ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪ್ರಸಿದ್ಧ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಚಂದ್ರಶೇಖರ ಸ್ವಾಮೀಜಿ ಇವರು ಶನಿವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ದೇವಳದ ಅರ್ಚಕರಾದ ವೇದಮೂರ್ತಿ ಜನಾರ್ದನ ಅಡಿಗ ಇವರು ಶ್ರೀ ದೇವರ ಪ್ರಸಾದ ನೀಡಿ ಸ್ವಾಮೀಜಿಯವರನ್ನು ಗೌರವಿಸಿ ಸನ್ಮಾನಿಸಿದರು. ವ್ಯವಸ್ಥಾಪಕ ಎಚ್ ನಾಗರಾಜ ಹಂದೆ ಉಪಸ್ಥಿತರಿದ್ದರು.





