Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇವಾಲಯದ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ
    ಊರ್ಮನೆ ಸಮಾಚಾರ

    ಕೊಲ್ಲೂರು ದೇವಾಲಯದ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ

    Updated:17/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ದಕ್ಷಿಣ ಭಾರತದ ಪ್ರಸಿದ್ದ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ವಾರ್ಷಿಕ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಉಚಿತ ಭೋಜನ ಪ್ರಸಾದದ ವ್ಯವಸ್ಥೆಯಿದ್ದು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ ದೊರೆತಿದೆ.

    Click Here

    Call us

    Click Here

    ಭಾರತದ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಈ ಪ್ರಮಾಣ ಪತ್ರ ನೀಡಲಾಗಿದ್ದು, ಇಲ್ಲಿ ಭಕ್ತಾದಿಗಳಿಗೆ ತಯಾರಿಸುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಆಹಾರ ತಯಾರಿಕಾ ಕಟ್ಟಡ ಮತ್ತು ಅಲ್ಲಿರುವ ಸೌಲಭ್ಯಗಳು, ಆಹಾರ ತಯಾರಿಸುವ ವಿಧಾನ, ಸ್ವಚ್ಛತೆ, ಆಹಾರ ತಯಾರಿಕಾ ಸಿಬ್ಬಂದಿಗಳಿಗೆ ನೀಡಿರುವ ತರಬೇತಿ ಈ ಅಂಶಗಳ ಆಧಾರದಲ್ಲಿ ಆಡಿಟ್ ಮಾಡಲಾಗಿದ್ದು, ದೇವಾಲಯದಲ್ಲಿ ಈ ಎಲ್ಲಾ ಅಂಶಗಳಿಗೆ ಪ್ರಾದಾನ್ಯತೆ ನೀಡಿ ಆಹಾರ ತಯಾರಿಸುತ್ತಿರುವುದರಿಂದ ಈ ಪ್ರಮಾಣ ಪತ್ರ ನೀಡಲಾಗಿದೆ.

    ಇಲ್ಲಿನ ದೇವಾಲಯದ ಆಹಾರ ತಯಾರಿಕಾ ಕೊಠಡಿಯು ಅತ್ಯಂತ ಸುಸಜ್ಜಿತವಾಗಿದ್ದು, ಕಟ್ಟಡವು ಮಳೆ ನೀರಿನಿಂದ ಸೋರುವಿಕೆ ಇಲ್ಲದೇ, ಉತ್ತಮ ಗುಣಮಟ್ಟದ ಗೋಡೆ ಹಾಗೂ ಕಾಲು ಜಾರದೇ ಇರುವ ನೆಲಹಾಸು ಸೌಲಭ್ಯ, ತುಕ್ಕು ಹಿಡಿಯದ ಕಿಟಕಿ ಬಾಗಿಲುಗಳು, ಆಹಾರ ತಯಾರಿಕೆಗೆ ಬಳಸುವ ಪಾತ್ರೆಗಳ ಗುಣಮಟ್ಟ, ಕಲಾಯಿ ಹಾಕಿರುವುದು, ಉತ್ತಮ ಗಾಳಿ ಬೆಳಕು ಸೌಲಭ್ಯ , ಆಹಾರವನ್ನು ಬಿಸಿ ಮತ್ತು ತಂಪು ಮಾಡಲು ಬಳಸುವ ಯಂತ್ರೋಕರಣಗಳ ಸೌಲಭ್ಯ, ಆಹಾರ ತಯಾರಿಕಾ ಸಾಮಗ್ರಿಗಳನ್ನು ದಾಸ್ತಾನು ಮಾಡಲು ಬಳಸುವ ಉತ್ತಮ ಕೊಠಡಿ ಸೌಲಭ್ಯವನ್ನು, ಪಾತ್ರೆಗಳನ್ನು ತೊಳೆ ನೀರು ಮತ್ತು ಆಹಾರ ತಯಾರಿಕೆಯ ಸಮಯದಲ್ಲಿ ಉಳಿದ ತ್ಯಾಜ್ಯವನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲಾಗುತ್ತಿದೆ.

    ಆಹಾರ ತಯಾರಿಕೆಗೆ ಬಳಸುವ ಸಾಮಗ್ರಿಗಳು ಆಹಾರ ಸುರಕ್ಷತಾ ಪ್ರಮಾಣ ಪತ್ರ ಹೊಂದಿರುವ ಸರಬರಾಜುದಾರರ ಮೂಲಕವೇ ಖರೀದಿಸುತ್ತಿದ್ದು, ಯಾವುದೇ ಒಡೆದ ಆಹಾರ ಪ್ಯಾಕೆಟ್ ಗಳನ್ನು ಬಳಸುತ್ತಿಲ್ಲ, ಸರಬರಾಜು ಆದ ಆಹಾರ ಪದಾರ್ಥಗಳ ಅವಧಿ ಮೀರುವ ದಿನಾಂಕವನ್ನು ಪರಿಶೀಲಿಸುತ್ತಿದ್ದು, ಆ ಪದಾರ್ಥಗಳನ್ನು ಉಷ್ಣಾಂಶಕ್ಕೆ ತಕ್ಕಂತೆ ಕೆಡದಂತೆ ಇಡಲು ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದು, ಎಲ್ಲಾ ಪದಾರ್ಥಗಳನ್ನು ನಿರ್ದಿಷ್ಠ ಸ್ಥಳದಲ್ಲಿ ಶೇಖರಿಸಲಾಗುತ್ತಿದೆ. ಸೂಕ್ತ ಶೈತ್ಯಾಗಾರ ಮತ್ತು ಉಷ್ಣಾಗಾರಗಳ ಸೌಲಭ್ಯಗಳನ್ನು ಹೊಂದಿದ್ದು, ಆಹಾರ ಸರಬರಾಜು ವಾಹನ ಸಹ ಸ್ವಚ್ಚತೆಯಿಂದ ಕೂಡಿರುವಂತೆ ನೋಡಿಕೊಳ್ಳಲಾಗುತ್ತಿದೆ.

    ಆಹಾರ ಬಡಿಸುವ ಪಾತ್ರೆಗಳನ್ನು ಸಹ ಸ್ವಚ್ಛವಾಗಿರುವಂತೆ ನೋಡಿಕೊಂಡಿದ್ದು, ಆಹಾರ ನೀಡುವ ಸ್ಥಳದಲ್ಲಿ ಗರಿಷ್ಠ ಸ್ವಚ್ಛತೆಗೆ ಆದ್ಯತೆ ನೀಡಿದೆ. ಈ ಪ್ರದೇಶವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಈ ಸ್ಥಳಕ್ಕೆ ಯಾವುದೇ ಕ್ರಿಮಿ ಕೀಟಗಳು ಬಾರದಂತೆ ಮತ್ತು ಬೆಳವಣಿಗೆಯಾಗದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ನಿತ್ಯವೂ ಕೈಗೊಳ್ಳಲಾಗುತ್ತಿದೆ. ದೇವಾಲಯದಲ್ಲಿ ಆಹಾರ ಬಡಿಸುವವರಿಗೂ ಸಹ ಎಲ್ಲಾ ರೀತಿಯ ತರಬೇತಿ ನೀಡಿದ್ದು, ಸ್ವಚ್ಛತಯನ್ನು ಕಾಪಾಡಿಕೊಂಡು ಆಹಾರ ಬಡಿಸುವಂತೆ ನಿರ್ದೇಶನಗಳನ್ನು ನೀಡಿದ್ದು, ಅನಾರೋಗ್ಯ ಲಕ್ಷಣಗಳಿರುವ ಸಿಬ್ಬಂದಿಗಳಿಗೆ , ಆಹಾರ ತಯಾರಿಕಾ ಕೊಠಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದ್ದು, , ಈ ಎಲ್ಲಾ ಅಂಶಗಳ ಬಗ್ಗೆ ನಿರಂತರ ಪರಿಶೀಲನೆ ಸಹ ನಡೆಸಲಾಗುತ್ತಿದೆ. ಒಂದು ಬಾರಿ ಮಾಡಿದ ಆಹಾರ ಉಳಿದರೆ ಅದನ್ನು ಮರು ಬಳಕೆ ಮಾಡದೇ ಅದನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುತ್ತಿದ್ದು, ಒಮ್ಮೆ ಕರಿದ ಎಣ್ಣೆಯನ್ನೂ ಸಹ ಮರು ಬಳಕೆ ಮಾಡುವುದಿಲ್ಲ. ಸಿಬ್ಬಂದಿಗಳಿಗೂ ಆಹಾರ ಸುರಕ್ಷತೆಯನ್ನೂ ಕಾಪಾಡುವ ಕುರಿತಂತೆ ತರಬೇತಿಯನ್ನೂ ಸಹ ನೀಡಲಾಗಿದೆ.

    Click here

    Click here

    Click here

    Call us

    Call us

    ಈ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಕೊಲ್ಲೂರು ಶ್ರೀ ಮೂಕಾಂಬಿಕ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅತ್ಯಂತ ಪರಿಶುದ್ದ, ಸುರಕ್ಷಿತ ಮತ್ತು ಗುಣಮಟ್ಟದ ಭೋಜನ ಪ್ರಸಾದವÀನ್ನು ನೀಡಲಾಗುತ್ತಿದ್ದು, ಭಾರತ ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪ್ರಮಾಣಪತ್ರವನ್ನು ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.