Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ‍್ಯಕ್ರಮ ಉದ್ಘಾಟನೆ
    ಊರ್ಮನೆ ಸಮಾಚಾರ

    ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ‍್ಯಕ್ರಮ ಉದ್ಘಾಟನೆ

    Updated:12/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರೋಗವನ್ನು ಪರಿಹಾರ ಮಾಡುವ ದೇವರು ಕೋಟಿಲಿಂಗೇಶ್ವರ. ಈ ಕಾರಣದಿಂದಲೇ 2 ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಬ್ರಹ್ಮಕಲಶೋತ್ಸವ ಕಾರ‍್ಯಗಳನ್ನು ಆ ಭಗವಂತನೇ ಬದಿಗಿಟ್ಟು ಇದೀಗ ಕೋವಿಡ್ ರೋಗವನ್ನು ಜಗತ್ತಿನಿಂದ ತೊಲಗಿಸಿ ತನಗೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಿಸಿಕೊಂಡು ಬ್ರಹ್ಮಕಲಶದ ಹೊಸ್ತಿಲಿನಲ್ಲಿದ್ದಾನೆ ಎಂದು ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.

    Click Here

    Call us

    Click Here

    ಕೋಟೇಶ್ವರದ ಮಹಾತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ 62 ವರ್ಷಗಳ ನಂತರ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಕಾರ‍್ಯಕ್ರಮದ ಧಾರ್ಮಿಕ ಸಭಾ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಹಿರಿಯ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ ಕುಂದರ್, ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿದ್ವಾನ್ ಶ್ರೀಪತಿ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ ನೇರಂಬಳ್ಳಿ ಕೃಷ್ಣಮೂರ್ತಿ ರಾವ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಧ್ಯಕ್ಷ ನೇರಂಬಳ್ಳಿ ರಾಘವೇಂದ್ರ ರಾವ್, ಕೆ.ಶ್ರೀಧರ್ ಕಾಮತ್, ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು, ದೇವಳದ ಕಾರ‍್ಯನಿರ್ವಹಾಣಾಧಿಕಾರಿ ಗಣೇಶ್ ಗೌಡ ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಭವ್ಯ ಪುರಮೆರವಣಿಗೆಯಲ್ಲಿ ದೇವಳದ ತನಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಕಾರ‍್ಯಗಳಿಗೆ ಸಹಕಾರ ನೀಡಿದ ದಾನಿಗಳನ್ನು ಗೌರವಿಸಿ ಸನ್ಮಾನಿಸಿಲಾಯಿತು.

    ಸುಧಾ ರಾಜಗೋಪಾಲ್ ಪ್ರಾರ್ಥಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಪ್ರಸ್ತಾವಿಕ ಮಾತನಾಡಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ‍್ಯಕ್ರಮ ನಿರೂಪಿಸಿದರು. ಕಾರ‍್ಯದರ್ಶಿ ಸುರೇಶ್ ಬೆಟ್ಟಿನ್ ವಂದಿಸಿದರು.

    Click here

    Click here

    Click here

    Call us

    Call us

    ಸಭಾ ಕಾರ‍್ಯಕ್ರಮದ ಬಳಿಕ ಕುಂದಾಪುರ ನಾಟ್ಯಾಲಯ ನೃತ್ಯ ವಸಂತ ಬಳಗದಿಂದ ನೃತ್ಯ ವೈಭವ ಹಾಗೂ ಕುಂದಾಪುರ ಗಮಕ ಪರಿಷತ್ ಬಳಗದಿಂದ ಗಮಕವಾಚನ ಜರುಗಿತು.

    ಈ ಕ್ಷೇತ್ರದಲ್ಲಿ ಸುಂದರವಾದ ಧ್ವಜಮರವನ್ನು ತಾಮ್ರದ ಹೊದಿಕೆಯೊಂದಿಗೆ ಪ್ರತಿಷ್ಠಾಪಿಸಲಾಗಿದೆ. ಈ ಎಲ್ಲಾ ಉತ್ಸವಗಳು

    ಕೇವಲ ದೇವರ ಉತ್ಸವಗಳಲ್ಲ. ಅದು ನಮ್ಮೂರಿನ ಉತ್ಸವವೆಂದು ತಿಳಿದು ದೇವರ ಕಾರ‍್ಯದಲ್ಲಿ ಭಾಗವಹಿಸಬೇಕು. ಈಗಾಗಲೇ ನೂತನ ಧ್ವಜಸ್ಥಂಭದ ಮೂಲಕ ಕೋಟಿಲಿಂಗೇಶ್ವರನ ಬ್ರಹ್ಮಕಲಶೋತ್ಸವದ ಆಮಂತ್ರಣ ಕಾಗದವು ಧ್ವಜಾರೋಹಣದ ಮೂಲಕ ಎಲ್ಲಾ ದೇವರುಗಳಿಗೆ ತಲುಪಿದ್ದು10 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಎಲ್ಲಾ ದೇವರಗಳು ಕೋಟೇಶ್ವರದಲ್ಲಿದ್ದು ಭಕ್ತರನ್ನು ಹರಸುತ್ತಾರೆ. – ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    10 + three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.