ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ: 31 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ರಾಮ ನವಮಿ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮ ಭಾನುವಾರ ಕುಂದಾಪುರ ವ್ಯಾಸರಾಜ ಕಲಾ ಮಂದಿರದಲ್ಲಿ ಜರುಗಿತು.

Call us

Click Here

ಸಮಾಜದ 31 ವಟುಗಳಿಗೆ ಸಾಮೂಹಿಕವಾಗಿ ಬ್ರಹ್ಮೋಪದೇಶ ನೀಡಲಾಯಿತು. ಧಾರ್ಮಿಕ ವಿಧಿ ವಿಧಾನವನ್ನೂ ಮಠದ ಅರ್ಚಕ ವಿಜಯ ಪೇಜಾತ್ತಾಯ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಕೆ.ಎಂ. ಲಕ್ಷ್ಮಣ, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೊಡು,ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸೇವಾ ಸಂಘದ ಅಧ್ಯಕ್ಷ ಎಚ್.ಟಿ.ನರಸಿಂಹ ಮತ್ತು ಆಡಳಿತ ಮಂಡಳ ಸದಸ್ಯರು ಉಪಸ್ಥಿತರಿದ್ದರು.

Leave a Reply