ಬಿಜೆಪಿ ಕುಂದಾಪುರ ಮಂಡಲ ಯುವಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಿಜೆಪಿ ಕುಂದಾಪುರ ಮಂಡಲ ಯುವಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ನಡೆಯಿತು.

Call us

Click Here

ಯುವಮೋರ್ಚಾ ಕುಂದಾಪುರ ಅಧ್ಯಕ್ಷ ಅವಿನಾಶ್ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಕಾರ್ಯಕ್ರಮದ ಕುರಿತು ಮಾತನಾಡಿದರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಯುವಮೋರ್ಚಾ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್ ಶಾಂತಿ ನಿಕೇತನ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಬಂಗೇರಾ,ಸುನಿಲ್ ಖಾರ್ವಿ,ಕುಂದಾಪುರ ನಗರ ಪ್ರಾಧಿಕಾರ ಅಧ್ಯಕ್ಷರಾದ ವಿಜಯ್ ಎಸ್ ಪೂಜಾರಿ, ಪುರಸಭೆ ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ್ ಅಂಕದ ಕಟ್ಟೆ,ಕಾರ್ಯದರ್ಶಿ ದೀಕ್ಷಿತ್ ಶೆಟ್ಟಿ,ಸಫಲ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಕೋಟಿ ಪೂಜಾರಿ ಆಶ್ರಯ್ ಶೆಟ್ಟಿ ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ ಹಾಡಿದರು.

ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಸುನಿಲ್ ಖಾರ್ವಿ ಸ್ವಾಗತಿಸಿ, ಯುವಮೊರ್ಚಾ ಪ್ರದಾನ ಕಾರ್ಯದರ್ಶಿ ಚೇತನ್ ಬಂಗೇರಾ ವಂದಿಸಿದರು. ಯುವಮೋರ್ಚಾ ಕೆದೂರು ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರತಾಪ್ ಶೆಟ್ಟು ಉಳ್ತೂರು ನಿರೂಪಿಸಿದರು.

Leave a Reply