Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಟೋರಿಕ್ಷಾ ನಿಲುಗಡೆಗೆ ಜಾಗ ಕಲ್ಪಿಸುವಂತೆ ಆಗ್ರಹಿಸಿ ಕುಂದಾಪುರ ಪುರಸಭೆಗೆ ಮುತ್ತಿಗೆ
    Uncategorized

    ಆಟೋರಿಕ್ಷಾ ನಿಲುಗಡೆಗೆ ಜಾಗ ಕಲ್ಪಿಸುವಂತೆ ಆಗ್ರಹಿಸಿ ಕುಂದಾಪುರ ಪುರಸಭೆಗೆ ಮುತ್ತಿಗೆ

    Updated:12/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಪುರಸಭೆಯಲ್ಲಿ ಆಟೋರಿಕ್ಷಾ ಸ್ಟ್ಯಾಂಡ್ ಒದಗಿಸುವಂತೆ ಕಳೆದ ನಲವತ್ತು ವರ್ಷದಿಂದ ನೂರರಷ್ಟು ಮನವಿ ಸಲ್ಲಿಸಿದ್ದರೂ ಆಟೋಚಾಲಕರ ಬವಣೆ ನೀಗಿಲ್ಲ. ಆಟೋರಿಕ್ಷಾ ಎಲ್ಲರಿಗೂ ಬೇಕು. ಚಾಲಕರ ಸಮಸ್ಯೆ ಯಾರಿಗೂ ಬೇಡ. ರಸ್ತೆ ವಿಸ್ತರಣೆ ಕಟ್ಟಡಗಳ ನಿರ್ಮಾಣಕ್ಕೆ ಆಟೋಚಾಲಕರು ನೆಲೆಯಿಲ್ಲದೆ ಪರದಾಡುತ್ತಿದ್ದು, ಪುರಸಭೆ ಅಟೋಚಾಲಕರ ಸಮಸ್ಯೆ ಸ್ಪಂದಿಸದೆ ಅವರ ತುತ್ತಿನ ತಟ್ಟೆ ಕಸಿದುಕೊಳ್ಳುತ್ತದೆ ಎಂದು ಆಟೋ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ ಸಮನ್ವಯ ಸಮತಿ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ ಆರೋಪಿಸಿದ್ದಾರೆ.

    Click Here

    Call us

    Click Here

    ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕ ಸಂಘಟನೆಗಳ ಸಮನ್ವಯ ಸಮಿತಿ ಆಶ್ರಯದಲ್ಲಿ ಕುಂದಾಪುರ ಪುರಸಭೆ ಎದುರು ಮಂಗಳವಾರ ನಡೆದ ಪ್ರತಿಯಲ್ಲಿ ಪುರಸಭೆಗೆ ಮುತ್ತಿಗೆ ಹಾಕಿ ಮಾತನಾಡಿದರು.

    ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮನವಿ ಸ್ವೀಕರಿಸಿ, ಆಟೋರಿಕ್ಷಾ ಚಾಲಕರ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದು, ಹಿಂದೆಯೂ ಕೂಡಾ ಪುರಸಭೆ ಆಟೋಚಾಲಕರ ಸಮಸ್ಯೆ ಬಗ್ಗೆ ಸ್ಪಂದಿಸಿದ್ದು, ಬೇಡಿಕೆ ಬಗ್ಗೆ ಸಂಘಟನೆ ಮುಖಂಡರು ಹಾಗೂ ಚಾಲಕರ ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಪುರಸಭೆ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಭರವಸೆ ನೀಡಿದರು.

    ಸಮನ್ವಯ ಸಮಿತಿ ಮುಖಂಡ ಶಂಕರ ಅಂಕದಕಟ್ಟೆ ಮಾತನಾಡಿ, ಪುರಸಭೆ ತಕ್ಷಣ ಗೂಡ್ಸ್ ಹಾಗೂ ಆಟೋರಿಕ್ಷಾ ಸ್ಟ್ಯಾಂಡ್ ಜಾಗ ಗುರುತಿಸಿ ಪ್ರಕಟಣೆ ಹೊರಡಿಸಬೇಕು. ಗ್ರಾಮೀಣ ಭಾಗದಲ್ಲೂ ಆಟೋರಿಕ್ಷಾ ಸ್ಟ್ಯಾಂಡ್ ಇದೆ. ಆದರೆ ಕುಂದಾಪುರ ನಗರದಲ್ಲಿ ನೆಲೆ ಇಲ್ಲದಿರುವುದು ನೋವಿನ ವಿಷಯ. ಆಟೋರಿಕ್ಷಾ ಸ್ಟ್ಯಾಂಡ್ ಸಮಸ್ಯೆ ಪರಿಹಾರ ಮಾಡದಿದ್ದರೆ ಮುಂದೆ ದೊಡ್ಡಮಟ್ಟದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

    ► ► ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಪ್ರಕರಣ: ಆರೋಪಿಗೆ 20 ವರ್ಷ ಜೈಲು – https://kundapraa.com/?p=58639 .

    Click here

    Click here

    Click here

    Click Here

    Call us

    Call us

    ಸಂಘಟನೆ ಪ್ರಮುಖರಾದ ಚಂದ್ರಶೇಖರ್ ರಾಜ ಮಠದಬೆಟ್ಟು, ಸುರೇಶ ಪುತ್ರನ್, ಸಿಐಟಿ ರಮೇಶ್ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬೆಳಗ್ಗೆ ಕುಂದಾಪುರ ಶಾಸ್ತ್ರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ನೂರಾರು ಆಟೋಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಪ್ರತಿಭಟನಾ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಹೊಸ ಬಸ್‌ನಿಲ್ದಾಣದ ಮೂಲಕ ಪುರಸಭೆ ಮುಂದೆ ಜಮಾಯಿಸಿ, ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನಾ ಸ್ಥಳಕ್ಕೆ ಬಂದ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮತ್ತು ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮನವಿ ಸ್ವೀಕರಿಸಿದರು. ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಶ್ರೀಧರ ಶೇರೆಗಾರ್, ನಾಮನಿರ್ದೇಶಕ ಸದಸ್ಯ ರತ್ನಾಕರ ಶೇರೆಗಾರ್ ಇದ್ದರು. ಕುಂದಾಪುರ ಠಾಣೆ ಎಎಸ್ಸೈ ಸುಧಾಕರ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    13 + 17 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.