Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಟಿಸಂ ಖಾಯಿಲೆಯಲ್ಲ, ಒಂದು ಸ್ವಭಾವ: ಸಿಇಓ ಡಾ. ನವೀನ್ ಭಟ್
    ಉಡುಪಿ ಜಿಲ್ಲೆ

    ಆಟಿಸಂ ಖಾಯಿಲೆಯಲ್ಲ, ಒಂದು ಸ್ವಭಾವ: ಸಿಇಓ ಡಾ. ನವೀನ್ ಭಟ್

    Updated:23/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಮಾ.23:
    ಆಟಿಸಂ ಎಂಬುವುದು ಒಂದು ಖಾಯಿಲೆಯಲ್ಲ ಇದೊಂದು ಸ್ವಭಾವ. ಇಂತಹ ಹಠ ಸ್ವಭಾವದ ಮಕ್ಕಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಪ್ರಸ್ತುತ ಸಮಾಜದಲ್ಲಿ ಬಹಳ ಅನಿವಾರ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್ಟ್ ವೈ. ಹೇಳಿದರು.

    Click Here

    Call us

    Click Here

    ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಟಿಸಂ ಸೊಸೈಟಿ ಆಫ್ ಉಡುಪಿ ಇದರ ಸಂಯುಕ್ತ ಆಶ್ರಯದೊಂದಿಗೆ ಅಂಗನವಾಡಿ ವೇಲ್ವಿಚಾರಕರಿಗೆ ಮತ್ತು ಆಶಾ ಕಾರ್ಯಕರ್ತ ಮೇಲ್ವಿಚಾರಕರಿಗೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ನಡೆದ ಸ್ವಲೀನತೆ ಜಾಗೃತಿ ಕಾರ್ಯಗಾರ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ 58 ಮಕ್ಕಳಿಗೆ ಆಟಿಸಂ ಇರುವ ಪಟ್ಟಿ ಸಿಕ್ಕಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಸರ್ವೆ ಮಾಡುವ ಮೂಲಕ ಮುಂದೆ ಆ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬಹುದು ಎಂಬ ಯೋಜನೆ ಕೈಗೊಳ್ಳಬಹುದು , ಆಟಿಸಂ ಎಂಬುವುದು ಮಕ್ಕಳ ಮೇಲೆ ಪರಿಣಾಮ ಬೀರುವುದರಿಂದ ಮುಂದೆ ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಕಷ್ಟವಾಗಬಹುದು, ಆದ್ದರಿಂದ ಸಣ್ಣ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಬದಲಾವಣೆ ತರಲು ಅಂಗನವಾಡಿ ಮೇಲ್ವಿಚಾರಕರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಈ ಜಾಗೃತಿ ಕಾರ್ಯಗಾರ ಉಪಯುಕ್ತವಾದದ್ದು ಎಂದರು.

    ಆಟಿಸಂ ಸೊಸೈಟಿ ಆಫ್ ಉಡುಪಿ ಅಧ್ಯಕ್ಷರಾದ ಡಾ. ಪಿ ವಿ ಭಂಡಾರಿ ಮಾತನಾಡಿ ಆಟಿಸಂ ಬಗ್ಗೆ ಜನ ಸಾಮಾನ್ಯರಿಗೆ ಸರಿಯಾದ ಮಾಹಿತಿ ಸಿಗಬೇಕು ಜೊತೆಗೆ ಆಟಿಸಂ ಕಂಡೀಷನ್ ಇರುವ ಮಕ್ಕಳು ಮತ್ತು ಮಕ್ಕಳ ಪೋಷಕರ ಸಮಸ್ಯೆಗಳಿಗೆ ಸ್ಪಂಧಿಸುವAತಹ ವಾತಾವರಣ ಜಿಲ್ಲೆಯಲ್ಲಿ ನಿರ್ಮಾಣವಾಗಬೇಕು ಎಂದರು.

    ಆಟಿಸಂ ಸಮಸ್ಯೆಯನ್ನು ಸರಿಯಾದ ಸಮಯದಲ್ಲಿ ಗುರುತಿಸಿ ಸರಿಯಾದ ತರಬೇತಿಯನ್ನು ನೀಡಿದ್ದಲ್ಲಿ ಗುಣಪಡಿಸಲು ಸಾಧ್ಯ, ಇದಕ್ಕೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಉಡುಪಿ, ಕಾರ್ಕಳ, ಕುಂದಾಪುರಗಳಲ್ಲಿ ಚಿಕಿತ್ಸಾ ಸೆಂಟರ್ ಗಳನ್ನು ಸ್ಥಾಪಿಸುವ ಉದ್ದೇಶ ಇದೆ ಎಂದರು.

    Click here

    Click here

    Click here

    Click Here

    Call us

    Call us

    ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ ಅಂಗನವಾಡಿ ವೇಲ್ವಿಚಾರಕರಿಗೆ ಮತ್ತು ಆಶಾ ಕಾರ್ಯಕರ್ತೆಯರು ಸಮಾಜಲ್ಲಿ ಮಕ್ಕಳು ಹಾಗೂ ಜನ ಸಾಮಾನ್ಯರಲ್ಲಿ ಬದಲಾವಣೆ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ, ಆದ್ದರಿಂದ ಈ ಜಾಗೃತಿ ಕಾರ್ಯಗಾರದ ಉಪಯೋಗವನ್ನು ಪಡೆದುಕೊಂಡು ಸಹಕರಿಸಬೇಕೆಂದು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲ ಡಿಪಾರ್ಟ್ಮೆಂಟ್ ಆಫ್ ಸ್ಟೂಡೆಂಟ್ ಅಫೆರ್ಸ ನಿರ್ದೇಶಕರಾದ ಡಾ. ಗೀತಾ ಮಯ್ಯ, ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಮುಂತಾದ ಗಣ್ಯರು ಭಾಗವಹಿಸಿದ್ದರು.

    ವಿಕಲಚೇತನರ ಸಬಲೀಕರಣ ಅಧಿಕಾರಿ ರತ್ನ ಸ್ವಾಗತಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಂದಿಸಿ, ಕಾರ್ಯಕ್ರಮ ವ್ಯವಸ್ಥಾಪಕ ಆಟಿಸಂ ಸೊಸೈಟಿ ಆಫ್ ಉಡುಪಿ ಕೀರ್ತೆಶ್ ಎಸ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    6 + 11 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.