ತೈಲ, ಗ್ಯಾಸ್ ಬೆಲೆ ಹೆಚ್ಚಳಕ್ಕೆ ಖಂಡನೆ. ಬೆಲೆ ಇಳಿಕೆಗೆ ಕುಂದಾಪುರ ಕಾಂಗ್ರೆಸ್ ಆಗ್ರಹ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪಂಚ ರಾಜ್ಯ ಚುನಾವಣೆ ಬಳಿಕ 12 ದಿನಗಳಲ್ಲಿ ಸತತ 10 ಬಾರಿ ಪೆಟೋಲ್ ಮತ್ತು ಡೀಸೆಲ್ ಬೆಲೆ ಎರಿಸಿರುವುದರಿಂದ ತೈಲ ಬೆಲೆ ಲೀಟರ್ ಗೆ 7 ರೂಪಾಯಿ ಹೆಚ್ಚಳವಾಗಿದ್ದು ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ದಾರೆ.

Call us

Click Here

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 250 ರೂಪಾಯಿ ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಮತ್ತು ವಾಣಿಜ್ಯ ಮಾಲಿಕರಿಗೆ ತೀವ್ರ ಹೊಡೆತ ಬಿದ್ದಿದ್ದು,ಇದರಿಂದ ನೇರ ಗ್ರಾಹಕರ ಮೇಲೆ ಬೆಲೆ ಏರಿಕೆ ಬಿಸಿ ಪ್ರಾರಂಭವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕುಗಳ ಬೆಲೆ ಪುನಃ ಹೆಚ್ಚಳವಾಗಲು ಪ್ರಾರಂಭವಾಗಿದ್ದು ಇದರಿಂದ ಶ್ರೀ ಸಾಮಾನ್ಯನಿಗೆ ಬಾರಿ ಹೊಡೆತ ಬೀಳಲಿದೆ .

ಹಿಂದೆ ಯುಪಿಎ ಸರಕಾರವಿದ್ದಾಗ ತೈಲ ಬೆಲೆ 10 ರಿಂದ 20 ಪೈಸ ಎರಿದಾಗ ಗ್ಯಾಸ್ ಸೆಲೆಂಡರ್ ದರ 5 ರೂಪಾಯಿ ಹೆಚ್ಚಳವಾದಾಗ ರಸ್ತೆಗಿಳಿದು ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು ಈಗ ಮೌನಕ್ಕೆ ಶರಣಾಗಲು ಕಾರಣ ಏನು ಎಂದು ಪ್ರಶ್ನಿಸಿದ್ದಾರೆ.

ಲಾಕ್ ಡೌನ್ ನಿಂದ ಹೈರಾಗಾಗಿರುವ ಜನರ ಪರ ನಿಲ್ಲಬೇಕಾದ ಸರಕಾರ ಬೆಲೆ ಏರಿಕೆಯಿಂದ ಜನರ ಮನಸನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ಸಂಘಟನೆಗಳನ್ನು ಉಪಯೋಗಿಸಿಕೊಂಡು ಜಾತಿ ಮತ್ತು ಧರ್ಮಗಳ ಮದ್ಯೆ ವಿಷ ಬೀಜ ಬಿತ್ತಿ ದ್ವೇಷದ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ ಕಳೆದ 7 ವರ್ಷದಿಂದ ಬಿಜೆಪಿಗೆ ನಿರಂತರ ಬೆಂಬಲ ನೀಡಿದ ಜನತೆಯನ್ನೂ ಮರೆತಿರುವ ಬಿಜೆಪಿ ಸರಕಾರ ಜನಸಾಮಾನ್ಯರ ಪರವಾಗಿ ನಿಂತು, ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಆಗ್ರಹಿಸಿದ್ದಾರೆ.

Leave a Reply