Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರುಪಯುಕ್ತವಾಯ್ತೆ ಕುಂದಾಪುರದ ಟಿ.ಟಿ ರಸ್ತೆ ಪಾರ್ಕ್? ವಿಹಾರ ತಾಣದಲ್ಲಿ ಮದ್ಯ ಬಾಟಲಿಗಳ ರಾಶಿ!
    ಊರ್ಮನೆ ಸಮಾಚಾರ

    ನಿರುಪಯುಕ್ತವಾಯ್ತೆ ಕುಂದಾಪುರದ ಟಿ.ಟಿ ರಸ್ತೆ ಪಾರ್ಕ್? ವಿಹಾರ ತಾಣದಲ್ಲಿ ಮದ್ಯ ಬಾಟಲಿಗಳ ರಾಶಿ!

    Updated:11/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ವಿಹಾರ – ವಿರಾಮಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಿದ ಪಾರ್ಕ್, ಉದ್ಘಾಟನೆಗೂ ಮುನ್ನವೇ ಮದ್ಯ ವ್ಯಸನಿಗಳ ಅಡ್ಡವಾಗಿ ಪರಿಣಮಿಸಿದೆ. ಕುಂದಾಪುರ ಪುರಸಭಾ ಅಧ್ಯಕ್ಷರೇ ಪ್ರತಿನಿಧಿಸುವ ಟಿಟಿ ರಸ್ತೆ ವಾರ್ಡಿನಲ್ಲಿರುವ ಉದ್ಯಾನವನವೀಗ ನಿರುಪಯುಕ್ತ ತಾಣವಾಗಿ ಮಾರ್ಪಾಡಾಗಿದೆ.

    Click Here

    Call us

    Click Here

    Watch Video

    ಟಿಟಿ ರಸ್ತೆಯ ಪ್ರಮುಖ ಹಾದಿಯಲ್ಲಿಯೇ ಇರುವ, ಇನ್ನು ಹೆಸರಿಡದ ಪಾರ್ಕ್ ಹೊರಗಿನಿಂದ ನೋಡಲಷ್ಟೇ ವಿಹಾರ ತಾಣವೆನಿಸುತ್ತದೆ. ಒಳಭಾಗದಲ್ಲಿ ಇಣುಕಿದರೆ ಅಲ್ಲಿನ ನಿಜಬಣ್ಣ ಬಯಲಾಗುತ್ತೆ. ರಾಶಿ ರಾಶಿ ಮಧ್ಯದ ಬಾಟಲಿಗಳು, ಸಿಗರೇಟು, ಕಸದ ರಾಶಿ, ಸುತ್ತಲೂ ಬೆಳೆದ ಗಿಡಗಂಟಿ ಪಾರ್ಕಿನ ಅಂದಗೆಡಿಸಿಬಿಟ್ಟಿದೆ. ಪಾರ್ಕ್ ಒಳಗೆ ಕುಳಿತು ಮದ್ಯವ್ಯಸನ ಮಾಡುವ ಘಟನೆಗಳು ನಡೆಯುತಿದ್ದು, ರಾತ್ರಿ ವೇಳೆಯಲ್ಲಿ ಈ ಭಾಗದಲ್ಲಿ ಸಂಚರಿಸುವುದು ಕೂಡ ಕಷ್ಟವೆನಿಸಿದೆ ಎಂದು ಸ್ಥಳೀಯರೊಬ್ಬರು ಹೇಳಿಕೊಂಡಿದ್ದಾರೆ.

    ಅಭಿವೃದ್ಧಿಗೊಳಿಸಿ 2ವರ್ಷ ಕಳೆದರೂ ಉದ್ಘಾಟನೆಯ ಭಾಗ್ಯವಿಲ್ಲ:
    ಈ ಭಾಗದ ಸಾರ್ವಜನಿಕರು ಹಾಗೂ ಮಕ್ಕಳ ಉಪಯೋಗಕ್ಕಾಗಿ ಟಿಟಿ ರಸ್ತೆಯ ಬೃಹತ್ ವಾಟರ್ ಟ್ಯಾಂಕ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್ ನಿರ್ಮಿಸಲಾಗಿತ್ತು. ಆದರೆ ಕಾಮಗಾರಿ ಬಹುಪಾಲು ಪೂರ್ಣಗೊಂಡಿದ್ದರೂ ಉದ್ಘಾಟನೆಗೆ ಮೀನಾಮೇಷ ಎಣಿಸಲಾಗುತ್ತಿದೆ. ಪಾರ್ಕಿನಲ್ಲಿ ಲೈಟ್ ವ್ಯವಸ್ಥೆ, ಗೇಟ್, ಮಕ್ಕಳ ಜೋಕಾಲಿ, ಇಂಟರ್‌ಲಾಕ್, ಸಿಸಿ ಕ್ಯಾಮರಾ ಅಳವಡಿಕೆ ಇನ್ನೂ ಬಾಕಿ ಇದ್ದು ರಾತ್ರಿ ಸಂಚಾರವೂ ಕಷ್ಟವೆನಿಸಿದೆ.

    ಒಟ್ಟಿನಲ್ಲಿ ಸ್ವಚ್ಛ ಕುಂದಾಪುರ ಎಂಬ ಖ್ಯಾತಿ ಗಳಿಸಿರುವ ನಗರದ ಪ್ರಮುಖ ಭಾಗದಲ್ಲಿಯೇ ಇರುವ ಪಾರ್ಕ್ ಪಾಳು ಬಿದ್ದಿರುವುದು ನಗರಕ್ಕೆ ಕಪ್ಪು ಚುಕ್ಕಿಯೆನಿಸಿದೆ.

    ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಪಡಿಸಲಾಗಿದ್ದು, ಕೆಲವು ಕಿಡಿಗೇಡಿಗಳು ಪಾರ್ಕ್‌ನ ಕಂಪೌಂಡ್ ವಾಲ್ ಹಾಗೂ ಒಳಭಾಗದಲ್ಲಿ ಹಾನಿ ಮಾಡಿರುವುದು ಗಮನಕ್ಕೆ ಬಂದಿದೆ. ಅದಕ್ಕಾಗಿ ಇತ್ತಿಚಿಗೆ ಹೈಮಸ್ಟ್ ದೀಪ ಅಳವಡಿಕೆ ಮಾಡಿದ್ದು, ಅನುದಾನ ಲಭ್ಯತೆ ನೋಡಿಕೊಂಡು ಲೈವ್ ಟ್ರ್ಯಾಕಿಂಗ್ ಇರುವ ಸಿಸಿ ಟಿವಿ ಅಳವಡಿಸಿ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು – ವೀಣಾ ಭಾಸ್ಕರ್, ಅಧ್ಯಕ್ಷರು ಪುರಸಭೆ ಕುಂದಾಪುರ

    Click here

    Click here

    Click here

    Call us

    Call us

    ಕುಂದಾಪುರ ಪುರಸಭೆ ಹಂತ ಹಂತವಾಗಿ ಪಾರ್ಕ್ ಅಭಿವೃದ್ಧಿಗೊಳಿಸಿದ್ದು, ಕೆಲವು ಕಾಮಗಾರಿಗಳು ಬಾಕಿ ಇರುವುದರಿಂದ ಉದ್ಘಾಟನೆಗೊಂಡಿಲ್ಲ. ಎರಡು ವರ್ಷಗಳ ಹಿಂದೆ ಕಂಪೌಂಡ್ ವಾಲ್ ನಿರ್ಮಿಸಲಾಗಿದ್ದು, ಪಾರ್ಕ್ ಒಳಕ್ಕೆ ಕೆಲವೆಡೆ ಇಂಟರ್‌ಲಾಕ್ ಅಳವಡಿಕೆ, ಗಿಡಗಳನ್ನು ನೆಡಿಸುವುದು ಬಾಕಿ ಇದೆ. ಪಕ್ಕದ ವಾಟರ್ ಟ್ಯಾಂಕ್ ಪೈಪ್‌ಲೈನ್ ಅಳವಡಿಕೆ ಹಾಗೂ ಕೋವಿಡ್ ಕಾರಣದಿಂದ ಕೆಲಸ ವಿಳಂಬವಾಗಿತ್ತು. ಲಭ್ಯವಿರುವ ಅನುದಾನವನ್ನು ನೋಡಿಕೊಂಡು ಅಭಿವೃದ್ಧಿಗೊಳಿಸಲಾಗುವುದು. – ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ ಕುಂದಾಪುರ

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.