Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ್ಯೂಯಾರ್ಕ್‌ನ ಟೈಮ್ಸ್ ಸ್ಪೇರ್‌ನಲ್ಲಿ ಸತೀಶ್ ಆಚಾರ್ಯ ಅವರ ಕಲಾಕೃತಿ ಪ್ರದರ್ಶನ
    ಊರ್ಮನೆ ಸಮಾಚಾರ

    ನ್ಯೂಯಾರ್ಕ್‌ನ ಟೈಮ್ಸ್ ಸ್ಪೇರ್‌ನಲ್ಲಿ ಸತೀಶ್ ಆಚಾರ್ಯ ಅವರ ಕಲಾಕೃತಿ ಪ್ರದರ್ಶನ

    Updated:25/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಅಮೆರಿಕದ ನ್ಯೂಯಾರ್ಕ್ ನಗರದ ಪ್ರತಿಷ್ಠಿತ ಟೈಮ್ಸ್ ಸ್ಪೇರ್‌ನಲ್ಲಿ ಆಯೋಜಿಸಿದ ನಾಲ್ಕು ದಿನಗಳ ಎನ್ಎಫ್ಟಿ ಕಲಾಕೃತಿಗಳ ಪ್ರದರ್ಶನದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ ಆಚಾರ‍್ಯ ಅವರ ಕಲಾಕೃತಿ ಪ್ರದರ್ಶನಗೊಂಡಿದೆ.

    Click Here

    Call us

    Click Here

    ಅಮೆರಿಕದ ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿನ ಕಲಾವಿದರಲ್ಲಿ ಸಮನ್ವಯ ಸಾಧಿಸಿ ಅವರನ್ನು ಒಗ್ಗೂಡಿಸುವ ಸದುದ್ದೇಶದಿಂದ ಕಲಾ ಪ್ರದರ್ಶನ ಏರ್ಪಡಿಸಿದ್ದು, ವಿವಿಧ ದೇಶಗಳ ಸಾವಿರಾರು ಕಲಾವಿದರು ಭಾಗವಹಿಸಿದ್ದರು. ಅವುಗಳಲ್ಲಿ 200 ಕಲಾಕೃತಿಗಳನ್ನು ಆಯ್ಕೆ ಮಾಡಿಕೊಂಡು ಟೈಮ್ಸ್ ಸ್ಟೋರ್ ಬಿಲ್ ಬೋರ್ಡ್ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸತೀಶ್ ಆಚಾರ‍್ಯ ಅವರ ‘ಐ ಕೇರ್’ ಶೀರ್ಷಿಕೆಯ ಎನ್ಎಫ್ಟಿ ಡಿಜಿಟಲ್ ಕಲಾಕೃತಿಯೂ ಒಂದಾಗಿತ್ತು.

    ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಆರ್ಟ್ಗೆ ಒತ್ತು ನೀಡಲಾಗಿದ್ದು, ತಂತ್ರಜ್ಞಾನದ ಬೆಂಬಲದೊಂದಿಗೆ ಅಧುನಿಕತೆಯತ್ತ ದಾಪುಗಾಲು ಹಾಕುತ್ತಿರುವ ಪ್ರಸ್ತುತ ಕಾಲ ಘಟ್ಟದಲ್ಲಿ ಮಾನವನಗಿಂತ ಯಂತ್ರವೇ ಹೆಚ್ಚು ಮಾನವೀಯತೆ ತೋರಿದರೂ ಆಶ್ಚರ್ಯವಿಲ್ಲ ಎನ್ನುವ ಸಂದೇಶ ಹೊತ್ತಿರುವ ಸತೀಶ್ ಆಚಾರ‍್ಯ ಅವರ ‘ಐ ಕೇರ್’ ಶೀರ್ಷಿಕೆಯ ಎನ್ಎಫ್ಟಿ ಡಿಜಿಟಲ್ ಕಲಾಕೃತಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

    ಕಲೆಯೊಂದಿಗಿನ ಒಡನಾಟ ಹವ್ಯಾಸವಾಗಿ, ಹವ್ಯಾಸ ವೃತ್ತಿಗೆ ತಿರುಗಿ, ಆ ಮೂಲಕ ವಿಶ್ವಖ್ಯಾತಿ ಗಳಿಸಿದ ಅಪ್ಪಟ ಕುಂದಾಪುರದ ಪ್ರತಿಭೆ ಸತೀಶ್ ಆಚಾರ‍್ಯ. ದೇಶದ ಪ್ರಮುಖ ಪತ್ರಿಕೆ ಹಾಗೂ ಪೋರ್ಟೆಲ್ಗಳಲ್ಲಿ ಅವರ ವ್ಯಂಗ್ಯಚಿಂತ್ರಗಳು ಪ್ರಕಟವಾಗುತ್ತಿರುವುದಲ್ಲದೇ, ವಿಶ್ವದಾದ್ಯಂತ ಅವರ ಕಾರ್ಟೂನುಗಳಿಗೆ ಅವರದ್ದೇ ಆದ ಅಭಿಮಾನಿ ವರ್ಗವಿದೆ. ಮುಂಬೈನಲ್ಲಿ ಬದುಕಿನ ರೇಸ್ ಆರಂಭಿಸಿದ್ದರು. 2015ರಲ್ಲಿ ಪೋರ್ಬ್ಸ್ ಇಂಡಿಯಾ ಗುರುತಿಸಿದ 24 ಅಗ್ರಗಣ್ಯರಲ್ಲಿ ಸತೀಶ್ ಆಚಾರ‍್ಯ ಓರ್ವರಾಗಿದ್ದರು. ತಮ್ಮ ಹುಟ್ಟೂರನ್ನೇ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ಮೊನಚಾದ ರೇಖೆಗಳ ಮೂಲಕ ಆಳುವ ಸರಕಾರಗಳಿಗೆ ಚಾಟಿ ಬೀಸುವ ಛಾತಿಯನ್ನು ಅವರು ಮುಂದುವರಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.