Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ, ಅಕ್ರಮವಾಗಿ ಮರಳು ಮಾರಾಟ ಮಾಡಿದರೆ ಕ್ರಮ: ಡಿಸಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ, ಅಕ್ರಮವಾಗಿ ಮರಳು ಮಾರಾಟ ಮಾಡಿದರೆ ಕ್ರಮ: ಡಿಸಿ

    Updated:07/01/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜ.6:
    ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳಿನ ದಾಸ್ತಾನಿದ್ದು, ಸಾರ್ವಜನಿಕರು ಸ್ಯಾಂಡ್ ಆಪ್ ಮೂಲಕ ಬೇಡಿಕೆಗಳನ್ನು ಸಲ್ಲಿಸುವುದರೊಂದಿಗೆ ಅಗತ್ಯವಿರುವ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    Click Here

    Call us

    Click Here

    ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃಧ್ದಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಸ್ಯಾಂಡ್ ಆಪ್ ಗಳಲ್ಲಿನ ಬೇಡಿಕೆಗನುಗುಣವಾಗಿ ವಿತರಿಸಲು ಮುಂದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

    ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು, ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್ ನ ಪರಿಶೀಲಿಸುವುದರೊಂದಿಗೆ ಚಲನ ವಲನಗಳ ಬಗ್ಗೆ ನಿಗಾ ವಹಿಸಿ ಒಂದೊಮ್ಮೆ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಬೇಕು, ಮರಳು ತೆಗೆಯುವ ಧಕ್ಕೆ ಹಾಗೂ ದಾಸ್ತಾನು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚನೆ ನೀಡಿದರು.

    ಕುಂದಾಪುರ ವ್ಯಾಪ್ತಿಯಲ್ಲಿ ದೋಣಿಗಳ ಜಿಪಿಎಸ್ ಉಲ್ಲಂಘನೆ ಮಾಡಿದ ಮರಳು ಪರವಾನಗಿದಾರರ ವಿರುದ್ದ 16 ಪ್ರಕರಣ ದಾಖಲಿಸಿ 8 ಲಕ್ಷ ದಂಢ ವಿಧಿಸಲಾಗಿದೆ ಉಡುಪಿ ಮತ್ತು ಬ್ರಹ್ಮಾವರದಲ್ಲಿ 3 ಪ್ರಕರಣ ದಾಖಲಿಸಿ 50000 ಸಾವಿರ ದಂಢ ವಿಧಿಸುವುದರ ಜೊತೆಗೆ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿ ಮರಳು ದಾಸ್ತಾನು ಮಾಡಿದವರ ವಿರುದ್ದ 34 ಪ್ರಕರಣ ದಾಖಲಿಸಿ 13 ಲಕ್ಷಕ್ಕೂ ಹೆಚ್ಚು ದಂಢ ವಿಧಿಸಲಾಗಿದೆ. ವಾಹನ ಜಿಪಿಎಸ್ ಉಲ್ಲಂಘಿಸಿದ 76 ಪ್ರಕರಣ ದಾಖಲಿಸಿ 5 ಲಕ್ಷÀ ದಂಡ ವಿಧಿಸಲಾಗಿದೆ ಎಂದರು.

    ನವೆಂಬರ್ 24 ರಿಂದ ಡಿಸೆಂಬರ್ 31 ರ ವರೆಗೆ ಕಂಟ್ರೋಲ್ ರೂಂ ನಲ್ಲಿ 125 ದೂರುಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 123 ವಿಲೇವಾರಿ ಮಾಡಲಾಗಿದೆ ಎಂದ ಅವರು, ಲಿಖಿತ ಅಥವಾ ದೂರವಾಣಿ ಮೂಲಕ ಬರುವ ದೂರುಗಳನ್ನು ನಿರ್ಲಕ್ಷಿಸದೇ ಅವುಗಳ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರು ಎಂದು ಕಂಡುಬAದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

    Click here

    Click here

    Click here

    Call us

    Call us

    ಕಲ್ಲು ಗಣಿಗಾರಿಕೆ ಹಾಗೂ ಕಲ್ಲು ಪುಡಿ ಮಾಡುವ ಘಟಕಗಳಿಗೆ ಪರವಾನಗಿ ನೀಡುವ ಸಂಧರ್ಭದಲ್ಲಿ ಸರ್ಕಾರ ಸೂಚಿಸಿರುವ ನಿಯಮಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸುವುದರೊಂದಿಗೆ ಕಾನೂನಿನ ಅಡಿಯಲ್ಲಿ ಅವರುಗಳಿಗೆ ಲೈಸೆನ್ಸ್ ನೀಡುವಂತೆ ತಿಳಿಸಿದರು.

    ಸರ್ಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡುವವರ ವಿರುದ್ದ ಪ್ರಕರಣಗಳನ್ನು ದಾಖಲಿಸಿ ದಂಢ ವಿಧಿಸಲಾಗಿದೆ ಆದರೂ ಅವರುಗಳು ಗಣಿಗಾರಿಕೆಯನ್ನು ಪುನಃ ಪುನಃ ಮಾಡುತ್ತಿರುವುದು ಕಂಡುಬರುತ್ತಿದೆ ಅಂತಹವರ ವಿರುದ್ದ ಕಂದಾಯ ಇಲಾಖೆ ಅಧಿಕಾರಿಗಳು ಭೂ ಕಬಳಿಕೆ ಅಧಿನಿಯಮದಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದರು.

    ಸರ್ಕಾರಿ ಜಾಗದಲ್ಲಿ ಸಿಗುವ ಎಲ್ಲಾ ರೀತಿಯ ಖನಿಜಗಳ ಬ್ಲಾಕ್ ಗಳನ್ನು ಗುರುತಿಸುವುದರೊಂದಿಗೆ ಗಣಿಗಾರಿಕೆ ಕೈಗೊಳ್ಳಲು ಬ್ಲಾಕ್ ಗಳ ಹರಾಜು ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.

    ಸಭೆಯಲ್ಲಿ ಕುಂದಾಪುರ ಡಿಎಫ್.ಓ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿ.ಆರ್.ಝಡ್ ನ ಪ್ರಾದೇಶಿಕ ನಿರ್ದೇಶಕ ಶ್ರೀಪತಿ, ಹಿರಿಯ ಭೂ ವಿಜ್ಞಾನಿ ಸಂದೀಪ್ ಹಾಗೂ ಮತ್ತಿತರ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.