Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯ ಡೀಮ್ಸ್ ಫಾರೆಸ್ಟ್ ಸಮಸ್ಯೆ ಪರಿಹಾರಕ್ಕೆ ಸದನದಲ್ಲಿ ಕೆ. ಪ್ರತಾಪಚಂದ್ರ ಶೆಟ್ಟಿ ಪಟ್ಟು, ಸಚಿವರ ಭರವಸೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯ ಡೀಮ್ಸ್ ಫಾರೆಸ್ಟ್ ಸಮಸ್ಯೆ ಪರಿಹಾರಕ್ಕೆ ಸದನದಲ್ಲಿ ಕೆ. ಪ್ರತಾಪಚಂದ್ರ ಶೆಟ್ಟಿ ಪಟ್ಟು, ಸಚಿವರ ಭರವಸೆ

    Updated:23/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲೆಯಲ್ಲಿ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. ಇದರಿಂದ ಕುಂದಾಪುರ, ಬೈಂದೂರು, ಉಡುಪಿ, ಕಾರ್ಕಳ, ಬ್ರಹ್ಮಾವರ, ಕಾಪು, ಹೆಬ್ರಿಗಳಲ್ಲಿ 7,754 ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ದೊರೆಯಲೇಬೇಕು, ಸರಕಾರದಿಂದ ಸಮರ್ಪಕ ಉತ್ತರ ದೊರೆಯಬೇಕು ಎಂದು ಕಾಂಗ್ರೆಸ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪಟ್ಟು ಹಿಡಿದು ಬಾವಿಗಿಳಿದ ಘಟನೆ ವಿಧಾನ ಪರಿಷತ್ ಕಲಾಪದಲ್ಲಿ ನಡೆಯಿತು.

    ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಕೆ. ಪ್ರತಾಪಚಂದ್ರ ಶೆಟ್ಟಿಯ ಅವರು, ಉಡುಪಿ ಜಿಲ್ಲೆಯಲ್ಲಿ ನಮೂನೆ 50, 53ಹಾಗೂ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ಸ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. 94ಸಿ ಕಲಂ ಅಡಿ ಮಂಜೂರಾದ ಮೇಲೆ ಡೀಮ್ಸ್ ಫಾರೆಸ್ಟ್ ನಿಯಮ ಅನ್ವಯಿಸಿ ತೊಂದರೆ ನೀಡುತ್ತಿದ್ದಾರೆ. ಇವತ್ತು ನನಗೆ ಸಮಾಧಾನಕರ ಉತ್ತರ ಸಿಗಬೇಕು. ಇಲ್ಲವಾದರೆ ಈಗಾಗಲೇ ನಾನು ಶಾಲು ತಂದಿದ್ದೇನೆ, ಇಲ್ಲಿಯೇ ಮಲಗುತ್ತೇನೆ ಎಂದರು.

    ಅವರು ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಅವರು ಈ ರೀತಿಯ ಉತ್ತರಗಳನ್ನು ಮೂರು ನಾಲ್ಕು ಸಚಿವರಿಂದ ಕೇಳಿಕೊಂಡು ಬಂದಿದ್ದೇವೆ. ಕೇಳಿ ಕೇಳಿ ಸಾಕಾಗಿದೆ. ಸರ್ಕಾರವೇ 94 ಸಿ ಫಾರಂ ಪ್ರಕಾರ ಅನುಮತಿ ನೀಡಿದೆ, ಮತ್ತೆ ಮನೆ ಕಟ್ಟಿಕೊಳ್ಳಲು ತಡೆಯುತ್ತಾರೆ ಎಂದರೆ ಹೇಗೆ. ನೀವೆ ಕೊಟ್ಟಿರುವ 94 ಸಿ ಫಾರಂನ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

    ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿ ರಾಜ್ಯದಲ್ಲಿ 10.11 ಲಕ್ಷ ಹೆಕ್ಟೇರ್ ಡೀಮ್ಸ್ ಫಾರೆಸ್ಟ್ ಜಮೀನು ಪೈಕಿ 6.64 ಲಕ್ಷ ಹೆಕ್ಟೇರ್ ಅನ್ನು ಕಂದಾಯ ಇಲಾಖೆಗೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಅರಣ್ಯ ಇಲಾಖೆಯಿಂದಲೂ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.

    Click here

    Click here

    Click here

    Call us

    Call us

    ಡೀಮ್ಡ್ ಫಾರೆಸ್ಟ್ ಎನ್ನುವುದೇ ಅವೈಜ್ಞಾನಿಕ. ಹಿಂದಿನ ಅಧಿಕಾರಿಗಳು ಸರಕಾರಿ ಭೂಮಿಯನ್ನು ಅರಣ್ಯ ಭೂಮಿ ಎಂದು ಅರಣ್ಯ ಇಲಾಖೆ ಕೇಳದಿದ್ದರೂ, ಬರೆದುಕೊಟ್ಟಿದ್ದರಿಂದ ಡೀಮ್ಸ್ ಫಾರೆಸ್ಟ್ ಎಂದಾಯಿತು. ಡೀಮ್ಸ್ ಫಾರೆಸ್ಟ್ ಜಮೀನು ಮರಳಿ ಪಡೆಯುವ ನಿಟ್ಟಿನಲ್ಲಿ 6-7 ತಿಂಗಳುಗಳಿಂದ ಅರಣ್ಯ ಇಲಾಖೆ ಸಚಿವರು ಹಾಗೂ ಅಧಿಕಾರಿ ಗಳೊಂದಿಗೆ ವಿಧಾನ ಹಲವು ಸಭೆ ಅಧಿವೇಶನ ನಡೆಸಿದ್ದೇನೆ. 10 ಲಕ್ಷ ಹೆಕ್ಟೇರ್ ನಲ್ಲಿ 6.64 ಲಕ್ಷ ಹೆಕ್ಟರ್ ಅನ್ನು ಕಂದಾಯ ಇಲಾಖೆಗೆ ಬಿಟ್ಟುಕೊಡಲು ಅರಣ್ಯ ಇಲಾಖೆ ಒಪ್ಪಿಕೊಂಡಿದೆ. ಕೆಲವು ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿದ್ದು, ಆಫಿದವಿಟ್ ಸಲ್ಲಿಸಲು ಕಾನೂನು ಇಲಾಖೆ ಈಗಾಗಲೇ ಡೀಮ್ಸ್ ಫಾರೆಸ್ಟ್ ಪ್ರದೇಶದಲ್ಲಿ ಉಳುಮೆ ಮಾಡುತ್ತಿದ್ದರೆ ಅಥವಾ ಮನೆ ಕಟ್ಟಿದ್ದರೆ ಅಂತಹವರಿಗೆ ಅರಣ್ಯ ಇಲಾಖೆಯಿಂದ ತೊಂದರೆ ಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದರು.

    ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಸುನಿಲ್ ಕುಮಾರ್ ಅವರು, ಇದು 1993-94ರಲ್ಲಿನ ಸಮಸ್ಯೆ. ಇದರ ಪರಿಹಾರಕ್ಕೆ ಸರಕಾರ ಬದ್ಧವಾಗಿದೆ. ಇದರಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ನಾವು ಸುಮ್ಮನಿದ್ದೇವೆ. ನೀವು ರಾಜಕಾರಣ ಮಾಡಿದರೆ ನಾವು ಮಾಡುತ್ತೇವೆ. ಡಿಮ್ ಫಾರೆಸ್ಟ್ ನಿಮ್ಮ ಸರ್ಕಾರದ ಪಾಪದ ಕೂಸು. ಅದನ್ನು ಸರಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಮತ್ತೆ ಮಾತಿನಚಕಮಕಿ ನಡೆಯಿತು. ಆಗ ಮಧ್ಯಪ್ರವೇಶಿಸಿದ ಸಭಾಪತಿ, ಸಚಿವರು ಸ್ಪಷ್ಟ ಭರವಸೆ ನೀಡಿದ್ದು ಧರಣಿಯಿಂದ ಹಿಂದೆ ಸರಿಯಿರಿ ಎಂದು ಸಲಹೆ ನೀಡಿದರು. ಬಳಿಕ ಪ್ರತಾಪಚಂದ್ರ ಶೆಟ್ಟಿ ಅವರು ತಮ್ಮ ಆಸನಕ್ಕೆ ಮರಳಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    eighteen − 4 =

    Call us

    Click Here

    Call us

    Call us

    Call us
    Highest Viewed Recently
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    • ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.