ಕುಂದಾಪುರ: ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಜೇಸಿ ಸಪ್ತಾಹದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.
ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಕುಂದಾಪುರ ವಲಯದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಆಧ್ಯಾತ್ಮ ರಹಸ್ಯ ಪತ್ರಿಕೆ ಸಂಪಾದಕ ಎಸ್. ಸತೀಶ್ಕುಮಾರ್, ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ ಜೇಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಸಪ್ತಾಹ ಕಾರ್ಯದರ್ಶಿ ವೆಂಕಟೇಶ ಪ್ರಭು, ಖಜಾಂಚಿ ಯು. ರಾಘವೇಂದ್ರ ಭಟ್, ಜ್ಯೂನಿಯರ್ ಜೇಸಿ ಅಧ್ಯಕ್ಷ ಸನತ್ ಶೇಟ್, ಜೇಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಸಪ್ತಾಹ ಸಂಚಾಲಕ ರಾಘವೇಂದ್ರ ಕೆ.ಸಿ, ಯೋಜನಾಧಿಕಾರಿ ಪ್ರಶಾಂತ್ ಹವಲ್ದಾರ್ ಉಪಸ್ಥಿತರಿದ್ದರು. ಸಪ್ತಾಹ ಸಭಾಪತಿ ವಿಜಯ ಭಂಡಾರಿ ಕಾರ್ಯಕ್ರಮದ ಮುನ್ನೋಟ ನೀಡಿದರು. ಕಾರ್ಯದರ್ಶಿ ನಾಗೇಶ್ ನಾವಡ ವಂದಿಸಿದರು. ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು.