Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆಯಲ್ಲಿ ಜಲ ಜಾನಪದೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಮರವಂತೆಯಲ್ಲಿ ಜಲ ಜಾನಪದೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಮರವಂತೆಯಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಹಾಗೂ ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರದ ಸಹಕಾರದೊಂದಿಗೆ ರಾಜ್ಯ ಮಟ್ಟದ ಜಲಜಾನಪದೋತ್ಸವ ಆಯೋಜಿಸಲಾಗಿತ್ತು.

    Click Here

    Call us

    Click Here

    ಮಾಜಿ ಶಾಸಕ, ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿರುವ ನಾವೆಲ್ಲ, ನಮ್ಮ ಸ್ವಂತಿಕೆಯನ್ನು ಮಸುಕಾಗದಂತೆ ಕಾಪಾಡಿಕೊಳ್ಳಬೇಕಿದೆ. ನಮ್ಮ ಕಲೆ, ಸಂಸ್ಕೃತಿ, ಆಚಾರ, ವಿಚಾರವನ್ನು ಮರೆಯಬಾರದು. ಈ ನಾಡಿನ ಮಣ್ಣಿನ ಗುಣ, ಭಾರತೀಯತೆಯನ್ನು ಉಳಿಸೋಣ. ಆಧುನೀಕತೆಯ ಭರಾಟೆಯಲ್ಲಿ ನಮ್ಮ ಜನಪದೀಯ ಕಲೆಗಳು ಅಳಿದು ಹೋಗುತ್ತಿದ್ದು, ಅದನ್ನು ಉಳಿಸುವ ಜತೆಗೆ ಮಹತ್ವದ ಬಗೆಗೆ ಮುಂದಿನ ಪೀಳಿಗೆಗೆ ತಿಳಿಸುವಂತಹ ಹೊಣೆಗಾರಿಕೆ ನಮ್ಮೆಲ್ಲರದು. ಕಾರಂತರು ಹೇಳಿದಂತೆ ನದಿ, ಕಡಲು, ಬೆಟ್ಟಗಳಲ್ಲಿ ಸಿಗುವಷ್ಟು ಶಾಂತಿ ಬೇರೆಲ್ಲೂ ಸಿಗದು. ಅಂತಹ ಪವಿತ್ರವಾದ ಸ್ಥಳದಲ್ಲಿ ಈ ನಮ್ಮ ಜಾನಪದ ಉತ್ಸವವನ್ನು ಆಯೋಜಿಸಿರುವುದು ಸ್ತುತ್ಯಾರ್ಹ ಎಂದರು.

    ಪಾರಂಪರಿಕ ವಸ್ತು ಪ್ರದರ್ಶನವನ್ನು ಉದ್ಯಮಿ, ಡಾ. ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿ ಮಾತನಾಡಿ, ಇಂತಹ ಉತ್ಸವಗಳಿಂದ ಅಳಿವಿನಂಚಿಗೆ ಸರಿಯುತ್ತಿರುವ ನಮ್ಮ ಕೆಲ ಕಲೆ, ಸಂಸ್ಕೃತಿ, ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಿದಂತಾಗುತ್ತದೆ. ನಮ್ಮ ಮಕ್ಕಳಿಗೆ ಇಲ್ಲಿನ ಆಚರಣೆ, ಯಕ್ಷಗಾನ, ಧಾರ್ಮಿಕ ಆಚರಣೆಗಳ ಬಗ್ಗೆ ಕಲಿಸಿಕೊಡುವ ಕಾರ್ಯ ಆಗಲಿ ಎಂದವರು ಹೇಳಿದರು.

    ಜಾನಪದ ವಿದ್ವಾಂಸರು, ವಿಶ್ರಾಂತ ಕುಲಪತಿಗಳು ಪ್ರೋ.ಕೆ.ಚಿನ್ನಪ್ಪ ಗೌಡ, ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ತುಳಸೀ ಗೌಡ, ಕೊಳಲು ವಾದಕರು ಭುಜಂಗ ಕೊರಗ, ದೈವಾರಾಧನೆ ನಾಗರಾಜ ಪಾಣ, ಕುಂಬಾರಿಕೆ ರಘುರಾಮ್ ಕುಲಾಲ, ಹೋಳಿಕುಣಿತ ದೇವೇಂದ್ರ ನಾಯಕ್, ಕೊಂಕಣಿ ಖಾರ್ವಿ ಸಮಾಜದ ಹಿರಿಯ ಕಣಜ ದಾಸ ಖಾರ್ವಿ, ಜನಪದ ಪಾರ್ದನ ತಿಮ್ಮು ಕುತ್ತಾರ್, ಜನಪದ ವೈದ್ಯ ಶಾಲಿನಿ ಮೊನ್ನಗೌಡ, ಜನಪದ ಹಲಗೆವಾದಕರು ಸುಬ್ರಾಯ ವಿ.ಆಗೇರ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

    ಕನ್ನಡ ಜಾನಪದ ಪರಿಷತ್ ಯುವ ಬ್ರಿಗೇಡ್‍ನ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಪುಸ್ತಕ ಪ್ರದರ್ಶನವನ್ನು ರಾಜ್ಯ ವೈಜ್ಞಾನಿಕ ಪರಿಷತ್ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.

    Click here

    Click here

    Click here

    Call us

    Call us

    ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಕಾರ್ಯನಿರ್ವಣಾಧಿಕಾರಿ ಭಾರತಿ, ಮರವಂತೆ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ, ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಜಯಶೀಲ ಶೆಟ್ಟಿ, ಪರಿಷತ್ ಖಜಾಂಚಿ ಡಾ. ಕನಕತಾರ, ಪ್ರೋ. ಕೆ.ಎಸ್. ಕೌಜಲಗಿ, ಡಾ. ರಮೇಶ್ ತೇಲಿ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷೆ ಡಾ. ನಿಕೇತನ, ಉತ್ಸವದ ಗೌರವ ಸಲಹೆಗಾರ ಪ್ರೋ. ಕನರಾಡಿ ವಾದಿರಾಜ ಭಟ್, ದಯಾನಂದ ಬಳೆಗಾರ್ ಮರವಂತೆ, ಮರವಂತೆ ಮೀನುಗಾರರ ಸಮಾಜದ ಅಧ್ಯಕ್ಷ ವಾಸುದೇವ ಖಾರ್ವಿ, ಮತ್ತಿತರರು ಉಪಸ್ಥಿತರಿದ್ದರು.

    ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗ ಸಂಚಾಲಕಿ ಡಾ. ಭಾರತಿ ಮರವಂತೆ ಪ್ರಸ್ತಾವಿಸಿ, ಉತ್ಸವದ ಗೌರವ ಸಲಹೆಗಾರ ಎಸ್. ಜನಾರ್ದನ ಮರವಂತೆ ಸ್ವಾಗತಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿ, ಪ್ರ. ಸಂಚಾಲಕ ಉದಯ್ ಕುಮಾರ್ ಬಿ. ಹಾಯ್ಕಾಡಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.