Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.6-10: ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಪದ್ಮಾವತಿ ಅಮ್ಮನವರ ದೇಗುಲದಲ್ಲಿ ಪಂಚಕಲ್ಯಾಣ ಮಹೋತ್ಸವ, ರಥೋತ್ಸವ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಎ.6-10: ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಪದ್ಮಾವತಿ ಅಮ್ಮನವರ ದೇಗುಲದಲ್ಲಿ ಪಂಚಕಲ್ಯಾಣ ಮಹೋತ್ಸವ, ರಥೋತ್ಸವ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

    Updated:05/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಕಾಲ್ತೋಡು ಗ್ರಾಮ ಶ್ರೀ ಕ್ಷೇತ್ರ ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಆಳುಪ ರಾಜ ಮನೆತನದ ದೇವಿ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಬಸದಿಯ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ನೂತನ ಶಿಲಾಮಯ ಮಾನಸ್ತಂಭ ಪ್ರತಿಷ್ಠಾಪನೆ, ಶ್ರೀ ಪದ್ಮಾವತಿ ಅಮ್ಮನವರ ಬಸದಿಯ ನೂತನ ರಥೋತ್ಸವ ಮಹೋತ್ಸವವು ಎಪ್ರಿಲ್ 6 ರಿಂದ 10ನೇ ತಾರೀಕಿನ ತನಕ ಜರುಗಲಿದೆ.

    Click Here

    Call us

    Click Here

    ಮೂಡಬಿದ್ರೆ ಜೈನಮಠ ಚಾರುಕೀರ್ತಿ ಭಟ್ಟಾರಕರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ದೇವೇಂದ್ರಕೀರ್ತಿ ಭಟ್ಟಾರಕ ಹಾಗೂ ಸೋಂದೆ ಮಠ ಭಟ್ಟಾಕಳಂಕ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಜರುಗುವ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗಿನಿಂದ ರಾತ್ರಿಯವರೆಗೆ ದೇವಪೂಜಾ ಕಾರ್ಯಗಳು, ಮಹಾಮಾತೆ ಪದ್ಮಾವತಿಯ ಆರಾಧನೆ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮಗಳು, ರಾತ್ರಿ 8 ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಯಕ್ಷಗಾನ ಜೋಡಾಟ, ನಾಟಕಗಳು, ಮನುಹಂದಾಡಿ ಅವರಿಂದ ಹಾಸ್ಯಸಂಜೆ, ಮಹೇಶ ಹರಪನಹಳ್ಳಿ ಬಳಗದವರಿಂದ ಸಂಗೀತ ರಸಮಂಜರಿ, ಗಂಗೊಳ್ಳಿ ಜೂನಿಯರ್ ಗುರುಕಿರಣ್ ರವರಿಂದ ನೃತ್ಯ ಸಂಗೀತ, ಹಾಗೂ ಹಗಲಿನಲ್ಲಿ ಧಾರ್ಮಿಕ ಸಭಾಕಾರ್ಯಕ್ರಮಗಳು ಜರುಗಲಿವೆ.

    ಎಪ್ರಿಲ್ 6ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಗವಾನ್ 1008 ಶ್ರೀ ಪಾರ್ಶ್ವನಾಥ ತೀರ್ಥಂಕರರ ಜಿನಬಿಂಬದ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ಎಪ್ರಿಲ್ 10 ರಂದು ರಥೋತ್ಸವ ಜರುಗಲಿದೆ. ಭಕ್ತರಿಗಾಗಿ ಎಲ್ಲಾ ಐದು ದಿನಗಳು ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಬೆಳಿಗ್ಗೆ ಮತ್ತು ರಾತ್ರಿಯಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

    ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದದ ಡಿ ಸುರೇಂದ್ರ ಹೆಗ್ಗಡೆ ಅವರು, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ ರಾಘವೇಂದ್ರ, ಸಹಕಾರಿ ಧುರೀಣ ಡಾ. ಎಂ ಎನ್ ರಾಜೇಂದ್ರ ಕುಮಾರ್, ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ಮಾಜಿ ಶಾಸಕರುಗಳಾದ ಬಸ್ರೂರು ಅಪ್ಪಣ್ಣ ಹೆಗ್ಗಡೆ, ಗೋಪಾಲ ಪೂಜಾರಿ, ರಾಜಶೇಖರ್ ಹೆಬ್ಬಾರ್, ಪೃಥ್ವಿರಾಜ್ ಜೈನ್ ಹಾಗೂ ಸಮಾಜದ ಇನ್ನಿತರ ಗಣ್ಯರು ಭಾಗವಹಿಸಲಿರುವರು.

    ಪ್ರತಿ 12 ವರ್ಷಗಳಿಗೊಮ್ಮೆ ಜರಗುವ ಈ ಪುಣ್ಯ ಕಾರ್ಯದಲ್ಲಿ ಸಾರ್ವಜನಿಕರು ಭಾಗವಹಿಸಿ ಶ್ರೀದೇವಿ ಮಹಾಮಾತೆ ಪದ್ಮಾವತಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್, ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ಆಕಾಶರಾಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.