ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರ ಸಾವು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ
.25: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ.30ರಂದು ಜರುಗಿದ್ದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗುತ್ತಿಗೆದಾರ, ತೆಕ್ಕಟ್ಟೆ ಬೆಟ್ಟು ನಿವಾಸಿ ಸುರೇಂದ್ರ ದೇವಾಡಿಗ (43) ಮೃತಪಟ್ಟಿದ್ದಾರೆ.

Call us

Click Here

Click here

Click Here

Call us

Visit Now

Click here

ಅಪಘಾತದಲ್ಲಿ ತಲೆ ಹಾಗೂ ಇತರ ಭಾಗಗಳಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್‌ ಕೂಡ ಮಾಡಲಾಗಿತ್ತು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಮತ್ತೆ ತಲೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುರೇಂದ್ರ ದೇವಾಡಿಗ ತೆಕ್ಕಟ್ಟೆ ಭಾಗದಲ್ಲಿ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದು ಈ ಭಾಗದಲ್ಲಿ ಜನಪ್ರಿಯರಾಗಿದ್ದರು. ಮೃತರು ಮಡದಿ, ಪೋಷಕರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

seven + eight =