Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪುರಭವನ ನಿರ್ಮಾಣ ಹಾಗೂ ಕ್ರೀಡಾಂಗಣ ಅಭಿವೃದ್ಧಿಯಿಂದ ತಾಲೂಕು ಕೇಂದ್ರಕ್ಕೆ ಜೀವಕಳೆ: ಕೆ. ಬಾಬು ಶೆಟ್ಟಿ
    ಊರ್ಮನೆ ಸಮಾಚಾರ

    ಬೈಂದೂರು ಪುರಭವನ ನಿರ್ಮಾಣ ಹಾಗೂ ಕ್ರೀಡಾಂಗಣ ಅಭಿವೃದ್ಧಿಯಿಂದ ತಾಲೂಕು ಕೇಂದ್ರಕ್ಕೆ ಜೀವಕಳೆ: ಕೆ. ಬಾಬು ಶೆಟ್ಟಿ

    Updated:14/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ಗಾಂಧಿ ಮೈದಾನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿಯೇ ಪುರಭವನ ನಿರ್ಮಾಣಗೊಳ್ಳುತ್ತಿದೆ. ಇದರೊಂದಿಗೆ ಕ್ರೀಡಾಂಗಣ ಅಭಿವೃದ್ಧಿಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಈ ಯೋಜನೆಗಳ ಅನುಷ್ಠಾನದಿಂದಾಗಿ ತಾಲೂಕು ಕೇಂದ್ರಕ್ಕೆ ಜೀವಕಳೆ ಬಂದಂತಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು.

    Click Here

    Call us

    Click Here

    Watch Video

    ಸೋಮವಾರ ಅವರು ಬೈಂದೂರು ಗಾಂಧಿ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಮೊಗೇರಿ ಗೋಪಾಲಕೃಷ್ಣ ಅಡಿಗ ಪುರಭವನ ಹಾಗೂ ಪ್ರಸ್ತಾವನೆಯಲ್ಲಿರುವ ಸುಸಜ್ಜಿತ ಸ್ಟೇಡಿಯಂ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಬೈಂದೂರು ಗಾಂಧಿ ಮೈದಾನದಲ್ಲಿ ಒಟ್ಟು 4.95 ಎಕರೆ ಜಾಗವಿದ್ದು, ಅದರಲ್ಲಿ 1.5 ಎಕರೆ ಜಾಗವನ್ನು ಪುರಭವನ್ನು ಮೀಸಲಿರಿಸಲಾಗಿದೆ. ಪುರಭವನದಲ್ಲಿ 800 ಮಂದಿ ಕುಳಿತುಕೊಳ್ಳಬಹುದಾದ ಹಾಲ್, ಸುಸಜ್ಜಿತ ಸ್ಟೇಜ್, 400 ಮಂದಿ ಕುಳಿತು ಊಟ ಮಾಡಬಹುದಾದ ಹಾಲ್, ಅಡುಗೆ ಕೋಣೆ, ಪಾರ್ಕಿಂಗ್ ವ್ಯವಸ್ಥೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಪುರಭವನ ನಿರ್ಮಾಣದ ಬಗ್ಗೆ ಮೊದಲೇ ಪತ್ರಿಕಾ ಹೇಳಿಕೆಯಲ್ಲಿ ಸಂಸದರು ತಿಳಿಸಿದ್ದು, ಅನುಮೋದನೆ ದೊರೆತ ಬಳಿಕ ಶಿಲನ್ಯಾಸ ಮಾಡಿದ್ದಾರೆ. ಇದರಲ್ಲಿ ಗೊಂದಲ ಬೇಡ ಎಂದರು.

    ಇದರೊಂದಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಸ್ಟೇಡಿಯಂ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 16 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸದ್ಯದಲ್ಲಿಯೇ ಅನುಮೋದನೆ ದೊರೆಯಲಿದೆ. ಸ್ಟೇಡಿಯಂನಲ್ಲಿ 200 ಮೀ. ಟ್ರ್ಯಾಕ್, ಲಾಂಗ್ ಜಂಪ್, ಹೈ ಜಂಪ್ ಹಾಗೂ ವಾಲಿಬಾಲ್ ಕೋರ್ಟ್, ಕ್ರಿಕೆಟ್ ಪಿಚ್, ಸ್ಟೇಡಿಯಂ ಬಿಲ್ಡಿಂಗ್, ವೀಕ್ಷಕರ ಗ್ಯಾಲರಿ ಮೊದಲಾದವುಗಳು ನಿರ್ಮಾಣವಾಗಲಿದೆ. ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಿಗೆ ಬೈಂದೂರು ಸರಕಾರಿ ಪದವಿ ಕಾಲೇಜು ಬಳಿಯೂ ಜಾಗ ಮೀಸಲಿರಿಸಿದ್ದು, ಅಲ್ಲಿಯೂ ಒಂದು ಸುಸಜ್ಜಿತ ಸ್ಟೇಡಿಯಂ ನಿರ್ಮಿಸಲು ನೀಲನಕ್ಷೆ ತಯಾರಿಸಲಾಗುತ್ತಿದೆ ಎಂದರು.

    ಸಂಸದರ ಮುತುವರ್ಜಿಯಿಂದಾಗಿ ಬೈಂದೂರು ಕ್ಷೇತ್ರಕ್ಕೆ ಹಲವಾರು ಯೋಜನೆಗಳು ಬರುತ್ತಿದ್ದು, ಬೈಂದೂರು ತಾಲೂಕು ಕೇಂದ್ರ ಅಭಿವೃದ್ಧಿಗೂ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಯಾವುದೇ ಯೋಜನೆಗಳ ಬಗ್ಗೆ ಸಂಶಯವಿದ್ದರೆ ಸಂಸದರು, ಶಾಸಕರ ಬಳಿಕ ಸ್ಪಷ್ಟೀಕರಣ ಪಡೆಯಲು ಹಾಗೂ ಸಲಹೆ ನೀಡಲು ಅವಕಾಶವಿದೆ. ಅದರ ಬದಲಿಗೆ ತಪ್ಪು ಸಂದೇಹ ಹರಡುವುದು ಸರಿಯಲ್ಲ ಎಂದರು.

    Click here

    Click here

    Click here

    Call us

    Call us

    ಯಡ್ತರೆ ಪಂಚಾಯತ್ ಮಾಜಿ ಅಧ್ಯಕ್ಷ ನಾಗರಾಜ ಶೆಟ್ಟಿ ಮಾತನಾಡಿ ಬೈಂದೂರು ಹೃದಯ ಭಾಗದಲ್ಲಿ ಇರುವುದೇ ಒಂದೇ ಮೈದಾನ. ಸುತ್ತಲಿನ ಶಾಲೆ ಹಾಗೂ ಎಲ್ಲಾ ಕ್ರೀಡಾ ಉದ್ದೇಶಕ್ಕೆ ಇದು ಅಗತ್ಯವಾಗಿದೆ. ಎಲ್ಲಾ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಜಾಗ ಮೀಸಲಿರಿಸಿ ಉಳಿದ ಜಾಗದಲ್ಲಿ ಪುರಭವನ ನಿರ್ಮಿಸುವುದಾದರೆ ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದರು.

    ಪಡುವರಿ ಪಂಚಾಯತ್ ಮಾಜಿ ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ ಮಾತನಾಡಿ, ಬೈಂದೂರು ಹೃದಯ ಭಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸುತ್ತಲಿನ ಸರಕಾರಿ ಶಾಲೆ, ಇಲಾಖೆಗಳ ಸಭೆ ಸಮಾರಂಭಗಳನ್ನು ಆಯೋಜಿಸಲು ಸುಸಜ್ಜಿತ ಸಭಾಂಗಣದ ಅವಶ್ಯಕತೆ ಇರುವುದನ್ನು ಮನಗಂಡು ಸಂಸದರು ಈ ಯೋಜನೆಯನ್ನು ಬೈಂದೂರಿಗೆ ನೀಡಿದ್ದಾರೆ. ಎಲ್ಲಾ ಕ್ರೀಡಾ ಚಟುವಕೆಗಳಿಗೂ ಅಗತ್ಯವಾದ ಜಾಗವನ್ನು ಮೀಸಲಿರಿಸಿ ಒಂದು ಪಾರ್ಶ್ವದಲ್ಲಿ ಪುರಭವನ ನಿರ್ಮಾಣ ಮಾಡುತ್ತಿರುವುದರಿಂದ ಯಾರಿಗೂ ತೊಂದರೆಯಾಗದು ಎಂದರು.

    ಬೈಂದೂರು ತಾಪಂ ಸಾಮಾಜಿ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ ಮಾತನಾಡಿ ನಾಡಿನ ಅಗ್ರಗಣ್ಯ ಕವಿ ಹಾಗೂ ನಮ್ಮ ತಾಲೂಕಿನವರೇ ಆದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರ ಹೆಸರಿನಲ್ಲಿ ಪುರಭವನ ನಿರ್ಮಾಣವಾಗುತ್ತಿರುವು ಸಂತೋಷದ ಸಂಗತಿ. ಈ ಮೂಲಕ ಅವರಿಗೆ ನಾವು ಗೌರವ ಸಲ್ಲಿಸಿದಂತಾಗಲಿದೆ. ಇದರ ಬಗ್ಗೆ ತಪ್ಪು ಅಭಿಪ್ರಾಯ ಹರಡುವುದು ಬೇಡ ಎಂದರು.

    ಸಭೆಯಲ್ಲಿ ಯಡ್ತರೆ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ನಾಗರಾಜ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಸ್ಥಳೀಯರಾದ ಗಣೇಶ್ ರಾವ್ ಸ್ಟೇಡಿಯಂ ಹಾಗೂ ಕ್ರೀಡಾ ಚಟುವಟಿಕೆಗೆ ಮೀಸಲಿರಿಸಿದ ಸ್ಥಳದ ಬಗ್ಗೆ ಸ್ಪಷ್ಟೀಕರಣ ಕೇಳಿದ್ದು, ಕ್ರೀಡಾ ಚಟುವಕೆಗಳಿಗೆ ಅನುಕೂಲವಾಗು ರೀತಿಯಲ್ಲಿ ಯೋಜನೆಯಲ್ಲಿ ಸ್ವಲ್ಪ ಮಾರ್ಪಾಡು ಮಾಡಲು ಸಂಸದರಿಗೆ ಮನವಿ ಮಾಡುವ ನಿರ್ಣಯ ಕೈಗೊಳ್ಳಲಾಯಿತು.

    ಈ ವೇಳೆ ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು, ಜಿ.ಪಂ ಸದಸ್ಯ ಸುರೇಶ್ ಬಟವಾಡಿ, ಭಾಸ್ಕರ್ ದೇವಾಡಿಗ, ನಾಗರಾಜ ಗಾಣಿಗ ಬಂಕೇಶ್ವರ, ಭಾಸ್ಕರ್ ನಾಯಕ್, ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.