Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಳಗೇರಿ ಪ್ರದೇಶದಲ್ಲಿ ಕೈಗಾರಿಕಾ ವಲಯ ಅಭಿವೃದ್ಧಿ ಖಂಡಿಸಿ ಜನಾಂದೋಲನದ ಎಚ್ಚರಿಕೆ
    ಊರ್ಮನೆ ಸಮಾಚಾರ

    ಹಳಗೇರಿ ಪ್ರದೇಶದಲ್ಲಿ ಕೈಗಾರಿಕಾ ವಲಯ ಅಭಿವೃದ್ಧಿ ಖಂಡಿಸಿ ಜನಾಂದೋಲನದ ಎಚ್ಚರಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಹಳಗೇರಿ ಕೈಗಾರಿಕಾ ವಲಯ ಅಭಿವೃದ್ಧಿ ಪಡಿಸುವ ಸಂದರ್ಭ ಪರಂಭೂಕು ಜಾಗವನ್ನು ವಿರಹಿತಗೊಳಿಸುವ ಸಂದರ್ಭದಲ್ಲಿ ರೈತರ ಹಿತಾಸಕ್ತಿಗಳನ್ನು ಮರೆಮಾಚಿ ಏಪಕ್ಷಿಯ ನಿರ್ಣಯ ಕೈಗೊಳ್ಳಲಾಗಿದೆ. ಇದು ಲ್ಯಾಂಡ್ ರೆವೆನ್ಯೂ ಆಕ್ಟ್ ಉಲ್ಲಂಘನೆಯಾಗಿದೆ ಎಂದು ರೈತ ಮುಖಂಡ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಹಳಗೇರಿಯ ಸರ್ವೆ ನಂ. 166/ಪಿ1ರ 53 ಎಕರೆ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಸೀ ಪುಡ್ ಪಾರ್ಕ್ ಮಾಡುವುದನ್ನು ವಿರೋಧಿಸಿ ನಾಗೂರಿನಲ್ಲಿ ಭಾನುವಾರ ಹಮ್ಮಿಕೊಂಡ ಖಂಡನಾ ಸಭೆ ಉದ್ದೇಶಿಸಿ ಮಾತನಾಡಿದರು.

    ಹೋರಾಟದ ನೇತೃತ್ವ ವಹಿಸಿರುವ ನಳೀನ ಕುಮಾರ್ ಶೆಟ್ಟಿ ಮಾತನಾಡಿ ಕೈಗಾರಿಕಾ ವಲಯ ಮಾಡುವ ಹಿಂದೆ ಕೆಲವೇ ಉದ್ಯಮಿಗಳ ಹಿತಾಸಕ್ತಿ ಅಡಗಿದೆ. ಕೈಗಾರಿಕಾ ವಲಯದಿಂದ ಆಗುವ ತೊಂದರೆಗಳ ಬಗ್ಗೆ ಈಗಾಗಲೇ ಸರಕಾರಕ್ಕೆ ತಿಳಿಸಲಾಗಿದೆ. ಸ್ಥಳೀಯನ್ನು ವಿಶ್ವಾಸಕ್ಕೆ ಪಡೆಯದೇ ಕೈಗಾರಿಕಾ ವಲಯ ಮಾಡಿರುವುದು ಸರಿಯಾದ ಕ್ರಮವಲ್ಲ. ಊರಿಗೆ ಇದರಿಂದ ತೊಂದರೆಯೇ ಹೆಚ್ಚಿದೆ. ಕೈಗಾರಿಕಾ ವಲಯ ನಿರ್ಮಾಣದಿಂದ ಹಳಗೇರಿ, ತೆಂಕಬೆಟ್ಟು, ಗುಮ್ಮಿತೋಟ, ಕಂಬದಕೋಣೆ, ನಾಗೂರು, ಚಿತ್ರಾಡಿ, ಗುಂಜಾನುಗುಡ್ಡೆ ಭಾಗದ ಜನರಿಗೆ ತೊಂದರೆಯಾಗಲಿದೆ. ಊರಿನ ಹಿತಾಸಕ್ತಿ ಕಾಯಲು ಚುನಾವಣಾ ಬಹಿ?ರ ಹಾಗೂ ಅಮರಣಾಂತ ಉಪವಾಸಕ್ಕೆ ಸಿದ್ದವಿರುವುದಾಗಿ ತಿಳಿಸಿದರು.

    ಶ್ರೀ ವನದುರ್ಗಾ ರೈತಶಕ್ತಿ ಗುಂಪಿನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಜನರಿಗೆ ತೊಂದರೆಯಾಗುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ವೇಳೆ ಸರಕಾರ ಏಕಪಕ್ಷೀಯ ನಿಲುವು ತಳೆಯುವುದು ಒಳ್ಳೆಯದಲ್ಲ. ಈ ಬಗ್ಗೆ ಹೋರಾಟ ಮುಂದುವರಿಸುವುದಾಗಿ ಹೇಳಿದರು.

    ಸಭೆಯಲ್ಲಿ ಎಸ್. ಜನಾರ್ದನ ಮರವಂತೆ, ಡಾ. ಸುಬ್ರಹ್ಮಣ್ಯ ಭಟ್ ಸಂಜೀತ್ ರಾವ್, ಈಶ್ವರ ದೇವಾಡಿಗ, ಸುಭಾಶ್ಚಂದ್ರ ಶೆಟ್ಟಿ, ಮೊದಲಾದವರು ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಮುಂದಿನ ಹಂತದಲ್ಲಿ ಕೋರ್ಟ್ ಮೂಲಕ ಕಾನೂನು ಹೋರಾಟ ಮುಂದುವರಿಸುವುದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇದರ ಅನಾನುಕೂಲವನ್ನು ತಿಳಿಸುವುದು ಹಾಗೂ ಜನಾಂದೋಲನ ರೂಪಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    14 − one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.