Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಡ ವಿಪ್ರ ಸೇವಾ ಸಹಕಾರಿ ಸಂಘದ ಕಾರ್ಯಾಲಯ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾಡ ವಿಪ್ರ ಸೇವಾ ಸಹಕಾರಿ ಸಂಘದ ಕಾರ್ಯಾಲಯ ಉದ್ಘಾಟನೆ

    Updated:26/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬೈಂದೂರು ಪರಿಸರದಲ್ಲಿ ಬ್ರಾಹ್ಮಣರು ಜಾತಿ ಪರಿಗಣನೆಯಲ್ಲಿ ಅಲ್ಪ ಸಂಖ್ಯಾತರು. ಆರ್ಥಿಕವಾಗಿಯೂ ದುರ್ಬಲರು. ಅವರ ಆರ್ಥಿಕ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ನಾಡ ಕೇಂದ್ರಿತವಾಗಿ ವಿಪ್ರ ಸೇವಾ ಸಹಕಾರಿ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ. ವಿನಾಯಕ ರಾವ್ ಹೇಳಿದರು.

    Click Here

    Call us

    Click Here

    ನಾಡ ಗುಡ್ಡೆಯಂಗಡಿಯ ಬಡಾಕೆರೆ ಮಾರ್ಗದಲ್ಲಿರುವ ಸ್ಪೂರ್ತಿ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ನಡೆದ ಸಂಘದ ಕಾರ್ಯಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ತಾಲೂಕು ವ್ಯಾಪ್ತಿಯ ಈ ಸಂಘಕ್ಕೆ ಎಲ್ಲ ವಿಪ್ರರೂ ಸದಸ್ಯರಾಗಬೇಕು. ಸಾಧ್ಯವಾದವರು ಠೇವಣಿ ನೀಡುವುದರ ಜತೆಗೆ ಅನ್ಯ ಸಮುದಾಯದವರಿಂದಲೂ ಠೇವಣಿ ಸಂಗ್ರಹಿಸುವ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಅವರು ವಿಂತಿಸಿದರು.

    ನಿವೃತ್ತ ಶಿಕ್ಷಕ ಪಿ. ರಾಮಚಂದ್ರಯ್ಯ ಸಂಘದ ಕಚೇರಿಯನ್ನು ಉದ್ಘಾಟಿಸಿದರು. ನಾಗೇಶ ಹೆಬ್ಬಾರ್ ಪಡುಕೋಣೆ ಷೇರು ಪತ್ರ ವಿತರಿಸಿದರು. ಹೊರ್ಣಿ ಪದ್ಮನಾಭ ಹೆಬ್ಬಾರ್ ಠೇವಳಿ ಪತ್ರ ಬಿಡುಗಡೆಗೊಳಿಸಿದರು. ಮರವಂತೆ ವಲಯ ದ್ರಾವಿಡ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷ ಪ್ರಕಾಶ ಹೆಬ್ಬಾರ್ ಗುಳ್ಕೋಣ್, ತಾಲೂಕು ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷ ಅನಂತಪದ್ಮನಾಭ ಬಾಯಿರಿ, ಕಾರ್ಯದರ್ಶಿ ರತ್ನಾಕರ ಉಡುಪ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಶುಭ ಹಾರೈಸಿದರು.

    ಶಿಕ್ಷಕ ಸಿ. ಕೃಷ್ಣ ಹೆಬ್ಬಾರ್ ಸ್ವಾಗತಿಸಿದರು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಹಾಯಕ ಮಹಾ ಪ್ರಬಂಧಕ ಎಂ. ಮೋಹನದಾಸ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀನಾಥ ಪುರಾಣಿಕ್ ವಂದಿಸಿದರು. ಸಂತೋಷ್ ಹೆಬ್ಬಾರ್ ನಿರೂಪಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಂ ರತ್ನಾಕರ ಹೆಬ್ಬಾರ್, ವಿಶ್ವನಾಥ ನಾವಡ, ಶ್ರೀಕಾಂತ ಹೆಬ್ಬಾರ್, ವಿಷ್ಣುಮೂರ್ತಿ ಐತಾಳ್, ನಾರಾಯಣ ಹೆಬ್ಬಾರ್, ರಾಘವೇಂದ್ರ ಹೆಬ್ಬಾರ್, ಚಂದ್ರಶೇಖರ ಭಟ್, ನಾಗರಾಜ ಹೆಬ್ಬಾರ್, ಮಂಜುಳಾ ಹೆಬ್ಬಾರ್, ಶ್ರೀಲತಾ ಪುರಾಣಿಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ವಿಘ್ನೇಶ ರಾವ್ ಇದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಸಂಪನ್ನ

    25/08/2026

    ಚೇತನಾ ಬಾಲಕೃಷ್ಣ ಮದ್ದೋಡಿ ಅವರಿಗೆ ಮಾಹೆಯಿಂದ ಡಾಕ್ಟರೇಟ್ ಪದವಿ ಪ್ರದಾನ

    25/08/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    25/08/2026
    Leave A Reply Cancel Reply

    eighteen + four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಸಂಪನ್ನ
    • ಚೇತನಾ ಬಾಲಕೃಷ್ಣ ಮದ್ದೋಡಿ ಅವರಿಗೆ ಮಾಹೆಯಿಂದ ಡಾಕ್ಟರೇಟ್ ಪದವಿ ಪ್ರದಾನ
    • ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನ ಎನ್‌ಸಿಸಿ ಕೆಡೆಟ್‌ಗಳ ಪರಿಚಯ ಕಾರ್ಯಕ್ರಮ
    • ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.