Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ: ಮೇ.3ರಂದು ರೈತಸಿರಿ ಅಗ್ರಿ ಮಾಲ್ ಶಂಕುಸ್ಥಾಪನೆ, ರೈತಸಿರಿ ಸಮಾವೇಶ
    Uncategorized

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ: ಮೇ.3ರಂದು ರೈತಸಿರಿ ಅಗ್ರಿ ಮಾಲ್ ಶಂಕುಸ್ಥಾಪನೆ, ರೈತಸಿರಿ ಸಮಾವೇಶ

    Updated:01/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ರಾಜ್ಯದ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಪ್ರಥಮ ಭಾರಿಗೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ರೈತಸಿರಿ ಅಗ್ರಿ ಮಾಲ್ ಎಂ.ಎಸ್.ಸಿ ಯೋಜನೆಯ ಶಿಲಾನ್ಯಾಸ ಹಾಗೂ ರೈತಸಿರಿ ಸಮಾವೇಶ ಮೇ.3ರ ಮಂಗಳವಾರ ಪೂರ್ವಾಹ್ನ 10ರಿಂದ ಕಂಬದಕೋಣೆ ಪಿಯು ಕಾಲೇಜು ಮೈದಾನದಲ್ಲಿ ಜರುಗಲಿದೆ.

    Click Here

    Call us

    Click Here

    ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಡಿ ಆರಂಭಗೊಳ್ಳಲಿರುವ ಅಗ್ರಿಮಾಲ್‌ನಲ್ಲಿ ನಿತ್ಯ ಕೃಷಿ ಸಂತೆ, ಕೃಷಿ ಮತ್ತು ಕೃಷಿಕರ ಅಭ್ಯುದಯಕ್ಕಾಗಿ ಕೃಷಿ ಉತ್ಪನ್ನ ಖರೀದಿ, ಮಾರುಕಟ್ಟೆ ಮತ್ತು ಕೊಲ್ಡ್ ಸ್ಟೊರೇಜ್ ವ್ಯವಸ್ಥೆಯನ್ನು ಒಳಗೊಂಡಿರುವ ಬೃಹತ್ ಗೋದಾಮು ಹಾಗೂ ದಾಸ್ತಾನು ಮೊದಲಾದ ಯೋಜನೆಯನ್ನು ರೂಪಿಸಲಾಗಿದೆ. ಸಂಘದ ಕಾರ್ಯವ್ಯಾಪ್ತಿಯಲ್ಲಿನ ಅಡಿಕೆ, ತೆಂಗು, ಭತ್ತ, ನೆಲಗಡಲೆ ಹಾಗೂ ಕಾಡುತ್ಪತ್ತಿ ಮೊದಲಾದ ಬೆಳೆಗಳನ್ನು ಖರೀದಿಸಿ, ದಾಸ್ತಾನು ಮಾಡಿ, ಉತ್ತಮ ದರ ಹಾಗೂ ಮಾರುಕಟ್ಟೆ ಸಂಘದಿಂದ ಒದಗಿಸುವ ದೂರದೃಷ್ಠಿಯನ್ನು ಹೊಂದಲಾಗಿದೆ. ರೈತಸಿರಿಯಿಂದಾಗಿ ಸಂಘದ ಕಾರ್ಯವ್ಯಾಪ್ತಿಯ ನೂರಾರು ಯುವಕ, ಯುವತಿಯರಿಗೆ ಉದ್ಯೋಗಾವಕಾಶ ದೊರೆಯಲಿದೆ.

    ಅಂದಾಜು ರೂ. 7.65ಕೋಟಿ ವೆಚ್ಚದಲ್ಲಿ ರೈತರಿಸಿ ಕಟ್ಟಡ ನಿರ್ಮಾಣ, ರೂ. 3ಕೋಟಿ ವೆಚ್ಚದ ಒಳಾಂಗಣ ವಿನ್ಯಾಸ ಹಾಗೂ ರೂ. 4 ಕೋಟಿ ದುಡಿಯುವ ಬಂಡವಾಳದೊಂದಿಗೆ ಒಟ್ಟು ರೂ. 15ಕೋಟಿ ವಿನಿಯೋಗದ ನಿರ್ಮಾಣವಾಗಲಿರುವ ಬೃಹತ್ ಪ್ರಮಾಣದ ಒಂದೇ ನಿವೇಶನದಲ್ಲಿ ಬಹುಮಹಡಿ ಕಟ್ಟಡದಲ್ಲಿ ರೈತರಿಗಾಗಿ ಎಂ.ಎಸ್.ಸಿ. ಯೋಜನೆ ರೂಪಿಸಲಾಗಿದೆ.

    ಅಗ್ರಿಮಾಲ್‌ನಲ್ಲಿ ವಿವಿಧ ಬಗೆಯ ಕೃಷಿ ಸರ್ವಿಸ್ ಸೆಂಟರ್‌ಗಳು, ಸೂಪರ್ ಮಾರ್ಕೇಟ್‌ಗಳು, ಬಡಗಿ, ಕಮ್ಮಾರಿಕೆ, ಗ್ಯಾರೇಜ್, ವೆಲ್ಡಿಂಗ್ ಶಾಪ್, ಇಲೆಕ್ಟ್ರೀಕಲ್ ಸರ್ವಿಸ್, ಫಾರ್ಮರ್ ಕ್ಲಬ್, ಕೃಷಿಕ ತರಬೇತಿ ಕೇಂದ್ರ, ಕೃಷಿ ಯಂತ್ರೋಪಕರಣಗಳ ಮಳಿಗೆ, ಉಪಹಾರ ಕೇಂದ್ರ, ಮೀನುಗಾರಿಕೆಗೆ ಅಗತ್ಯ ಉಪಕರಣಗಳು ಅಲ್ಲದೇ ಸಭಾಂಗಣ, ಎಸ್ಕ್ಯುಲೇಟರ್, ಲಿಫ್ಟ್ ಹಾಗೂ ಸುತ್ತಲೂ ವಿಶಾಲವಾದ ಪಾರ್ಕಿಂಗ್ ಮಾಡಲು ರ‍್ಯಾಂಪ್‌ನ ವ್ಯವಸ್ಥೆ ಇದೆ. ಮಳಿಗೆಯು ಒಟ್ಟು 23,000 ಚದರ ಅಡಿ ವಿಸ್ತೀರ್ಣ ಮತ್ತು 8,000 ಚದರ ಅಡಿ ಟೆರೇಸ್ ಇದ್ದು ವಿಶೇಷ ವಿನ್ಯಾಸವನ್ನು ಒಳಗೊಂಡಿರುತ್ತದೆ.

    ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಕಂಬದಕೋಣೆ ಸುಮಾರು ೬೫ಸೆಂಟ್ಸ್ ನಿವೇಶನ ಖರೀದಿ ಮಾಡಲಾಗಿದೆ. ಅದರೊಂದಿಗೆ ರಸಾಯಿನಿಕ ಗೊಬ್ಬರ, ಕೃಷಿ ಉಪಕರಣಗಳ ಮಾರಾಟ ಮತ್ತು ಬಾಡಿಗೆ, ಪಡಿತರ ಸಾಮಾಗ್ರಿ ವಿತರಣೆ, ಮೀನುಗಾರಿಕಾ ಸೀಮೆಎಣ್ಣೆ ವಿತರಣೆ, ಪ್ರಧಾನ ಮಂತ್ರಿ ಯೋಜನೆಯ ಡಿಜಿಟಲ್ ಸೇವಾ ಸಿಂಧೂ (ಸಿ.ಎಸ್.ಸಿ) ಹಾಗೂ ಇನ್ನಿತರ ಸೇವಾ ಸೌಲಭ್ಯಗಳು ಸದಸ್ಯರಿಗೆ, ಗ್ರಾಹಕರಿಗೆ ಒದಗಿಸುತ್ತಿದೆ.

    Click here

    Click here

    Click here

    Call us

    Call us

    ಗೌರಿಗದ್ದೆ ದತ್ತ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಅವರು ಶಿಲನ್ಯಾಸ ನೆರವೇರಿಸಲಿದ್ದು, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈ ವೇಳೆ ರೈತರಿಸಿ ಸಮಾವೇಶ ಉದ್ಘಾಟಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ರಿಷಬ್ ಶೆಟ್ಟಿ ರೈತಸಿರಿ ಲಾಂಛನ ಬಿಡುಗಡೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ. ಅಪ್ಪಣ್ಣ ಹೆಗ್ಡೆ, ಕೆ. ಲಕ್ಷ್ಮೀನಾರಾಯಣ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜು ಪೂಜಾರಿ, ಎಂ. ಮಹೇಶ್ ಹೆಗ್ಡೆ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ಲಾವಣ್ಯ ಕೆ.ಆರ್., ಕೆರ್ಗಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಮಾದವ ದೇವಾಡಿಗ, ಕಂಬದಕೋಣೆ ಗ್ರಾ.ಪಂ ಅಧ್ಯಕ್ಷ ಸುಕೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

    ಅಂದು ಬೆಳಿಗ್ಗೆ 9ರಿಂದ ಕಲರ‍್ಸ್ ಕನ್ನಡದ ಎದೆ ತುಂಬಿ ಹಾಡುವೆನು ಖ್ಯಾತಿಯ ಕಲಾವಿದರಿಂದ ಸಂಗೀತ ಸ್ವರ ಸಂಭ್ರಮ ಜರುಗಲಿದೆ.

    Khambadakone Raithara Seva Sahakari Sangha R. Uppunda
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    eight − 6 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.