Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಖಾಲಿ
    ವಿಶೇಷ ವರದಿ

    ಕುಂದಾಪುರ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಖಾಲಿ

    Updated:18/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ವಲಯ 35 ಶಾಲೆ. ಕುಂದಾಪುರ ವಲಯ 8 ಶಾಲೆ

    Click Here

    Call us

    Click Here

    ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಬೊಬ್ಬೆ ಹೊಡೆಯುವವರು ಹೊಡೆಯುತ್ತಲೇ ಇರುತ್ತಾರೆ. ಆದರೆ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಇದು ತಮಗೆ ಸಂಬಂಧಿಸಿದ ವಿಷಯವೇ ಅಲ್ಲವೆಂದು ಸುಮ್ಮನಿರುತ್ತಾರೆ. ಅಧಿಕಾರಿಗಳ ಇಂತಹ ಜಡ ಧೋರಣೆ ಇಲಾಖೆಯ ಕಾರ್ಯವೈಖರಿಯನ್ನೇ ಪ್ರಶ್ನಿಸುವಂತೆ ಮಾಡುತ್ತದೆ.

    ಬೈಂದೂರು ಹಾಗೂ ಕುಂದಾಪುರ ವಲಯದ 41 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಸರಿಸುಮಾರು ಕಳೆದ ಶೈಕ್ಷಣಿಕ ವರ್ಷದಿಂದಲೇ ಖಾಲಿ ಬಿದ್ದಿದ್ದರೂ ಅವುಗಳನ್ನು ಭರ್ತಿಗೊಳಿಸುವ ಕೆಲಸ ಮಾತ್ರ ಈವರೆಗೆ ನಡೆದಿಲ್ಲ ಎಂಬುದು ಶಿಕ್ಷಣ ಇಲಾಖೆಯ ಆಮೆ ನಡಿಗೆಯನ್ನು ಸಾಕ್ಷೀಕರಿಸುವಂತಿದೆ.

    ಬೈಂದೂರು ವಲಯದ 35 ಶಾಲೆಗಳ ಪೈಕಿ 28 ಶಾಲೆಗಳಿಲ್ಲಿ ಮುಖ್ಯಶಿಕ್ಷಕರ ಹುದ್ದೆ ಖಾಲಿ ಇದ್ದು, 7 ಶಾಲೆಗಳ ಪೂರ್ಣಕಾಲಿಕಾ ಮುಖ್ಯ ಶಿಕ್ಷಕರ ಹುದ್ದೆಗೆ ಮಂಜೂರಾತಿ ಕೋರಿ ಉಪನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಕುಂದಾಪುರ ವಲಯಲ್ಲಿ 8 ಮುಖ್ಯ ಶಿಕ್ಷಕ ಹುದ್ದೆಯ ಪೈಕಿ 6 ಪೂರ್ಣಕಾಲಿಕ ಹಾಗೂ 2 ಪದವೀಧರ ಹುದ್ದೆಗಳು ಖಾಲಿ ಇದೆ.

    ಪ್ರಮೋಷನ್ ಬೇಡವೆನ್ನುವ ಶಿಕ್ಷಕರು!
    ಮುಖ್ಯಶಿಕ್ಷಕರ ಹುದ್ದೆಯ ಭರ್ತಿಗೊಳಿಸಲು ಮೂರು ತಿಂಗಳ ಹಿಂದೆ ನಡೆದ ಕೌನ್ಸಿಲಿಂಗ್‌ನಲ್ಲಿ ಹಿರಿಯ ಶಿಕ್ಷಕರುಗಳು ಪ್ರಮೋಷನ್ ತೆಗೆದುಕೊಳ್ಳಲು ಹಿಂದೇಟು ಹಾಕಿದ್ದರು. ಪ್ರಮೋಷನ್ ತೆಗೆದುಕೊಂಡು ಉಡುಪಿ ಜಿಲ್ಲೆಯ ಒಂದು ಬದಿಯಿಂದ (ಬ್ರಹ್ಮಾವರದ ಆಚೆಗಿನವರು) ಬೈಂದೂರು ಭಾಗಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ. ಸೇವೆಯಲ್ಲಿ ಹಿರಿಯರಾದವರು, ಈಗಾಗಲೇ ಮುಖ್ಯ ಶಿಕ್ಷಕ ಹುದ್ದೆಯಲ್ಲಿರುವವರು ಪ್ರಮೋಷನ್ ತೆಗೆದುಕೊಳ್ಳದೇ ಇರುವುದರಿಂದ ಇಷ್ಟೊಂದು ಹುದ್ದೆಗಳು ಖಾಲಿ ಬಿದ್ದಿದೆ. ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ, ಹೊರ ಜಿಲ್ಲೆಗಳ ಶಿಕ್ಷಕರಿಗೆ ಭಡ್ತಿ ನೀಡಿ ಈ ಭಾಗಕ್ಕೆ ವರ್ಗಾವಣೆ ನೀಡುವುದೇ ಪರಿಹಾರ ಎನ್ನಲಾಗಿದೆ.

    Click here

    Click here

    Click here

    Call us

    Call us

    ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸಮಸ್ಯೆ ಪ್ರತಿಧ್ವನಿ:
    ಹಲವು ತಿಂಗಳುಗಳಿಂದ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಬಿದ್ದಿರುವ ಬಗ್ಗೆ ಕುಂದಾಪುರ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ ಕಳವಳ ವ್ಯಕ್ತಪಡಿಸಿದ್ದರು. ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿಗೊಳಿಸಲು ಒಂದು ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ ಹುದ್ದೆಗಳು ಮಾತ್ರ ಇನ್ನೂ ಖಾಲಿ ಇದೆ.

    [quote bgcolor=”#ffffff”]  ಶಿಕ್ಷಣದ ಗುಣಮಟ್ಟ ಕಡಿಮೆಯಾಗಲು ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ. ಇಷ್ಟು ದಿನಗಳಿಂದ ಹುದ್ದೆಯನ್ನು ಭರ್ತಿಮಾಡಲು ಯಾಕೆ ಕ್ರಮಕೈಗೊಳ್ಳಲಿಲ್ಲ. ಆಡಳಿತ ವ್ಯವಸ್ಥೆಯೇ ಹಳ್ಳಹಿಡಿದರೆ ಶಿಕ್ಷಣ ವ್ಯವಸ್ಥೆ ಸರಿದಾರಿಯಲ್ಲಿ ಸಾಗಲು ಸಾಧ್ಯವಿಲ್ಲ. ಆಧಿಕಾರಿಗಳ ಮಟ್ಟದಲ್ಲೇ ಆಗಬಹುದಾದ ಕೆಲಸಗಳು ಹೀಗೆ ಬಾಕಿ ಉಳಿಸುತ್ತಾ ಹೋದರೆ ಹೇಗಾದಿತು? ಕೂಡಲೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಡಿಡಿಪಿಐ ಕೈಗೊಳ್ಳಬೇಕು.

    – ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ [/quote]

    [quote bgcolor=”#ffffff”] ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಇರುವುದು ನನ್ನ ಗಮನದಲ್ಲಿದೆ. ಮೂರು ತಿಂಗಳ ಹಿಂದೆ ಹುದ್ದೆಯನ್ನು ಭರ್ತಿಗೊಳಿಸಲು ಕೌನ್ಸಿಲಿಂಗ್ ನಡೆಸಿದಾಗ ಹಿರಿಯ ಶಿಕ್ಷಕರು ಪ್ರಮೋಷನ್ ತೆಗೆದುಕೊಳ್ಳಲು ಒಪ್ಪಲಿಲ್ಲ. ಶಿಕ್ಷಕರೇ ಕೌನ್ಸಿಲಿಂಗ್ ನಡೆಸಬೇಡಿ ಎಂದು ಒತ್ತಡ ತರುತ್ತಿದ್ದಾರೆ. ಇದರೊಂದಿಗೆ ತಾಂತ್ರಿಕ ತೊಂದರೆಗಳು ಇರುವುದರಿಂದ ಕೂಡಲೇ ಭರ್ತಿ ಮಾಡಲು ಸಾಧ್ಯವಿಲ್ಲ. ಬೈಂದೂರು ವಲಯದ ಮಾವಿನಕಟ್ಟೆ ಸೇರಿದಂತೆ ೭ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಸರಕಾರದಿಂದ ಹುದ್ದೆಗೆ ಮಂಜೂರಾತಿ ಕೋರಲಾಗಿದೆ.

    – ಎಚ್. ದಿವಾಕರ್ ಶೆಟ್ಟಿ, ಡಿಡಿಪಿಐ, ಉಡುಪಿ [/quote]

    Byndoor kundapura Raju Poojary teacher
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.