Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆ ಮಾಹಿತಿ ಶೀಘ್ರ ಪೂರ್ಣಗೊಳಿಸಿ: ಡಾ. ಮನೋಜ್ ರಾಜನ್
    ಉಡುಪಿ ಜಿಲ್ಲೆ

    ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆ ಮಾಹಿತಿ ಶೀಘ್ರ ಪೂರ್ಣಗೊಳಿಸಿ: ಡಾ. ಮನೋಜ್ ರಾಜನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಫೆ.12:
    ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆಯನ್ನು ಇಡೀ ದೇಶದಲ್ಲಿ ಪೈಲಟ್ ಯೋಜನೆಯಾಗಿ ಕರ್ನಾಟಕದಲ್ಲಿ ಸಿದ್ದಪಡಿಸುತ್ತಿದ್ದು, ಈ ಯೋಜನೆಯಡಿ ರಾಜ್ಯದ 5 ಪೈಲಟ್ ಜಿಲ್ಲೆಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯ ಸಂಪೂರ್ಣ ಮಾಹಿತಿ ಅಳವಡಿಸುವ ಕಾರ್ಯಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆಗೆ ಮಾಹಿತಿ ಅಳವಡಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಪತ್ತು ಸಂಭವಿಸಿದ ಸಮಯದಲ್ಲಿ ಅತ್ಯಂತ ತ್ವರಿತವಾಗಿ ಸ್ಪಂದಿಸಿ ಹಾಗೂ ಯೋಜನಾ ಬದ್ದವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೀವ ಹಾನಿ ಹಾಗೀ ಆಸ್ತಿ ಹಾನಿಯಾಗುವುದನ್ನು ತಡೆಯಲು ಸಾಧ್ಯವಿದೆ. ಇದಕ್ಕಾಗಿ ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆ ನೆರವು ಅತ್ಯಂತ ಅಗತ್ಯವಾಗಿದ್ದು, ಈ ಯೋಜನೆಯಿಂದ ಕುಳಿತಲ್ಲಿಂದಲೇ ,ಅತ್ಯಂತ ಶೀಘ್ರದಲ್ಲಿ ವಿಪತ್ತು ನಿರ್ವಹಣೆಗೆ ತ್ವರಿತವಾಗಿ ಮತ್ತು ನಿಖರ ಯೋಜನೆ ರೂಪಿಸಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದರು.

    ಜಿಲ್ಲೆಯಲ್ಲಿ ಸಂಭವಿಸಬಹುದಾದ ಯಾವುದೇ ವಿಪತ್ತುಗಳ ಯಶಸ್ವಿ ನಿರ್ವಹಣೆಗೆ ಅಗತ್ಯವಿರುವ ಲಭ್ಯ ಸಿಬ್ಬಂದಿಗಳು ,ಅವರ ದೂರವಾಣಿ ಸಂಖ್ಯೆ, , ಸುರಕ್ಷತಾ ಉಪಕರಣಗಳು, ಕಾಳಜಿ ಕೇಂದ್ರಗಳು, ಸರ್ಕಾರಿ ಕಟ್ಟಡಗಳು, ಆಸ್ಪತ್ರೆಗಳು,ಅಂಬುಲೆನ್ಸ್ ಗಳು, ವಾಹನಗಳು ಸೇರಿದಂತೆ ಎಲ್ಲಾ ತುರ್ತು ಅಗತ್ಯ ಮೂಲಭೂತ ಸೌಲಭ್ಯಗಳ ಅತ್ಯಂತ ನಿಖರ ಮಾಹಿತಿಯು ಈ ಯೋಜನೆಯಿಂದ ತಕ್ಷಣದಲ್ಲಿ ದೊರೆಯಲಿದ್ದು, ಇದರಿಂದ ಹೆಚ್ಚಿನ ಹಾನಿಯಾಗುವುದನ್ನು ತಡೆಯಲು ಸಾಧ್ಯವಿದ್ದು, ರಾಜ್ಯದಲ್ಲಿ ಸಿದ್ದಪಡಿಸುತ್ತಿರುವ ಈ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದರು.

    ಈ ಯೋಜನೆಯ ಬಗ್ಗೆ ವಿವರವಾದ ಪ್ರಗತಿಯನ್ನು ಮಾರ್ಚ್ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ನಂತರ ಭಾರತ ಸರ್ಕಾರಕ್ಕೆ ಸಲ್ಲಿಸಬೇಕಾಗಿರುವುದರಿಂದ,ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಅಗತ್ಯ ಮತ್ತು ನಿಖರವಾದ ಮಾಹಿತಿಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಈ ಯೋಜನೆಯ ತಂತ್ರಾAಶದಲ್ಲಿ ಅಳವಡಿಸುವಂತೆ ಸೂಚಿಸಿದ ಅವರು, ಈ ಕಾರ್ಯದಲ್ಲಿ ಯಾವುದೇ ತಾಂತ್ರಿಕ ಗೊಂದಲಗಳಿದ್ದಲ್ಲಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ನೆರವು ಪಡೆಯುವಂತೆ ಹಾಗೂ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿದ್ದಲ್ಲಿ ,ಯಾವುದೇ ಬಗೆಯ ವಿಪತ್ತುಗಳನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದರು.

    ಪ್ರಸ್ತುತ ಸಿದ್ದಪಡಿಸುತ್ತಿರುವ ಯೋಜನೆಯ ಕಾರ್ಯವೈಖರಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಅಳವಡಿಸಿರುವ ವಿವಿಧ ಕಟ್ಟಡಗಳ ಮಾಹಿತಿ, ಅದರ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು, ಆ ಕಟ್ಟಡದಲ್ಲಿ ಲಭ್ಯ ಸಿಬ್ಬಂದಿಗಳ ಹೆಸರು,ದೂರವಾಣಿ ಸಂಖ್ಯೆ ಕುರಿತ ಸಂಪೂರ್ಣ ವಿವರಗಳ ಮಾಹಿತಿ ಬಗ್ಗೆ ನಿಖರವಾದ ಅಂಕಿ ಅಂಶಗಳನ್ನು ಪ್ರದರ್ಶಿಸಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಕುಂದಾಪುರ ಡಿಎಫ್.ಓ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು , ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.