Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ: ಕೆ. ರವಿರಾಜ ಹೆಗ್ಡೆ
    Uncategorized

    ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ: ಕೆ. ರವಿರಾಜ ಹೆಗ್ಡೆ

    Updated:25/12/2021No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಚಿನ್ನಕ್ಕಿಂತ ಅನ್ನ ಶ್ರೇಷ್ಠ, ಅನ್ನಕ್ಕಿಂತ ಮಣ್ಣು ಶ್ರೇಷ್ಠ ಎನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ. ರೈತರು ಮಣ್ಣಿನ ಫಲವತ್ತತೆ ಉಳಿಸಿಕೊಳ್ಳಬೇಕಾದರೆ ಸಾವಯವ ಗೊಬ್ಬರ ತಯಾರಿಗೆ ಅಗತ್ಯವಾದ ಹೈನುಗಾರಿಕೆ ಕೂಡ ನಡೆಸಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು.

    Click Here

    Call us

    Click Here

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಮತ್ತು ರೈತಸಿರಿ, ರೈತಸೇವಾ ಒಕ್ಕೂಟದ ಆಶ್ರಯದಲ್ಲಿ ನಾಗೂರು ಶ್ರೀಕೃಷ್ಣಲಲಿತ ಕಲಾಮಂದಿರದಲ್ಲಿ ಗುರುವಾರ ನಡೆದ ರೈತರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸಂಕಷ್ಟದ ಕಾಲದಲ್ಲಿ ಎಲ್ಲ ಉತ್ಪಾದಕ ವೃತ್ತಿಗಳಂತೆ ರೈತರೂ ತಮ್ಮ ವೃತ್ತಿಯಿಂದ ಬಿಡುವು ಪಡೆದಿದ್ದರೆ ಏನಾಗುತ್ತಿತ್ತು ಎನ್ನುವುದನ್ನು ಊಹಿಸುವುದೂ ಅಸಾಧ್ಯ. ಆದರೆ ಸಮುದಾಯ, ಸರ್ಕಾರ ರೈತರನ್ನು ಅವರ ಘನತೆಗೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅವರು ವಿಷಾದಿಸಿದರು.

    ಅಧ್ಯಕ್ಷತೆವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸಂಘದ ಲಾಭಾಂಶದಲ್ಲಿ ಈ ಬಾರಿ ರೂ.19.9 ಲಕ್ಷವನ್ನು ರೈತ ಸದಸ್ಯರ ಹಾಗೂ ಸಮಾಜದ ಅನ್ಯ ವಿಶಿಷ್ಟ ವಿಭಾಗಗಳ ಮೇಲ್ಮೆಗೆ ಬಳಸಲಾಗುತ್ತಿದೆ ಎಂದರು.

    ರೈತರ ದಿನಾಚರಣೆಯ ಅಂಗವಾಗಿ ನಡೆದ ಸಂಘದ ಹಿರಿಯ ರೈತ ಸದಸ್ಯ ನಾಗೂರು ನರಸಿಂಹ ಶೆಟ್ಟಿ, ಕಳೆದ ಸಾಲಿನಲ್ಲಿ ನಿವೃತ್ತರಾದ ವ್ಯಾಪ್ತಿಯ ಸರ್ಕಾರಿ ಹಾಗೂ ಸಹಕಾರಿ ಉದ್ಯೋಗಿಗಳ ಮತ್ತು ಹನ್ನೊಂದು ಹಾಲು ಉತ್ಪಾಕರ ಸಹಕಾರಿ ಸಂಘಗಳಲ್ಲಿ ಅತ್ಯಧಿಕ ಹಾಲು ಪೂರೈಸಿದವರಿಗೆ ಸನ್ಮಾನ, ಸ್ವಂತ ಕಟ್ಟಡ ನಿರ್ಮಿಸುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೂ.1 ಲಕ್ಷ ಸಹಾಯಧನ ವಿತರಣೆ, 22 ಸರ್ಕಾರಿ ಶಾಲೆಗಳ ಗೌರವ ಶಿಕ್ಷಕರಿಗೆ ತಲಾ ರೂ.20,000 ಗೌರವಧನ ಹಸ್ತಾಂತರ, ಸಾಧನೆಗಾಗಿ ಪ್ರಶಸ್ತಿಗಳಿಸಿದವರಿಗೆ ‘ರೈತಸಿರಿ’ ಗೌರವಾರ್ಪಣೆ, ಎಸ್ಸೆಸ್ಸೆಲ್ಸಿ ಸಾಧಕರಿಗೆ ನಗದು ಪುರಸ್ಕಾರ, ಸಂಘದ ನೂತನ ರೈತಕೂಟಗಳಿಗೆ ರೂ.10,000 ವಾರ್ಷಿಕ ಅನುದಾನ ವಿತರಣೆ, ಸಂಘದ ದಿನದರ್ಶಿಕೆ ಬಿಡುಗಡೆ, ಕೊನೆಯಲ್ಲಿ ನಡೆದ ಯಕ್ಷಗಾನ ಪ್ರದರ್ಶನ ಎಲ್ಲರ ಗಮನ ಸೆಳೆದು ಶ್ಲಾಘನೆ ಪಡೆಯಿತು.

    ಉಭಯ ಜಿಲ್ಲೆಗಳ ಹಾಪ್‌ಕಾಮ್ಸ್ ಅಧ್ಯಕ್ಷ ಹಾಲಾಡಿ ಸೀತಾರಾಮ ಗಾಣಿಗ, ಗ್ರಾಪಂ ಅಧ್ಯಕ್ಷೆ ಗೀತಾ, ಸಂಘದ ನಿರ್ದೇಶಕರು ಇದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿದರು, ವ್ಯವಸ್ಥಾಪಕ ಚಂದಯ್ಯ ಶೆಟ್ಟಿ ವಂದಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d