Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಪ್ರಕರಣ: ಆರೋಪಿಗೆ 20 ವರ್ಷ ಜೈಲು
    Uncategorized

    ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಪ್ರಕರಣ: ಆರೋಪಿಗೆ 20 ವರ್ಷ ಜೈಲು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ
    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 25 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.

    Click Here

    Call us

    Click Here

    ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದಾರೆ.

    16 ವರ್ಷ ಪ್ರಾಯದ ಬಾಲಕಿಯನ್ನು ಆಕೆಯ ಚಿಕ್ಕಪ್ಪ (ಸಂತ್ರಸ್ತೆ ತಾಯಿಯ ತಂಗಿ ಗಂಡ) ತನ್ನ ಮನೆಯಲ್ಲಿ ಆಕೆಯ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆಕೆ 7 ತಿಂಗಳ ಗರ್ಭವತಿಯಾದಾಗ ಘಟನೆ ಕುಟುಂಬಿಕರ ಗಮನಕ್ಕೆ ಬಂದಿದ್ದು ವಿಚಾರಿಸಿದಾಗ ಕೂಲಿ ಕೆಲಸ ಮಾಡಿಕೊಂಡಿದ್ದ ಚಿಕ್ಕಪ್ಪನೇ ಈ ಕೃತ್ಯ ಎಸಗಿರುವುದು ತಿಳಿದು ಬಂದಿತ್ತು.

    ಘಟನೆ ಬೆಳಕಿಗೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಕೈಕಾಲಿಗೆ ಬಿದ್ದು ಪ್ರಕರಣ ರಾಜಿ ಮೂಲಕ ಇತ್ಯರ್ಥ ಮಾಡಲು ಆರೋಪಿ ದುಂಬಾಲು ಬಿದ್ದಿದ್ದ. ಬಾಲಕಿಯ ಜೀವನ ನಿರ್ವಹಣೆಯ ಖರ್ಚುವೆಚ್ಚ ತಾನೇ‌ ನೋಡಿಕೊಳ್ಳುವುದಾಗಿ ದೇವರು ದೈವದ ಮೇಲೆ ಆಣೆ ಪ್ರಮಾಣ ಮಾಡಿ ಪ್ರಕರಣ ಹಳ್ಳಹಿಡಿಸುವ ತಂತ್ರ ಮಾಡಿದ್ದ. ಆದರೆ ಸಂತ್ರಸ್ತ ಬಾಲಕಿ ಪೋಷಕರು ಇದ್ಯಾವುದನ್ನು ಒಪ್ಪದಿದ್ದು ಬಾಲಕಿ ತಾಯಿ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆಯೇ ಆರೋಪಿಯನ್ನು ಬಂಧಿಸಲಾಗಿದ್ದು ಬಳಿಕ ಆತ ಜಾಮೀನು ಪಡೆದು ಹೊರಗೆ ಬಂದಿದ್ದ.

    ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಬಾಲಕಿ ಆರಂಭಿಕವಾಗಿ ನುಡಿದ ಸಾಕ್ಷ್ಯಗಳು ಅಭಿಯೋಜನೆಗೆ ಪೂರಕವಾಗಿರಲಿಲ್ಲ. ಪ್ರಾಸಿಕ್ಯೂಷನ್ ಅಡ್ಡ ವಿಚಾರಣೆ ವೇಳೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಆಕೆ ತಿಳಿಸಿದ್ದಳು. ಈತನ್ಮಧ್ಯೆ ಡಿಎನ್‌‌ಎ ವರದಿ ಕೂಡ ನೆಗಟಿವ್ ಬಂದಿತ್ತು. ಆಕೆ ಮೇಲೆ ದೌರ್ಜನ್ಯ ನಡೆಯುವ ವೇಳೆ ಆಕೆ ಅಪ್ರಾಪ್ತಳು ಎಂಬುದನ್ನು ಪ್ರಾಸಿಕ್ಯೂಷನ್ ನ್ಯಾಯಾಲಯದ ಮುಂದೆ ಸಾಬೀತು ಮಾಡಿತ್ತು. ಇನ್ನು ಸಂತ್ರಸ್ತೆ ತಾಯಿ ಹಾಗೂ ತಂದೆ ಪ್ರಾಸಿಕ್ಯೂಷನ್ ಪೂರಕವಾಗಿ ಸಾಕ್ಷ್ಯ ನುಡಿದಿದ್ದರು. ನ್ಯಾಯಾಲಯದಲ್ಲಿ 22 ಸಾಕ್ಷಿಗಳ ಪೈಕಿ 16 ಮಂದಿ ವಿಚಾರಣೆ ಮಾಡಲಾಗಿತ್ತು.

    Click here

    Click here

    Click here

    Call us

    Call us

    ಪ್ರಕರಣದ ವಿಚಾರಣೆ ಮೊದಲಿಗೆ ಕುಂದಾಪುರ ನ್ಯಾಯಾಲಯದಲ್ಲಿ ನಡೆದಿತ್ತು. ಪ್ರಾಥಮಿಕ ಹಂತದ ವಿಚಾರಣೆಯನ್ನು ಪ್ರಾಸಿಕ್ಯೂಷನ್ ಪರವಾಗಿ ಜಿಲ್ಲಾ ಸರ್ಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ನಡೆಸಿದ್ದು ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಮುಂದುವರಿದ ವಿಚಾರಣೆ ಹಾಗೂ ವಾದವನ್ನು ಮಂಡಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026

    ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    06/07/2026

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.