ಕಾವ್ಯಶ್ರೀ ನಾಯಕ್ ಅಜೇರುಗೆ ಕಲಾಕೀರ್ತಿ ಬಿರುದು ಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ಪೇಟೆ ವೆಂಕಟರಮಣ ದೇವರ ಜಾತ್ರೆಯ ಪ್ರಯುಕ್ತ ಶ್ರೀಗಣೇಶ ಯಕ್ಷಗಾನ ಮಂಡಳಿ, ಉಪ್ಪಿನಕುದ್ರು ಸಂಯೋಜನೆಯಲ್ಲಿ ನಡೆದ ಹತ್ತನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಹೆಸರಾಂತ ಭಾಗವತೆ ಕಾವ್ಯಶ್ರೀ ನಾಯಕ್ ಅಜೇರುಗೆ ಕಲಾಕೀರ್ತಿ ಬಿರುದಿನೊಂದಿಗೆ ಸನ್ಮಾನಿಸಲಾಯಿತು.

Call us

Click Here

ದೇವಳದ ಆಡಳಿತ ಮೊಕ್ತೇಸರ ಮೋಹನದಾಸ ಶೆಣೈ ಅಧ್ಯಕ್ಷತೆ ವಹಿಸಿದ್ದರು. ದೇವಳದ ಆಡಳಿತ ಸದಸ್ಯರಾದ ಸುಬ್ರಾಯ ಪೈ, ವಿವೇಕ ಪೈ, ಶೋಭಾ, ಶ್ಶಾಲಿನಿ, ಪ್ರೀತಮ್ ಉಪಸ್ಥಿತರಿದ್ದರು.

ರಂಗಸ್ಥಳ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ವಿ. ರಾಘವೇಂದ್ರ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟರಮಣ ನಾಯಕ್ ಸನ್ಮಾನಪತ್ರ ವಾಚಿಸಿದರು. ವಿಠಲ ಕಾಮತ್ ಸ್ವಾಗತಿಸಿದರು. ವಸಂಯರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply