ಎಕ್ಸಲೆಂಟ್ ಪಿಯು ಕಾಲೇಜು: ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ, ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

Call us

Click Here

ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಇವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಎಂ ಟಿ ಪಬ್ಲಿಸಿಟಿ ಅಂಡ್ ಡೆವಲಪ್ಮೆಂಟ್ ವಿಭಾಗದ ಡೀನ್ ಪ್ರೊ. ಕಿಶೋರ್ ಕುಮಾರ್ ಆರೂರ್ ಹಾಗೂ ಎಕ್ಸಲೆಂಟ್ ಕಾಲೇಜಿನ ಅನೇಕ ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply