Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರ ಪರಿಕಲ್ಪನೆ ಮೂಲಕ ಸ್ವಾವಲಂಬಿ ಬದುಕು: ಎಸ್‌ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆ ಉದ್ಘಾಟಿಸಿ ಸಚಿವ ಎಸ್. ಟಿ. ಸೋಮಶೇಖರ್
    Uncategorized

    ಸಹಕಾರ ಪರಿಕಲ್ಪನೆ ಮೂಲಕ ಸ್ವಾವಲಂಬಿ ಬದುಕು: ಎಸ್‌ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆ ಉದ್ಘಾಟಿಸಿ ಸಚಿವ ಎಸ್. ಟಿ. ಸೋಮಶೇಖರ್

    Updated:04/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಸರಕಾರ ಪರಿಕಲ್ಪನೆಯ ಮೂಲಕವೇ ಲಕ್ಷಾಂತರ ಮಂದಿ ಸ್ವಾವಲಂಬಿಗಳಾಗಿದ್ದಾರೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.

    Click Here

    Call us

    Click Here

    Watch Video

    ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 110ನೇ ನೂತನ ಉಪ್ಪುಂದ ಶಾಖೆ ಉದ್ಘಾಟಿಸಿ ಈ ಮಾತನಾಡಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಅತ್ಯುತ್ತಮ ಕಾರ್ಯಸಾಧನೆಗಳ ಮೂಲಕ ಇತರರಿಗೂ ಮಾದರಿಯಾಗಿದೆ ಎಂದರು.

    ನವೋದಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ ಉದ್ಘಾಟಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮಾತನಾಡಿ ರಾಜ್ಯ ಸರಕಾರ ರೈತರ ಅಭಿವೃದ್ಧಿಯ ಜೊತೆಗೆ ರೈತ್ಯೋದ್ಯಮದ ಬಗ್ಗೆ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ ತರುವ ಚಿಂತನೆಯಲ್ಲಿದೆ. ನವೋದಯ ಸ್ವ-ಸಹಾಯ ಸಂಘಗಳು ಹಲವರ ಬದುಕಿಗೆ ಬೆಳಕಾಗಿದೆ. ಕೃಷಿಕರ ಮತ್ತು ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ನೀಡಿದೆ ಎಂದರು.

    ಹೊಸ ಸ್ವ-ಸಹಾಯ ಗುಂಪುಗಳನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ. ಸಿ ಪಾಟೀಲ್ ಮಾತನಾಡಿ ಕೃಷಿ ಸಹಕಾರಿ ಮತ್ತು ಉದ್ಯಮ ಒಂದಕ್ಕೊಂದು ಬೆಸೆದುಕೊಂಡಿದೆ. ರಾಜ್ಯದಲ್ಲಿ ಕಿಸಾನ್ ಸನ್ಮಾನ್ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. 5 ಎಕರೆಗಿಂತ ಕಡಿಮೆ ಭೂಮಿ ಇರುವ ಸಣ್ಣ ರೈತರ ಟ್ರ್ಯಾಕ್ಟರ್’ಗಳಿಗೆ ರಾಜ್ಯ ಸರಕಾರ ಒಟ್ಟು 1,250ರೂ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ ಎಂದರು.

    ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನವೋದಯ ಸ್ವಸಹಾಯ ಸಂಘದ ಮೂಲಕ ಉಭಯ ಜಿಲ್ಲೆಗಳ ಮಹಿಳೆಯರಿಗೆ ಸ್ವಾವಲಂಭಿ ಬದುಕಿಗೆ ದಾರಿ ತೋರಲಾಗಿದೆ. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ರೈತರ ಮನೆ ಬಾಗಿಲಿಗೆ ತಲುಪಿಸಲಾಗಿದೆ.ನವೋದಯದ ಸಾಧನೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದ ಅವರು ಉಪ್ಪುಂದ ಶಾಖೆಗೆ ಆರಂಭದಲ್ಲಿಯೇ 26 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಹಿಂದುಳಿದ ವರ್ಗಗಳ ಯೋಜನಾ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಗಣಕೀರಣ ಉದ್ಘಾಟಿಸಿದರು. ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಭದ್ರತಾಕೋಶ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ವಾಹನ ಸಾಲ ಪತ್ರ ವಿತರಿಸಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಲಾಕರ್ ಕೀ ಹಸ್ತಾಂತರಿಸಿದರು.

    ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ, ಉಪ್ಪುಂದ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿಖಾರ್ವಿ, ಕಟ್ಟಡದ ಮಾಲಕ ಹಿರಿಯಣ್ಣ ಶೆಟ್ಟಿ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ, ನಿರ್ದೇಶಕರಾದ ಬಿ. ನಿರಂಜನ್, ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ ಎಸ್, ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ,ಶಶಿಕುಮಾರ್ ರೈ.ಬಿ, ಎಸ್.ಬಿ.ಜಯರಾಮ ರೈ, ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು,ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ,ಕೆ.ಜೈರಾಜ್ ಬಿ.ರೈ, ಬಿ.ಅಶೋಕ ಕುಮಾರ್ ಶೆಟ್ಟಿ,ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್ ಉಪಸ್ಥಿತರಿದ್ದರು.

    ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ದೇಶಕರಾದ ಮೊಳವಳ್ಳಿ ಮಹೇಶ್ ಹೆಗ್ಡೆ ಧನ್ಯವಾದಗೈದರು. ಪತ್ರಕರ್ತರಾದ ಕೆ. ಸಿ ರಾಜೇಶ್, ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    9 − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.