಾ ಅಧ್ಯಕ್ಷತೆ ವಹಿಸಿ ಮಾತನಾಡಿ ಕುಂದಾಪುರ ವಲಯ ಕ್ಯಾಥೋಲಿಕ ಸಭಾ ಒಟ್ಟಾಗಿ ಹಣಕಾಸು ಸೇವೆ ಒದಗಿಸುವ ಸಲುವಾಗಿ 1992ರಲ್ಲಿ ಆರಂಭಿಸಿದ ಸಂಸ್ಥೆ ನಿರಂತರವಾಗಿ ಪ್ರಗತಿ ಸಾಧಿಸುತ್ತಾ ಬಂದಿದೆ. 1.23 ಲಕ್ಷ ಬಂಡವಾಳದಿಂದ ಆರಂಭವಾದ ಸಂಸ್ಥೆ ಇಂದು 118 ಕೋಟಿಗೆ ಬಂದು ತಲುಪಿದ್ದು, ಗ್ರಾಹಕರ ವಿಶ್ವಾಸ ಗಳಿಸಿರುವುದಕ್ಕೆ ಇದು ಸಾಕ್ಷಿಯಾಗಿದೆ. ಸಂಸ್ಥೆಯ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಇದು ಸಾಧ್ಯವಾಗಿದೆ. ಸಂಸ್ಥೆಯ ಮೊದಲ ಶಾಖೆಯಾದ ಬೈಂದೂರು ಶಾಖೆಯೂ ಉತ್ತಮ ವಹಿವಾಟು ನಡೆಸುತ್ತಿದೆ ಎಂದರು.

    ಈ ಸಂದರ್ಭ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ನೂತನ ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಕಿರಣ್ ಲೋಬೋ ಉಪಸ್ಥಿತರಿದ್ದರು. ನಿರ್ದೇಶಕರಾದ ಫಿಲಿಪ್ ಡಿಕೋಸ್ತಾ, ಜೇಕಬ್ ಡಿ’ಸೋಜ, ಶಾಂತಿ ಆರ್. ಕರ್ವಾಲ್ಲೊ, ವಿನೋದ್ ಕ್ರಾಸ್ಟೊ, ಬ್ಯಾಪ್ಟಿಸ್ಟ್ ಡಯಾಸ್, ಪ್ರಕಾಶ್ ಲೋಬೊ, ವಿಲ್ಫ್ರೇಡ್ ಮಿನೇಜಸ್, ಓಝ್ಲಿನ್ ರೆಬೆಲ್ಲೊ, ತಿಯೋದರ್ ಒಲಿವೆರಾ, ಟೆರೆನ್ಸ್ ಸುವಾರಿಸ್, ವಿಲ್ಸನ್ ಡಿ’ಸೋಜ, ಸಂತೋಷ್ ಡಿ’ಸಿಲ್ವಾ, ಡೇರಿಕ್ ಡಿಸೋಜಾ ಉಪಸ್ಥಿತರಿದ್ದರು.

    ಸೊಸೈಟಿಯ ಶಾಖಾ ಸಭಾಪತಿ, ನಿರ್ದೇಶಕಿ ಶಾಂತಿ ಡಾಯಸ್ ಸ್ವಾಗತಿಸಿದರು. ಪ್ರಬಾರ ಮುಖ್ಯ ಕಾರ್ಯನಿರ್ವಹಾಧಿಕಾರಿ ಮೇಬಲ್ ಡಿ’ಅಲ್ಮೇಡಾ ವಂದಿಸಿದರು.ನಿರ್ದೇಶಕರಾದ ಡಯಾನಾ ಡಿ’ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    11 + 12 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.